LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BIGG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ ; ‘ಕರ್ತವ್ಯ ಆ್ಯಪ್’ ನಲ್ಲಿ ಬೆಳಗ್ಗೆ 10 ಗಂಟೆಯೊಳಗೆ ಹಾಜರಾತಿ ದಾಖಲಿಸುವುದು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಹಾಜರಾತಿ ವ್ಯವಸ್ಥೆಯನ್ನು ಮತ್ತಷ್ಟು ಕಟ್ಟುನಿಟ್ಟುಗೊಳಿಸಿರುವ ಸರ್ಕಾರ, HRMS-ESS ಮತ್ತು ಕರ್ತವ್ಯ (KAMS) ಆ್ಯಪ್ ಮೂಲಕ ಪ್ರತಿದಿನ ಬೆಳಗ್ಗೆ 10 ಗಂಟೆಯೊಳಗೆ ಹಾಜರಾತಿ ದಾಖಲಿಸುವುದನ್ನು ಕಡ್ಡಾಯಗೊಳಿಸಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಗದಿತ ಸಮಯದೊಳಗೆ ಆ್ಯಪ್‌ನಲ್ಲಿ ಹಾಜರಾತಿ ದಾಖಲಿಸಬೇಕು ಎಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದ್ದು, ನಿಯಮ ಪಾಲನೆಗೆ ಇಲಾಖಾ ಮುಖ್ಯಸ್ಥರು (HODs) ಮತ್ತು ಡಿಡಿಒಗಳು (DDOs) ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ಹಾಗೂ ರಾಜ್ಯ ಸರ್ಕಾರವು HRMS-ESS ಹಾಗೂ ಕರ್ನಾಟಕ ಅಟೆಂಡೆನ್ಸ್ ಮಾನಿಟರಿಂಗ್ ಸಿಸ್ಟಮ್ (KAMS) ಆ್ಯಪ್‌ಗಳಲ್ಲಿ ಕಚೇರಿಗಳ ಭೌಗೋಳಿಕ ನಿರ್ದೇಶಾಂಕಗಳನ್ನು (Geo Coordinates) ಕಡ್ಡಾಯವಾಗಿ ನಮೂದಿಸಲು ಎಲ್ಲಾ ಸರ್ಕಾರಿ ನೌಕರರಿಗೆ ಸೂಚಿಸಿದೆ. ಈ ಕುರಿತು ಹಣಕಾಸು ಇಲಾಖೆ (HRMS-2.0 ನಿರ್ದೇಶನಾಲಯ) ಮಹತ್ವದ ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಸುತ್ತೋಲೆ ಸಂಖ್ಯೆ FD/HRMS H2/OL/2025/250/132 ದಿನಾಂಕ 10-06-2026 ರ ಪ್ರಕಾರ, 05-06-2026 ರಂದು ಹೊರಡಿಸಿದ್ದ ಹಿಂದಿನ ಸೂಚನೆಗೆ ಅನುಗುಣವಾಗಿ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಮತ್ತು ಇಲಾಖೆಗಳು ತಮ್ಮ ಕಚೇರಿಗಳ ಸ್ಥಳ ಮಾಹಿತಿಯನ್ನು HRMS ವ್ಯವಸ್ಥೆಯಲ್ಲಿ ದಾಖಲಿಸಬೇಕು ಎಂದು ತಿಳಿಸಲಾಗಿದೆ.

ಏನು ಮಾಡಬೇಕು?

  • Group ‘B’ ಹಾಗೂ ಅದಕ್ಕಿಂತ ಮೇಲಿನ ಹುದ್ದೆಯ ಅಧಿಕಾರಿಗಳು HRMS-2.0 ವೆಬ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ತಮ್ಮ ಕಚೇರಿಯ ಭೌಗೋಳಿಕ ನಿರ್ದೇಶಾಂಕಗಳನ್ನು HRMS-ESS App ಮೂಲಕ ನಮೂದಿಸಬೇಕು.
  • HRMS-ESS App ನಲ್ಲಿ ನಮೂದಿಸಿದ ನಿರ್ದೇಶಾಂಕಗಳನ್ನು HRMS-2.0 ವೆಬ್ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಪರಿಶೀಲಿಸಿ ದೃಢೀಕರಿಸಬೇಕು.
  • ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಯೂ KAMS App ಮೂಲಕ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು.

ಇಲಾಖಾ ಮುಖ್ಯಸ್ಥರು ಮತ್ತು DDOಗಳಿಗೆ ಸೂಚನೆ

ಸರ್ಕಾರವು ಎಲ್ಲಾ ಇಲಾಖೆಗಳ ಮುಖ್ಯಸ್ಥರು (HODs) ಹಾಗೂ Drawing and Disbursing Officers (DDOs) ಅವರಿಗೆ ತಮ್ಮ ಅಧೀನದಲ್ಲಿರುವ ನೌಕರರು ಈ ಪ್ರಕ್ರಿಯೆಯನ್ನು ಸಮಯಕ್ಕೆ ಪೂರ್ಣಗೊಳಿಸುವಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ತಾಂತ್ರಿಕ ಸಹಾಯಕ್ಕೆ ಸಂಪರ್ಕ

KAMS App ನಲ್ಲಿ ಹಾಜರಾತಿ ದಾಖಲಿಸುವ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದರೆ:

ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳು HRMS-2.0 ಮತ್ತು KAMS App ಸಂಬಂಧಿತ ಎಲ್ಲಾ ಮಾಹಿತಿಯನ್ನು ನಿಗದಿತ ಅವಧಿಯೊಳಗೆ ನವೀಕರಿಸಿ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ