ಬೀದರ್ : ಕೆಪಿಎಸ್ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಐಡಿ ಅಧಿಕಾರಿಗಳು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಓಂ ಲಕ್ಷ್ಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬಾಲ್ಕಿ ಪಟ್ಟಣದ ಲೆಕ್ಚರರ್ ಕಾಲೋನಿಯಲ್ಲಿ ಈ ಒಂದು ಬ್ಯಾಂಕ್ ಇದೆ.
ಬ್ಯಾಂಕಿಗೆ ಮ್ಯಾನೇಜರ್ ಅಮರ್ ಕರೆಸಿ ಸಿಐಡಿ ವಿಚಾರಣೆ ನಡೆಸಿದೆ ಬ್ಯಾಂಕ್ ಅಧ್ಯಕ್ಷ ಓಂಕಾರ ರಿಂದ ಹೆಚ್ಚು ಹಣ ವರ್ಗಾವಣೆ ಆದ ಹಿನ್ನೆಲೆಯಲ್ಲಿ ಓಂ ಲಕ್ಷ್ಮೀ ಸೌಹಾರ್ದ ಸಹಕಾರಿ ಬ್ಯಾಂಕ್ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿ ಇದೀಗ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.