ಮಂಗಳೂರು: ಟ್ಯಾಂಕರ್, ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸವಣೂರು ಬಳಿ ಅಪಘಾತ ನಡೆದಿದೆ
ಮಿತ್ತೂರಿನ ಯಜ್ಞೇಶ್(21), ಆರ್ಲಪದವು ನಿವಾಸಿ ಜಗನ್(20) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತ ಕಂಡು ಬ್ರೇಕ್ ಹಾಕಿದ ಮತ್ತೊಂದು ಬೈಕ್ ನಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ವಾಟರ್ ಟ್ಯಾಂಕರ್ ಕಂದಕಕ್ಕೆ ಉರುಳಿ ಬಿದ್ದಿದೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.