LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಆ. 8, 9ರಂದು ನಿಗದಿಯಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸಚಿವ ಪ್ರಿಯಾಂಕ್ ಖರ್ಗೆ

ಆಗಸ್ಟ್ 8 ಮತ್ತು 9 ರಂದು ನಿಗದಿಪಡಿಸಲಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ವರದಿ ಬಂದ ಬಳಿಕ ಅದನ್ನು ಪರಾಮರ್ಶಿಸಿ, ಶೀಘ್ರದಲ್ಲಿಯೇ ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದು ಆಳುವ ಸರ್ಕಾರವಲ್ಲ ಆಲಿಸುವ ಸರ್ಕಾರ. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಣೆ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ. ವಿದ್ಯಾರ್ಥಿಗಳು ಫ್ರೀಡಂ ಪಾರ್ಕ್‌ಗೆ ಬಂದು ಪ್ರತಿಭಟನೆ ಮಾಡಬಾರದು. ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರಬೇಕು, ಗ್ರಂಥಾಲಯಗಳಲ್ಲಿ ಇರಬೇಕು ಎಂಬುವುದು ನನ್ನ ವೈಯಕ್ತಿಕ ಆಶಯ ಎಂದು ತಿಳಿಸಿದ್ದಾರೆ.

ಈ ಹಿಂದಿನ ಸರ್ಕಾರದ ಯಾವುದೇ ಸ್ಪರ್ಧಾತ್ಮಕ ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ, ಅವ್ಯವಹಾರ ಹಾಗೂ ಪರೀಕ್ಷಾ ಅಕ್ರಮಗಳಿಂದ ನೇರ ಪರಿಣಾಮ ಅನುಭವಿಸಿದ್ದು ನಮ್ಮ ನಾಡಿನ ಲಕ್ಷಾಂತರ ಉದ್ಯೋಗಾಕಾಂಕ್ಷಿ ಯುವಜನತೆ. ಇದನ್ನು ತಡೆಗಟ್ಟಲು, ರಾಜಕೀಯವಾಗಿ ಮತ್ತು ಕಾನೂನಾತ್ಮಕ ಕ್ರಮಗಳ ಅನಿವಾರ್ಯತೆಯಿಂದ ನೇಮಕಾತಿ ಪರೀಕ್ಷೆಗಳಲ್ಲಿನ ಭ್ರಷ್ಟಾಚಾರವನ್ನು ತಡೆಯಲು ಸದನದ ಖಾಸಗಿ ಮಸೂದೆಯನ್ನು ಮಂಡಿಸಲಾಗಿತ್ತು. ಇದು ಯುವಜನತೆಯ ಕನಸುಗಳನ್ನು ರಕ್ಷಿಸುವ ಪ್ರಬಲ ಅಸ್ತ್ರವಾಗಿತ್ತು ಎಂದು ತಿಳಿಸಿದ್ದಾರೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ವಾಗ್ದಾನ ನೀಡಿದ್ದೆವು. ಅದರಂತೆ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ.

ಕಳೆದ 2021-22 ರ ಬಿಜೆಪಿ ಆಡಳಿತಾವಧಿಯಲ್ಲಿ ನೇಮಕಾತಿಗೆ ಆದೇಶ ಹೊರಡಿಸಲಾಗಿತ್ತು. ಅಂದು ನಿಯಮಗಳನ್ನು ಬದಲಾವಣೆ ಮಾಡಿದ ಪರಿಣಾಮ ಸಾವಿರಾರು ಕೃಷಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ನಿರಂತರವಾಗಿ ಪ್ರತಿಭಟನೆ ನಡೆಸುತ್ತಾ ಬಂದಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿದ್ಯಾರ್ಥಿಗಳ ನಾಲ್ಕು ಬೇಡಿಕೆಗಳನ್ನು ಪೂರೈಸುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆಯಂತೆ ತಜ್ಞರ ವಿಶೇಷ ಸಮಿತಿಯನ್ನು ರಚಿಸಿ, 15 ದಿನಗಳ ಒಳಗೆ ವರದಿ ಪಡೆದು ಸಿ ಆಂಡ್ ಆರ್ ಕುರಿತು ನಿಯಮಾನುಸಾರ ಅಗತ್ಯ ಬದಲಾವಣೆಗಳನ್ನು ತಂದು, ಪ್ರಸ್ತುತದ ನೇಮಕಾತಿಗೆ ಅಳವಡಿಸಿ ಆದೇಶ ಹೊರಡಿಸಲಾಗುವುದು. ಈ ಸಲುವಾಗಿ ಆಗಸ್ಟ್ 8 ಮತ್ತು 9 ರಂದು ನಿಗದಿಪಡಿಸಲಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆಯ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ವರದಿ ಬಂದ ಬಳಿಕ ಅದನ್ನು ಪರಾಮರ್ಶಿಸಿ, ಶೀಘ್ರದಲ್ಲಿಯೇ ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು. ಉದ್ಯೋಗಾಕಾಂಕ್ಷಿಗಳ ಭವಿಷ್ಯವನ್ನು ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ.  ಯುವಜನತೆಯ ಆಶೋತ್ತರಗಳನ್ನು ಪೂರೈಸುವುದು ನಮ್ಮ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಪ್ರಯಾಣಿಕರ ಗಮನಕ್ಕೆ: ನಾಳೆ ಗ್ರೀನ್ ಲೈನ್ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ಬದಲಾವಣೆಬೆಳೆ ಹಾನಿಯಿಂದ ನಷ್ಟದಲ್ಲಿರುವ ರೈತರಿಗೆ ಮಧ್ಯಂತರ ಬೆಳೆ ವಿಮೆ ಪರಿಹಾರ: ಸಚಿವ ಶಿವರಾಜ ತಂಗಡಗಿBREAKING: ಪ್ರಧಾನಿ ಮೋದಿಗೆ ಕರೆ ಮಾಡಿದ ನೆತನ್ಯಾಹು: ಪಶ್ಚಿಮ ಏಷ್ಯಾದ ಉದ್ವಿಗ್ನತೆ, ಭಾರತ-ಇಸ್ರೇಲ್ ದ್ವಿಪಕ್ಷೀಯ ಸಂಬಂಧ ಕುರಿತು ಮಹತ್ವದ ಚರ್ಚೆಪೆನ್-ಅಂಡ್ ಪೇಪರ್‌ ಬದಲಿಗೆ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ: ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್BREAKING: ಮಧ್ಯಮ ಶ್ರೇಣಿಯ ಅಗ್ನಿ-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿBREAKING: ದೀಪಕ್ ಕೇಬಲ್ ಮೀಡಿಯಾ ವಂಚನೆ ಕೇಸ್: 51.28 ಕೋಟಿ ರೂ. ಸ್ಥಿರಾಸ್ತಿ ಮುಟ್ಟುಗೋಲುBREAKING: ಆ. 8, 9ರಂದು ನಿಗದಿಯಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸಚಿವ ಪ್ರಿಯಾಂಕ್ ಖರ್ಗೆಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ | KEA Recruitmentಬೆಂಗಳೂರಿನಲ್ಲಿ ಲಾಲ್ ಬಾಗ್ ಮಾದರಿ 3 ಉದ್ಯಾನ ನಿರ್ಮಾಣಕ್ಕೆ ಚಿಂತನೆ: ರಕ್ಷಣಾ ಇಲಾಖೆ ಜಾಗದಲ್ಲಿ ನಿರ್ಮಿಸಲು ಅನುಮತಿಗಾಗಿ ಪತ್ರ: ಸಿಎಂ ಡಿ.ಕೆ.ಶಿವಕುಮಾರ್ಆಡಿಯೋ ಬಗ್ಗೆ ಛಲವಾದಿ ನಾರಾಯಣಸ್ವಾಮಿ ದೂರು ನೀಡಲಿ; FSLಗೆ ಕಳಿಸಿ ರಿಪೋರ್ಟ್ ತರಿಸುತ್ತೇನೆ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ