LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಮುಡಾದ 50:50 ಹಂಚಿಕೆ ನಿವೇಶನಗಳನ್ನು ದಯವಿಟ್ಟು ಯಾರೂ ಖರೀದಿಸಬೇಡಿ: ಸ್ನೇಹಮಯಿ ಕೃಷ್ಣ ಎಚ್ಚರಿಕೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ 50:50 ನಿವೇಶನಗಳನ್ನು ಯಾರೂ ಖರೀದಿಸಬೇಡಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ಮುಡಾದ 50:50 ನಿವೇಶನಗಳನ್ನು ಖರೀದಿಸಿ ಮೋಸ ಹೋಗಬೇಡಿ. 50:50 ಅನುಪಾತದಲ್ಲಿ ಹಂಚಿಕೆಯಾದ ನಿವೇಶನ ಖರೀದಿಸದಂತೆ ಮನವಿ ಮಾಡಿದ್ದಾರೆ. ನಿವೇಶನ ಖರೀದಿಸಿದರೆ ಮೋಸ, ನಷ್ಟ ಅನುಭವಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಈಗಾಗಲೇ ನಿವೇಶನ ಖರೀದಿಸಿದವರು ಮನೆ ನಿರ್ಮಾಣ ಮಾಡದಂತೆ ಸಲಹೆ ನೀಡಿದ್ದಾರೆ. ಅಕ್ರಮ ಹಂಚಿಕೆ ಆರೋಪ ಹಿನ್ನೆಲೆಯಲ್ಲಿ ಎರಡು ತನಿಖಾ ಸಂಸ್ಥೆಗಳಿಂದ ತನಿಖೆ ಕೈಗೊಳ್ಳಲಾಗಿದೆ. ತಮ್ಮ ದೂರಿನ ಆಧಾರದಲ್ಲಿ ಮುಡಾ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ಕಾನೂನು ಪ್ರಕಾರ ನಿವೇಶನಗಳನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ಮುಡಾದ 50:50 ನಿವೇಶನಗಳನ್ನು ಯಾರೂ ಖರೀದಿಸಬೇಡಿ ಎಂದು ಜಾಲತಾಣದ ಮೂಲಕ ಸಾರ್ವಜನಿಕರಿಗೆ ಸ್ನೇಹಮಯಿ ಕೃಷ್ಣ ಎಚ್ಚರಿಕೆ ನೀಡಿದ್ದಾರೆ.

“ಮೈಸೂರು ‌ನಗರಾಭಿವೃದ್ದಿ ಪ್ರಾಧಿಕಾರದಿಂದ 50:50 ಅನುಪಾತದಲ್ಲಿ ಹಂಚಿಕೆ ಮಾಡಿರುವ ನಿವೇಶನಗಳನ್ನು ದಯವಿಟ್ಟು ಯಾರೂ ಖರೀದಿಸಿ, ಮೋಸ ಹೋಗಬೇಡಿ, ನಷ್ಟ ಅನುಭವಿಸಬೇಡಿ ಮತ್ತು ಈಗಾಗಲೇ ಖರೀದಿಸಿರುವವರು ಮನೆ ಕಟ್ಟಿಬಿಟ್ಟರೆ ವಶ ಪಡಿಸಿಕೊಳ್ಳುವುದಿಲ್ಲ ಎಂಬ ಕಾರಣದಿಂದ ಮನೆ ಕಟ್ಟಬೇಡಿ. 50:50 ಅನುಪಾತದಲ್ಲಿ ಅಕ್ರಮವಾಗಿ ನಿವೇಶನಗಳನ್ನು ಹಂಚಿಕೆ ಮಾಡಿರುವುದರಿಂದ, ನನ್ನ ದೂರರ್ಜಿ ಆಧರಿಸಿ ಎರಡು ತನಿಖಾ ಸಂಸ್ಥೆಗಳು ತನಿಖೆ ನಡೆಸುತ್ತಿರುವುದರಿಂದ, ಕಾನೂನಿನ ಪ್ರಕಾರ, ಸದರಿ ನಿವೇಶನಗಳನ್ನು ವಶಕ್ಕೆ ಪಡೆಯಲಾಗುತ್ತದೆ” ಎಂದು ಅವರು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ