LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಧಾನಿಯನ್ನು ಡ್ರಗ್ಸ್, ಹಿಂಸಾಚಾರ, ಅಪರಾಧಗಳ ಅಡ್ಡೆಯನ್ನಾಗಿ ಮಾಡಿದ್ದೇ ಸರ್ಕಾರದ ಸಾಧನೆ: ಇದೇನಾ ಡಿ.ಕೆ.ಶಿವಕುಮಾರ್ ಅವರ “Brand Bengaluru”? ಆರ್.ಅಶೋಕ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬ್ರ್ಯಾಂಡ್ ಬೆಂಗಳೂರು ವಿಚಾರವಾಗಿ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ರಾಜಧಾನಿಯನ್ನು ಸ್ಟಾರ್ಟ್‌ಅಪ್ ಹಬ್‌ನಿಂದ ಡ್ರಗ್ಸ್, ಹಿಂಸಾಚಾರ ಮತ್ತು ಅಪರಾಧಗಳ ಅಡ್ಡೆಯಾಗಿ ಮಾಡಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ ಎಂದು ಗುಡುಗಿದ್ದಾರೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವುದಕ್ಕೆ NCRB ಅಂಕಿ-ಅಂಶಗಳೇ ಸಾಕ್ಷಿ. 2021ರಲ್ಲಿ 15,277 ಇದ್ದ ಅಪರಾಧ ಪ್ರಕರಣಗಳು, 2024ರಲ್ಲಿ 31,223ಕ್ಕೆ ಏರಿಕೆ — ಅಂದರೆ ಕೇವಲ 4 ವರ್ಷಗಳಲ್ಲಿ ದ್ವಿಗುಣ!

2024ರಲ್ಲಿ ರಾಜ್ಯ ರಾಜಧಾನಿಯಲ್ಲಿ ದಾಖಲಾಗಿರುವುದು, 5,612 ಹಿಂಸಾತ್ಮಕ ಅಪರಾಧ ಪ್ರಕರಣಗಳು ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಭಾರಿ ಹೆಚ್ಚಳ. ಇದು ಅಭಿವೃದ್ಧಿಯ ಕರ್ನಾಟಕವಲ್ಲ… ಇದು ಕಾಂಗ್ರೆಸ್ ಆಡಳಿತದಲ್ಲಿ ಅಪರಾಧಿಗಳ ಸ್ವರ್ಗವಾಗಿ ಬದಲಾಗುತ್ತಿರುವ ಕರ್ನಾಟಕ!

ರಾಜ್ಯದ ಗೃಹ ಸಚಿವರಾದ ಡಾ.ಪರಮೇಶ್ವರ್ ಅವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಅಪರಾಧಗಳ ಬಗ್ಗೆ ಕೇಳಿದರೆ “ನನಗೆ ಗೊತ್ತಿಲ್ಲ” ಎನ್ನುವ ಉತ್ತರ ಮಾತ್ರ ಸಿಗಬಹುದು, ಇತ್ತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ “ಗ್ಯಾರೆಂಟಿ”ಗಳ ಜಾಹೀರಾತಿಗೆ ಹಾಗೂ ಕುರ್ಚಿ ಕಿತ್ತಾಟಕ್ಕೆ ಸಮಯ ಇದೆ. ಜನರ ಸುರಕ್ಷತೆ ಅವರಿಗೆ ಕೇವಲ ಆಯ್ಕೆ ಆಗಿರುವುದು ಕರ್ನಾಟಕದ ದುರಂತ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ಜಾಗತಿಕ ಹೂಡಿಕೆ, ತಂತ್ರಜ್ಞಾನ ಮತ್ತು ಉದ್ಯೋಗಗಳ ಕೇಂದ್ರವಾಗಬೇಕಿತ್ತು. ಆದರೆ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಇಂದು ಡ್ರಗ್ಸ್, ಗ್ಯಾಂಗ್‌ವಾರ್, ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಸೈಬರ್ ಕ್ರೈಮ್‌ಗಳ ರಾಜಧಾನಿಯಾಗಿ ಮಾರ್ಪಡುತ್ತಿದೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲವಾದ ಕಾಂಂಗ್ರೆಸ್ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ಯಾವುದೇ ನೈತಿಕತೆ ಉಳಿದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING : ಬ್ರಿಕ್ಸ್ ಸಭೆ : ದೆಹಲಿಯಲ್ಲಿ ರಷ್ಯಾ-ಇರಾನ್ ವಿದೇಶಾಂಗ ಸಚಿವರ ಜೊತೆ ಪ್ರಧಾನಿ ಮೋದಿ ಮಾತುಕತೆ..!BREAKING : ತಮಿಳುನಾಡಿನಲ್ಲಿ ‘ಮದ್ಯ’ ಖರೀದಿಸಲು ಇನ್ಮುಂದೆ 21 ವರ್ಷ ಕಡ್ಡಾಯ ; ಸಿಎಂ ದಳಪತಿ ವಿಜಯ್ ಆದೇಶSHOCKING : ಬಿರುಗಾಳಿ ಅಬ್ಬರಕ್ಕೆ ತಗಡಿನ ಶೀಟ್‌ ಸಮೇತ ಆಕಾಶಕ್ಕೆ ಹಾರಿದ ಯುವಕ ; ಭಯಾನಕ ವೀಡಿಯೋ ವೈರಲ್ |WATCH VIDEOBREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನಾಳೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರಹಿಜಾಬ್ ಧರಿಸಿ ಬಂದರೆ ರಾಜ್ಯದ ಎಲ್ಲಾ ಶಾಲಾ-ಕಾಲೇಜು ಕೇಸರಿಮಯವಾಗಲಿದೆ: ಮಾಜಿ ಸಚಿವ ಈಶ್ವರಪ್ಪ ಎಚ್ಚರಿಕೆBREAKING : ಮೇ 24 ರಂದು ನಡೆಯಬೇಕಿದ್ದ MBA, MCA ಪ್ರವೇಶ ಪರೀಕ್ಷೆ ಮುಂದೂಡಿಕೆ : KEA ಮಾಹಿತಿBIG NEWS: ಪ್ರಧಾನಿ ಮೋದಿ ಕರೆ ಬೆನ್ನಲ್ಲೇ ಬೈಕ್ ಏರಿ ವಿಧಾನಭವನಕ್ಕೆ ಆಗಮಿಸಿದ ಸಿಎಂ ದೇವೇಂದ್ರ ಫಡ್ನವಿಸ್ನೂತನ ಶಾಸಕರಾಗಿ ಉಮೇಶ್ ಮೇಟಿ, ಸಮರ್ಥ್ ಶಾಮನೂರು ಪ್ರಮಾಣವಚನ ಸ್ವೀಕಾರBREAKING : ಕರ್ನಾಟಕ ಸೇರಿದಂತೆ 16 ರಾಜ್ಯಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಚುನಾವಣಾ ಆಯೋಗ ಆದೇಶರೈತರೇ ಗಮನಿಸಿ : ಮೇ.17 ರ ಮಧ್ಯರಾತ್ರಿಯಿಂದ ಬೇಸಿಗೆ ಹಂಗಾಮಿನ ನೀರು ಬಂದ್