LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ: ಇಬ್ಬರು ಆರೋಪಿಗಳು ಅರೆಸ್ಟ್

ಉತ್ತರ ಪ್ರದೇಶದ ಫಿರೋಜಾಬಾದ್ ಸಮೀಪ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ, ಪೊಲೀಸರು ಮೂವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಪತ್ತೆಹಚ್ಚಲಾಗಿದ್ದು, ಪರಾರಿಯಾಗಿರುವ ಮೂರನೇ ಆರೋಪಿಯನ್ನು ಬಂಧಿಸಲು ಶೋಧ ಕಾರ್ಯ ಮುಂದುವರಿದಿದೆ.

ಗುರುವಾರ ಸಂಜೆ ಕಾನ್ಪುರದಿಂದ ನವದೆಹಲಿಗೆ ತೆರಳುತ್ತಿದ್ದ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಎಸಿ ಫಸ್ಟ್ ಕ್ಲಾಸ್ ಬೋಗಿಯ ಕಿಟಕಿಯ ಗಾಜು ಕಲ್ಲು ತೂರಾಟದಿಂದ ಪುಡಿಯಾಯಿತು. ಆ ವೇಳೆ ರೈಲಿನಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ತನಿಖೆ ಆರಂಭ

ಆಗ್ರಾ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿ) ಎಸ್.ಕೆ. ಭಾಗವತ್ ಮಾತನಾಡಿ, “ಬೆಳಗ್ಗೆ ಸುಮಾರು 7.15 ಗಂಟೆಗೆ ಸ್ವರ್ಣ ಶತಾಬ್ದಿ ಎಕ್ಸ್‌ಪ್ರೆಸ್ ರೈಲು ಸಾಗುತ್ತಿದ್ದ ವೇಳೆ ಯಾರೋ ಕಲ್ಲು ತೂರಿದ್ದಾರೆ. ಇದರಿಂದ ಎಸಿ ಫಸ್ಟ್ ಕ್ಲಾಸ್ ಬೋಗಿಯ ಕಿಟಕಿಯ ಗಾಜು ಒಡೆದಿದೆ. ಕಲ್ಲು ತೂರಿದ ವ್ಯಕ್ತಿಯನ್ನು ಗುರುತಿಸಿ ಬಂಧಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ,” ಎಂದು ಹೇಳಿದರು.

ಸಿಸಿಟಿವಿ ಪರಿಶೀಲನೆ

ಘಟನೆಯ ಕುರಿತು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.ಉಪ ಪೊಲೀಸ್ ಅಧೀಕ್ಷಕ (ಡಿಎಸ್‌ಪಿ) ಆದಿತ್ಯ ಲಾಂಗ್ ಮಾತನಾಡಿ, “ಬೆಳಗ್ಗೆ ಸುಮಾರು 7.15ಕ್ಕೆ ದಕ್ಷಿಣ ಮತ್ತು ರಸೂಲ್ಪುರ ಪೊಲೀಸ್ ಠಾಣೆಗಳ ಗಡಿ ವ್ಯಾಪ್ತಿಯಲ್ಲಿ ರೈಲಿನ ಕಿಟಕಿಗೆ ಕಲ್ಲು ಬಿದ್ದಿರುವ ಮಾಹಿತಿ ಲಭಿಸಿತು. ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಮತ್ತು ರೈಲು ಸುರಕ್ಷಿತವಾಗಿ ತನ್ನ ಗಮ್ಯಸ್ಥಾನ ತಲುಪಿದೆ,” ಎಂದು ಹೇಳಿದರು.

ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ

“ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸಿಸಿಟಿವಿ ದೃಶ್ಯಗಳಿಂದ ಲಭ್ಯವಾದ ಮಾಹಿತಿಯನ್ನು ತನಿಖಾ ತಂಡಗಳಿಗೆ ನೀಡಲಾಗಿದೆ. ದೂರು ದಾಖಲಿಸಿಕೊಂಡು ಪ್ರಕರಣ ದಾಖಲಿಸಲಾಗುವುದು ಹಾಗೂ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲಾಗುವುದು,” ಎಂದು ಡಿಎಸ್‌ಪಿ ತಿಳಿಸಿದರು.

ಮೋಹನ್ ಭಾಗವತ್ ಉಪಸ್ಥಿತಿ ದೃಢ

ಮೋಹನ್ ಭಾಗವತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದರೇ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಎಸ್‌ಪಿ, “ಹೌದು, ಆ ಮಾಹಿತಿ ದೃಢಪಟ್ಟಿದೆ. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗಿದೆ. ನ್ಯಾಯಸಮ್ಮತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ