LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ‘ರೋಜಗಾರ್ ಮೇಳ’ : ಪ್ರಧಾನಿ ಮೋದಿಯಿಂದ 51,000 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ |WATCH VIDEO

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ 19ನೇ ಆವೃತ್ತಿಯ ‘ರೋಜ್‌ಗಾರ್ ಮೇಳ’ಕ್ಕೆ ಚಾಲನೆ ನೀಡಿದ್ದಾರೆ.  ಈ ಕಾರ್ಯಕ್ರಮದ ಮೂಲಕ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ ಯುವಕರಿಗೆ 51,000ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಪ್ರಧಾನಿ ವಿತರಿಸಿದ್ದಾರೆ.

ದೇಶದಾದ್ಯಂತ 47 ಸ್ಥಳಗಳಲ್ಲಿ ಈ 19ನೇ ರೋಜ್‌ಗಾರ್ ಮೇಳ ನಡೆಯುತ್ತಿದ್ದು,  ಉದ್ಯೋಗ ಸೃಷ್ಟಿಗೆ ಪ್ರಧಾನಿ ನೀಡಿರುವ ಆದ್ಯತೆಗೆ ಅನುಗುಣವಾಗಿ ಈ ಮೇಳವನ್ನು ಆಯೋಜಿಸಲಾಗಿದ್ದು, ಇದರ ಮೂಲಕ ಇದುವರೆಗೆ ಸುಮಾರು 12 ಲಕ್ಷಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೀಡಲಾಗಿದೆ.ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳು ರೈಲ್ವೆ ಸಚಿವಾಲಯ, ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು..?

“ಇಂದು ಪ್ರತಿಯೊಬ್ಬ ಭಾರತೀಯನು ಒಂದು ದೊಡ್ಡ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದ್ದಾನೆ, ಅದು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವುದು. ಈ ಗುರಿಯನ್ನು ಸಾಧಿಸಲು ದೇಶವು ವಿವಿಧ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಈ ಹೂಡಿಕೆಯು ದೇಶದ ಯುವಕರಿಗೆ ಲಕ್ಷಾಂತರ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿದೆ. ಇಂದು ಭಾರತದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಗಾಗಿ ಸಂಪೂರ್ಣ ಪೂರೈಕೆ ಸರಪಳಿಯನ್ನು (supply chain) ಸೃಷ್ಟಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಭಾರತದ 10 ಪ್ರಮುಖ ಸೆಮಿಕಂಡಕ್ಟರ್ ಘಟಕಗಳು ಜಗತ್ತಿನಲ್ಲಿ ತಮ್ಮ ಛಾಪು ಮೂಡಿಸಲಿವೆ…”

“ಇಂದು ಭಾರತವು ಹಡಗು ನಿರ್ಮಾಣದಿಂದ ಹಿಡಿದು ಹಡಗುಗಳ ದುರಸ್ತಿ ಮತ್ತು ಮೇಲ್ದರ್ಜೆಗೇರಿಸುವವರೆಗಿನ ಸಂಪೂರ್ಣ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಇದಕ್ಕಾಗಿ ಸುಮಾರು 75,000 ಕೋಟಿ ರೂಪಾಯಿಗಳ ಹೂಡಿಕೆಯನ್ನು ಮಾಡಲಾಗುತ್ತಿದೆ. ಅದೇ ರೀತಿ, ನಾವು ಭಾರತದಲ್ಲೇ ಸಂಪೂರ್ಣ MRO ಪರಿಸರ ವ್ಯವಸ್ಥೆಯನ್ನು, ಅಂದರೆ ನಿರ್ವಹಣೆ, ಮೇಲ್ದರ್ಜೆಗೇರಿಸುವಿಕೆ ಮತ್ತು ದುರಸ್ತಿ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಇದು ದೇಶದ ವಿಮಾನಯಾನ ಕ್ಷೇತ್ರಕ್ಕೆ ಭಾರಿ ಸಹಾಯ ಮಾಡಲಿದೆ ಮತ್ತು ಖಂಡಿತವಾಗಿಯೂ ಭಾರತದ ಯುವಕರಿಗೆ ಉದ್ಯೋಗದ ಹೊಸ ಕ್ಷೇತ್ರವನ್ನು ತೆರೆಯಲಿದೆ.”ಎಂದು ಹೇಳಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ