LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಟಿ ಕೋಟಿ ಸುರಿದು ‘Brand Bengaluru’ ಜಾಹೀರಾತು ಕೊಡುವ ನಿಮಗೆ, ಕಣ್ಣೆದುರೇ ಕಾಣುತ್ತಿರುವ ‘Smell Bengaluru’ ನಾಚಿಕೆ ತರುವುದಿಲ್ಲವೇ? ಕಾರಿನ ಗಾಜು ಇಳಿಸಿ, ಮೂಗು ಮುಚ್ಚಿಕೊಳ್ಳದೆ ಬೆಂಗಳೂರಿನ ರಸ್ತೆಯಲ್ಲಿ ಓಡಾಡಿ: ಸಿಎಂ ಡಿ.ಕೆ.ಶಿವಕುಮಾರ್ ಗೆ ಆರ್.ಅಶೋಕ್ ತರಾಟೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತ್ಯಾಜ್ಯ ನಿರ್ವಹಣಾ ಅವ್ಯವಸ್ಥೆ ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದು, ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು ನಗರದಲ್ಲಿ ಸರಿಯಾಗಿ ಕಸನಿರ್ವಹಣೆಯಾಗುತ್ತಿಲ್ಲ. ಬೀದಿ ಬೀದಿಗಳಲ್ಲಿ, ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿದ್ದು, ಕೊಳೆತು ನಾರುತ್ತಿದೆ. ಇಡೀ ನಗರದಲ್ಲಿ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಸ್ಥಿತಿ ಎದ್ದುರಾಗಿದೆ. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಆರ್.ಅಶೋಕ್ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “Brand Bengaluru” ಅಂತ ಬೊಗಳೆ ಬಿಟ್ಟು, ಇಡೀ ಸಿಲಿಕಾನ್ ಸಿಟಿಯನ್ನು “Garbage Bengaluru” ಮಾಡಿದ್ದೇ ನಿಮ್ಮ ಸಾಧನೆಯೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ? ಎಂದು ಪ್ರಶ್ನಿಸಿದ್ದಾರೆ.

ಒಮ್ಮೆ ನಿಮ್ಮ ಎಸಿ ಕಾರಿನ ಗಾಜು ಇಳಿಸಿ, ಮೂಗು ಮುಚ್ಚಿಕೊಳ್ಳದೆ ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುವ ಧೈರ್ಯ ಮಾಡಿ! ಎಂ.ಜಿ. ರಸ್ತೆ, ಬನ್ನೇರುಘಟ್ಟ ರಸ್ತೆ, ಎಚ್‌ಎಸ್‌ಆರ್ ಲೇಔಟ್‌ಗಳಲ್ಲೇ ಕಸದ ಲಾರಿಗಳನ್ನು ನಿಲ್ಲಿಸಿ ರಸ್ತೆಗಳನ್ನೇ ಕಸದ ತೊಟ್ಟಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಿಮ್ಮ ಆಡಳಿತದಲ್ಲಿ ಬೆಂಗಳೂರಿಗರಿಗೆ ಸಿಗುತ್ತಿರುವುದು ಇದೇನಾ?

  • ರಸ್ತೆ ತುಂಬಾ ಉಸಿರುಗಟ್ಟಿಸುವ ನಾರುವ ದುರ್ವಾಸನೆ.
  • ರಸ್ತೆ ರಸ್ತೆಯಲ್ಲೂ ಹರಿಯುತ್ತಿರುವ ಕಸದ ವಿಷದ ನೀರು.
  • ಕಸದ ಲಾರಿಗಳಿಂದಾಗಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ನರಕ
  • ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ನಾಗರಿಕರ ಬದುಕು.

ಬೆಂಗಳೂರಿನ ಜನರಿಗೆ ಉತ್ತರಿಸಿ:

  • ಗ್ರೇಟರ್ ಬೆಂಗಳೂರು ಪ್ರಾಧಿಕಾರ ತಂದಿದ್ದು ಕಮಿಷನ್ ಹೊಡೆಯಲೋ ಅಥವಾ ರಸ್ತೆಗಳಲ್ಲೇ ಕಸ ಸುರಿಯಲೋ?
  • ಅಧಿಕಾರಿಗಳು-ಗುತ್ತಿಗೆದಾರರ ಒಳಜಗಳದ ಪರಿಣಾಮವನ್ನು ಬೆಂಗಳೂರಿನ ತೆರಿಗೆದಾರರು ಯಾಕೆ ಹೊರಬೇಕು?
  • ಕೋಟಿ ಕೋಟಿ ಸುರಿದು “Brand Bengaluru” ಎಂದು ಜಾಹೀರಾತು ಕೊಡುವ ನಿಮಗೆ, ಕಣ್ಣೆದುರೇ ಕಾಣುತ್ತಿರುವ “Smell Bengaluru” ನಾಚಿಕೆ ತರುವುದಿಲ್ಲವೇ?

ಇದು ಕೇವಲ ಆಡಳಿತ ವೈಫಲ್ಯವಲ್ಲ, ಬೆಂಗಳೂರಿನ ಜನರಿಗೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಅನ್ಯಾಯ, ಮೋಸ. ಈಗಲಾದರೂ ಎಚ್ಚೆತ್ತುಕೊಂಡು ತಕ್ಷಣ ಕಸದ ಅವ್ಯವಸ್ಥೆಗೆ ಅಂತ್ಯ ಹಾಡಿ..ಇಲ್ಲದಿದ್ದರೆ, ಇದೇ ಬೆಂಗಳೂರಿನ ಜನ ನಿಮ್ಮ ಸರ್ಕಾರವನ್ನು ಕಸದ ಬುಟ್ಟಿಗೆ ಎಸೆಯುವ ದಿನ ದೂರವಿಲ್ಲ ಎಂದು ಎಚ್ಚರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ