ಬೆಂಗಳೂರು : ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆ ಹಾಗೂ ಆಶೋತ್ತರಗಳನ್ನು ಈಡೇರಿಸುವ ಮಹತ್ವದ ಉದ್ದೇಶದೊಂದಿಗೆ ರಾಜ್ಯ ಸರ್ಕಾರ ಇದೇ ಸೆಪ್ಟೆಂಬರ್ 18ರಂದು ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜಿಸಿದೆ.
ಈ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ವಿಡಿಯೋ ಸಂದೇಶ ನೀಡಿದ್ದು, ಕರಾವಳಿಯ ಜನರ ಸಮಸ್ಯೆಗಳು ಮತ್ತು ಸ್ಥಳೀಯ ಅಗತ್ಯಗಳನ್ನು ಅತ್ಯಂತ ಹತ್ತಿರದಿಂದ ಪರಿಶೀಲಿಸಿ, ಸ್ಥಳದಲ್ಲೇ ಸೂಕ್ತ ನೀತಿ-ನಿರ್ಧಾರಗಳನ್ನು ಕೈಗೊಳ್ಳುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ. ಪ್ರಮುಖವಾಗಿ ಬಂದರು ಅಭಿವೃದ್ಧಿ, ಮೂಲಸೌಕರ್ಯ ನಿರ್ಮಾಣ, ಮೀನುಗಾರಿಕೆ ಹಾಗೂ ಕೈಗಾರಿಕಾ ರಂಗಗಳಿಗೆ ಹೊಸ ಚೈತನ್ಯ ತುಂಬಲು ಸರ್ಕಾರ ಆದ್ಯತೆ ನೀಡಿದೆ. ಸಮಗ್ರ ಪ್ರಗತಿಯ ಮೂಲಕ ಕರಾವಳಿ ಭಾಗದ ಸಮೃದ್ಧಿಗೆ ನವ ಮುನ್ನುಡಿ ಬರೆಯಲು ಇಡೀ ‘ಟೀಮ್ ಕರ್ನಾಟಕ’ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
https://twitter.com/DKShivakumar/status/2099540366634668223?s=20