LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: KPSC ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಸದಸ್ಯೆ ಶಾಂತಾ ಹೊಸಮನಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದ್ದು, ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ 52ನೇ ಸಿಸಿಎಚ್‌ ನ್ಯಾಯಾಲಯವು ವಜಾಗೊಳಿಸಿದೆ. ಇದರೊಂದಿಗೆ ತನಿಖಾಧಿಕಾರಿಗಳ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿರುವ ಶಾಂತಾ ಹೊಸಮನಿ ಅವರಿಗೆ ಸಿಐಡಿ ಬಂಧನದ ಭೀತಿ ಎದುರಾಗಿದೆ.

ವೈದ್ಯಕೀಯ ವರದಿ ನೀಡದಿದ್ದಕ್ಕೆ ಅರ್ಜಿ ತಿರಸ್ಕರಿಸಿದ ಕೋರ್ಟ್‌:

ಪಶು ವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮ ಹಣಕಾಸು ವಹಿವಾಟಿನ ತನಿಖೆ ನಡೆಸುತ್ತಿರುವ ಸಿಐಡಿ (ಅಪರಾಧ ತನಿಖಾ ಇಲಾಖೆ), ಸೆಪ್ಟೆಂಬರ್ 7ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಶಾಂತಾ ಹೊಸಮನಿ ಅವರಿಗೆ ನೋಟಿಸ್ ನೀಡಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗದೆ ಅನಾರೋಗ್ಯದ ನೆಪವೊಡ್ಡಿ 7 ದಿನಗಳ ಕಾಲಾವಕಾಶ ಕೋರಿದ್ದರು. ಆದಾಗ್ಯೂ, ತಮ್ಮ ಅನಾರೋಗ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕಾಗಲಿ ಅಥವಾ ತನಿಖಾ ಸಂಸ್ಥೆಗಾಗಲಿ ಯಾವುದೇ ಅಧಿಕೃತ ವೈದ್ಯಕೀಯ ದಾಖಲೆ ಅಥವಾ ವರದಿಯನ್ನು ಹಾಜರುಪಡಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಅಂಶವನ್ನು ಗಂಭೀರವಾಗಿ ಪರಿಗಣಿಸಿದ 52ನೇ ಸಿಸಿಎಚ್ ನ್ಯಾಯಾಲಯವು ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಬಂಧನಕ್ಕೆ ಸಿಐಡಿ ಬಲೆ:

ಇತ್ತೀಚೆಗಷ್ಟೇ ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಸಿಐಡಿ ಅಧಿಕಾರಿಗಳು ಶಾಂತಾ ಹೊಸಮನಿ ಅವರಿಗೆ ಸೇರಿದ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ನೋಟಿಸ್ ನೀಡಿದರೂ ವಿಚಾರಣೆಗೆ ಗೈರಾಗಿ, ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ಸಂಪರ್ಕಕ್ಕೆ ಸಿಗದ ಕಾರಣ ಅವರ ವಿರುದ್ಧ ಈಗಾಗಲೇ ಲುಕ್‌ಔಟ್ ನೋಟಿಸ್ ಕೂಡ ಜಾರಿಯಾಗಿದೆ. ಇದೀಗ ಜಾಮೀನು ಅರ್ಜಿ ವಜಾಗೊಂಡಿರುವ ಕಾರಣ, ಸಿಐಡಿ ಅಧಿಕಾರಿಗಳು ಯಾವುದೇ ಕ್ಷಣದಲ್ಲಾದರೂ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ.

ಹಗರಣದ ತನಿಖೆ ತೀವ್ರ:

ಸುಮಾರು 400ಕ್ಕೂ ಅಧಿಕ ಪಶು ವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾದ ಬಳಿಕ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಪರೀಕ್ಷಾ ನಿಯಂತ್ರಕರಾಗಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗ್ಯಾಂಗ್ವಾರ್ ಹಾಗೂ ಮಧ್ಯವರ್ತಿ ಬಸವರಾಜ್ ಕನ್ನಾಳೆಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೂ ಹೈಕೋರ್ಟ್‌ನಲ್ಲಿ ಜಾಮೀನು ಹಿನ್ನಡೆಯಾಗಿದ್ದು, ಸಾಂವಿಧಾನಿಕ ಹುದ್ದೆಯಲ್ಲಿರುವ ಪ್ರಮುಖರ ಸುತ್ತ ಕಾನೂನಿನ ಕುಣಿಕೆ ದಿನೇದಿನೆ ಬಿಗಿಯಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ: ಹಿರಿಯೂರಲ್ಲಿ ಮಹಿಳೆ ಹತ್ಯೆ, ಅಪ್ರಾಪ್ತ ಸೇರಿ ಒಂದೇ ಕುಟುಂಬದ ನಾಲ್ವರು ಅರೆಸ್ಟ್!'ED ದಾಳಿ'ಯ ವೇಳೆ ಸಿಕ್ಕ ಹಣಕ್ಕೆ ದಾಖಲೆ ಸಮೇತ ಲೆಕ್ಕ ನೀಡುತ್ತೇವೆ: ಸಚಿವ ಸತೀಶ್ ಜಾರಕಿಹೊಳಿಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ಉಪಲೋಕಾಯುಕ್ತರಿಂದ ಸುಮೋಟೋ ಕೇಸ್ ದಾಖಲುಪ್ಯಾರಿಸ್ ಅಂತಾರಾಷ್ಟ್ರೀಯ ಬಾಹ್ಯಾಕಾಶ ಶೃಂಗಸಭೆ: ಇಸ್ರೋ ಸಾಧನೆ ಕೊಂಡಾಡಿ ಜಾಗತಿಕ ಸಹಭಾಗಿತ್ವಕ್ಕೆ ಪ್ರಧಾನಿ ಮೋದಿ ಕರೆBREAKING: ಶಿವಮೊಗ್ಗದಲ್ಲಿ ತುಂಗಾ ನದಿಗೆ ಜಿಗಿದ ಯುವತಿ ಆತ್ಮಹತ್ಯೆಗೆ ಯತ್ನ, ರಕ್ಷಣೆಸಚಿವ ಎಂ.ಬಿ.ಪಾಟೀಲರ ಫ್ರಾನ್ಸ್, ನೆದರ್ಲೆಂಡ್ಸ್‌ ಪ್ರವಾಸ: ಸಾಫ್ರಾನ್, ನೆಕ್ಸ್ಪೀರಿಯಾ ಜತೆ ಹೂಡಿಕೆ ಮಾತುಕತೆದೆಹಲಿ ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭಾಗಿ: 7 ವರ್ಷಗಳ ನಂತರ ಭಾರತಕ್ಕೆ ಭೇಟಿಸಾಗರದಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ 'ಬ್ಲಾಕ್ ಕಾಂಗ್ರೆಸ್'ನಿಂದ ಕಾಗೋಡು ತಿಮ್ಮಪ್ಪ ಹುಟ್ಟುಹಬ್ಬ ಆಚರಣೆ‘ಉಳುವವನೇ ಒಡೆಯ’ ತತ್ವದಡಿ ಬಡವರಿಗೆ ಹಕ್ಕುಪತ್ರ ನೀಡಿ: ಸಾಗರದಲ್ಲಿ ಮಾಜಿ ಸಚಿವ ಹಾಲಪ್ಪ ಆಗ್ರಹBREAKING: KPSC ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣ: ಸದಸ್ಯೆ ಶಾಂತಾ ಹೊಸಮನಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ