LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ಬಿಜೆಪಿ ಹಿರಿಯ ಕಾರ್ಯಕರ್ತ ಮಖನ್ ಲಾಲ್ ಸರ್ಕಾರ್ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ|makhanlal sarkar

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಇಂದಿನಿಂದ ಬಿಜೆಪಿ ಸರ್ಕಾರದ ಆಡಳಿತ ಆರಂಭವಾಗಿದೆ. ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭದ ವೇದಿಕೆ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರ ಕಾಲಿಗೆ ನಮಸ್ಕರಿಸಿದ ಘಟನೆ ನಡೆದಿದೆ.

ಕೋಲ್ಕತ್ತಾದ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಐತಿಹಾಸಿಕ ಸಮಾರಂಭದಲ್ಲಿ ಇಂದು ಪಶ್ಚಿಮ ಬಂಗಾಳ ನೂತನ ಮುಖ್ಯಮಂತ್ರಿ ಹಾಗೂ ಐವರು ಸಚಿವರ ಪದಗ್ರಹಣ ಕಾರ್ಯಕ್ರಮ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಗಣ್ಯಾತಿಗಣ್ಯರು ವೇದಿಕೆಯಲ್ಲಿ ನೆರೆದಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಬಂಗಾಳದ ಹಿರಿಯ ಬಿಜೆಪಿ ಕಾರ್ಯಕರ್ತ 98 ವರ್ಷದ ಮುಖನ್ ಲಾಲ್ ಸರ್ಕಾರ್ ಅವರ ಕಾಲಿಗೆ ನಮಸ್ಕರಿಸಿ ಅವರ ಯೋಗಕ್ಷೇಮ ವಿಚಾರಿಸಿದರು.

ಪ್ರಮಾಣವಚನ ಸಮಾರಂಭದ ವೇದಿಕೆಯ ಮೇಲೆ ಮುಖನ್ ಲಾಲ್ ಸರ್ಕಾರ್ ಆಗಮಿಸುತ್ತಿದ್ದಂತೆಯೇ ಸ್ವತಃ ಪ್ರಧಾನಿ ಮೋದಿಯವರು ಅವರ ಬಳಿ ತೆರಳಿ ಉಭಯಕುಶಲೋಪರಿ ವಿಚಾರಿಸಿ ಸರ್ಕಾರ್ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಬಳಿಕ ಅವರನ್ನು ಆಲಂಗಿಸಿ ಗೌರವಿಸಿದರು.

ಮುಖನ್ ಲಾಲ್ ಸರ್ಕಾರ್ ಅವರು ಶ್ಯಾಮಪ್ರಸಾದ್ ಮುಖರ್ಜಿ ಜೊತೆ ಕೆಲಸ ಮಾಡಿವರು. 1952ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಮುಖನ್ ಲಾಲ್ ಸರ್ಕಾರ್ ಬಂಧನಕ್ಕೀಡಾಗಿದ್ದರು. ಶ್ಯಾಮ್ ಪ್ರಸಾದ್ ಮುಖರ್ಜಿ ಹಾಗೂ ಮಖನ್ ಲಾಲ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದರು. 1980ರಲ್ಲಿ 10 ಸಾವಿರ ಜನರನ್ನು ಮಖನ್ ಲಾಲ್ ಸರ್ಕಾರ್ ಬಿಜೆಪಿಗೆ ಸೇರಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ