LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : ಇಂಡೋನೇಷ್ಯಾದಲ್ಲಿ ಹೆಲಿಕಾಪ್ಟರ್ ಪತನ : ಪೈಲಟ್ ಸೇರಿ 8 ಮಂದಿ ದುರ್ಮರಣ |WATCH VIDEO

ಜಕಾರ್ತ : ಇಂಡೋನೇಷ್ಯಾದ ವೆಸ್ಟ್ ಕಾಲಿಮಂಟನ್ ಪ್ರಾಂತ್ಯದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ವೆಸ್ಟ್ ಕಾಲಿಮಂಟನ್ ಪ್ರಾಂತ್ಯದ ಮೆಲಾವಿ (Melawi) ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಈ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್ ಪ್ರಯಾಣಿಸುತ್ತಿದ್ದಾಗ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಅಪಘಾತದ ಸಮಯದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲಾ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ: ಅಪಘಾತದ ಸುದ್ದಿ ತಿಳಿದ ತಕ್ಷಣ ‘ಸರ್ಚ್ ಅಂಡ್ ರೆಸ್ಕ್ಯೂ’ (SAR) ತಂಡಗಳು ಸ್ಥಳಕ್ಕೆ ಧಾವಿಸಿವೆ. ಆದರೆ, ಅಪಘಾತ ಸಂಭವಿಸಿದ ಸ್ಥಳವು ದಟ್ಟವಾದ ಅರಣ್ಯ ಪ್ರದೇಶವಾಗಿರುವುದರಿಂದ ಮೃತದೇಹಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳಿಗೆ ಹರಸಾಹಸ ಪಡಬೇಕಾಯಿತು.

ತನಿಖೆ: ಹೆಲಿಕಾಪ್ಟರ್ ಪತನಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಪ್ರತಿಕೂಲ ಹವಾಮಾನವೇ ಅಥವಾ ತಾಂತ್ರಿಕ ದೋಷವೇ ಎಂಬ ಕೋನದಲ್ಲಿ ಇಂಡೋನೇಷ್ಯಾದ ನಾಗರಿಕ ವಿಮಾನಯಾನ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆಈ ಭೀಕರ ಘಟನೆಯಿಂದಾಗಿ ಇಂಡೋನೇಷ್ಯಾದಲ್ಲಿ ಶೋಕದ ಛಾಯೆ ಆವರಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ