LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಕಲಬುರಗಿ ನಗರದಲ್ಲಿ ತಡರಾತ್ರಿ ಲಘು ಭೂಕಂಪ ; ಹೆದರಿ ಮನೆಯಿಂದ ಹೊರಗೆ ಓಡಿಬಂದ ಜನ |Earthquake

ಕಲಬುರಗಿ: ನಗರದಲ್ಲಿ ತಡರಾತ್ರಿ ಭೂಕಂಪನದ ಅನುಭವವಾಗಿದ್ದು, ಹಲವು ಪ್ರದೇಶಗಳ ನಿವಾಸಿಗಳು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿಬಂದ ಘಟನೆ ನಡೆದಿದೆ.

ಕಲಬುರಗಿ ನಗರದಲ್ಲಿ ಬುಧವಾರ ತಡರಾತ್ರಿ ಸುಮಾರು 1.30 ಗಂಟೆ ವೇಳೆಗೆ ಲಘು ಭೂಕಂಪನದ ಅನುಭವವಾಗಿದ್ದು, ಹರಿಕೃಷ್ಣ ನಗರ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ಆತಂಕಗೊಂಡು ಮನೆಗಳಿಂದ ಹೊರಗೆ ಓಡಿಬಂದರು.ಬುಧವಾರ ತಡರಾತ್ರಿ ಸುಮಾರು 1.30 ಗಂಟೆ ವೇಳೆಗೆ ಹರಿಕೃಷ್ಭ ನಗರ, ಮಹಾವೀರ ನಗರ ಸೇರಿದಂತೆ ಹಲವು ಕಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಮಿ ಕೆಲ ಕ್ಷಣಗಳ ಕಾಲ ಕಂಪಿಸಿದ ಅನುಭವ ಸ್ಥಳೀಯರಿಗೆ ಆಗಿದೆ. ಮನೆಗಳಲ್ಲಿದ್ದ ಜನರು ಏಕಾಏಕಿ ಕಂಪನವನ್ನು ಅನುಭವಿಸಿ ಆತಂಕಗೊಂಡು ಸುರಕ್ಷತೆಗಾಗಿ ಹೊರಗೆ ಬಂದರು.

ಹರಿಕೃಷ್ಭ ನಗರ, ಮಹಾವೀರ ನಗರ ಸೇರಿದಂತೆ ಸುತ್ತಮುತ್ತಲಿನ ಕೆಲವು ಬಡಾವಣೆಗಳ ನಿವಾಸಿಗಳು 4 ರಿಂದ 5 ಸೆಕೆಂಡ್ ಭೂಕಂಪನದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿಯೂ ಹಂಚಿಕೊಂಡಿದ್ದಾರೆ. ಕೆಲವರು ಮನೆಯಲ್ಲಿ ವಸ್ತುಗಳು ಸ್ವಲ್ಪ ಅಲ್ಲಾಡಿದ ಅನುಭವವಾಗಿದೆ ಎಂದು ತಿಳಿಸಿದ್ದಾರೆ.ಸದ್ಯಕ್ಕೆ ಭೂಕಂಪನದಿಂದ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿರುವ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಭೂಕಂಪನದ ತೀವ್ರತೆ ಹಾಗೂ ಕೇಂದ್ರಬಿಂದುವಿನ ಬಗ್ಗೆ ಸಂಬಂಧಿತ ಇಲಾಖೆಗಳಿಂದ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಭೂಕಂಪನದ ಅನುಭವದಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬಳಿಕ ಪರಿಸ್ಥಿತಿ ಸಹಜಗೊಂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ