LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIGG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘ಕರ್ತವ್ಯ ಆ್ಯಪ್’ ನಲ್ಲಿ ಬೆಳಗ್ಗೆ 10 ಗಂಟೆಯೊಳಗೆ ಹಾಜರಾತಿ ದಾಖಲಿಸುವುದು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿರುವ ಸರ್ಕಾರ, HRMS-ESS ಮತ್ತು ಕರ್ತವ್ಯ (KAMS) ಆ್ಯಪ್ ಮೂಲಕ ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಹಾಜರಾತಿ ದಾಖಲಿಸುವುದನ್ನು ಕಡ್ಡಾಯಗೊಳಿಸಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗದಿತ ಸಮಯದೊಳಗೆ ಆ್ಯಪ್‌ನಲ್ಲಿ ಹಾಜರಾತಿ ದಾಖಲಿಸಬೇಕು ಎಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದ್ದು, ನಿಯಮ ಪಾಲನೆಗೆ ಇಲಾಖಾ ಮುಖ್ಯಸ್ಥರು (HODs) ಮತ್ತು ಡಿಡಿಒಗಳು (DDOs) ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಹಾಗೂ ರಾಜ್ಯ ಸರ್ಕಾರವು HRMS-ESS ಹಾಗೂ ಕರ್ನಾಟಕ ಅಟೆಂಡೆನ್ಸ್ ಮಾನಿಟರಿಂಗ್ ಸಿಸ್ಟಮ್ (KAMS) ಆ್ಯಪ್‌ಗಳಲ್ಲಿ ಕಚೇರಿಗಳ ಭೌಗೋಳಿಕ ನಿರ್ದೇಶಾಂಕಗಳನ್ನು (Geo Coordinates) ಕಡ್ಡಾಯವಾಗಿ ನಮೂದಿಸಲು ಎಲ್ಲಾ ಸರ್ಕಾರಿ ನೌಕರರಿಗೆ ಸೂಚಿಸಿದೆ. ಈ ಕುರಿತು ಹಣಕಾಸು ಇಲಾಖೆ (HRMS-2.0 ನಿರ್ದೇಶನಾಲಯ) ಮಹತ್ವದ ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಸುತ್ತೋಲೆ ಸಂಖ್ಯೆ FD/HRMS H2/OL/2025/250/132 ದಿನಾಂಕ 10-06-2026 ರ ಪ್ರಕಾರ, 05-06-2026 ರಂದು ಹೊರಡಿಸಿದ್ದ ಹಿಂದಿನ ಸೂಚನೆಗೆ ಅನುಗುಣವಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಇಲಾಖೆಗಳು ತಮ್ಮ ಕಚೇರಿಗಳ ಸ್ಥಳ ಮಾಹಿತಿಯನ್ನು HRMS ವ್ಯವಸ್ಥೆಯಲ್ಲಿ ದಾಖಲಿಸಬೇಕು ಎಂದು ತಿಳಿಸಲಾಗಿದೆ.

ಏನು ಮಾಡಬೇಕು?

  • Group ‘B’ ಹಾಗೂ ಅದಕ್ಕಿಂತ ಮೇಲಿನ ಹುದ್ದೆಯ ಅಧಿಕಾರಿಗಳು HRMS-2.0 ವೆಬ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ತಮ್ಮ ಕಚೇರಿಯ ಭೌಗೋಳಿಕ ನಿರ್ದೇಶಾಂಕಗಳನ್ನು HRMS-ESS App ಮೂಲಕ ನಮೂದಿಸಬೇಕು.
  • HRMS-ESS App ನಲ್ಲಿ ನಮೂದಿಸಿದ ನಿರ್ದೇಶಾಂಕಗಳನ್ನು HRMS-2.0 ವೆಬ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಪರಿಶೀಲಿಸಿ ದೃಢೀಕರಿಸಬೇಕು.
  • ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯೂ KAMS App ಮೂಲಕ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು.

ಇಲಾಖಾ ಮುಖ್ಯಸ್ಥರು ಮತ್ತು DDOಗಳಿಗೆ ಸೂಚನೆ

ಸರ್ಕಾರವು ಎಲ್ಲಾ ಇಲಾಖೆಗಳ ಮುಖ್ಯಸ್ಥರು (HODs) ಹಾಗೂ Drawing and Disbursing Officers (DDOs) ಅವರಿಗೆ ತಮ್ಮ ಅಧೀನದಲ್ಲಿರುವ ನೌಕರರು ಈ ಪ್ರಕ್ರಿಯೆಯನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ತಾಂತ್ರಿಕ ಸಹಾಯಕ್ಕೆ ಸಂಪರ್ಕ

KAMS App ನಲ್ಲಿ ಹಾಜರಾತಿ ದಾಖಲಿಸುವ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದರೆ:

ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು HRMS-2.0 ಮತ್ತು KAMS App ಸಂಬಂಧಿತ ಎಲ್ಲಾ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ನವೀಕರಿಸಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್