LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

BREAKING: ನೂತನ ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ: ಇಂದಿನಿಂದ ತಮಿಳುನಾಡಿನಲ್ಲಿ ದಳಪತಿ ಯುಗಾರಂಭ| Vijay Oath

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಹೊಸ ಚರಿತ್ರೆ ಸೃಷ್ಟಿಸಿರುವ ನಟ ವಿಜಯ್ ಅವರ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಸರ್ಕಾರ ರಚನೆಗೆ ರಾಜ್ಯಪಾಲರು ಕೊನೆಗೂ ಅನುಮತಿ ನೀಡಿದ್ದು, ದಳಪತಿ ವಿಜಯ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾಅರ ಸ್ವೀಕರಿಸಿದ್ದಾರೆ.

ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ನೂತನ ಮುಖ್ಯಮಂತ್ರಿ ವಿಜಯ್ ಅವರಿಗೆ ಪ್ರಮಾಣವಚನ ಬೋಧಿಸಿದರು. ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣವಚನ ಸ್ವೀಕರಿದ್ದಾರೆ.

ಸದ್ಯ ವಿಜಯ್ ತಮ್ಮ ಸಂಪುಟದಲ್ಲಿ 9 ಶಾಸಕರಿಗೆ ಸಚಿವ ಸ್ಥಾನ ನೀಡಿದ್ದು, 9 ಶಾಸಕರು ಇದೇ ವೇಳೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸಮಾರಂಭದಲ್ಲಿ ಲೋಕಸಭಾ ವಿಪಕ್ಷನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಜಯ್ ಅವರ ತಂದೆ-ತಾಯಿ ಕುಟುಂಬದವರು, ನಟಿ ತ್ರಿಷಾ ಕೃಷ್ಣನ್, ಅಪಾರ ಅಭಿಮಾನಿಗಳು, ಟಿವಿಕೆ ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಟಿವಿಕೆ, ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಬೆಂಬಲದೊಂದಿಗೆ 120 ಶಾಸಕರ ಬಲದ ಮೂಲಕ ವಿಜಯ್ ಸರ್ಕಾರ ರಚನೆ ಮಾಡಿದ್ದಾರೆ. 1967ರ ನಂತರ ಡಿಎಂಕೆ ಮತ್ತು ಎಐಎಡಿಎಂಕೆ ಹೊರತಾಗಿ ಅಧಿಕಾರ ಹಿಡಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ವಿಜಯ್ ಪಾತ್ರರಾಗಿದ್ದಾರೆ. ಇಂದಿನಿಂದ ದ್ರಾವಿಡ ನಾಡಿನಲ್ಲಿ ವಿಜಯ್ ಯುಗಾರಂಭವಾದಂತಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ದಳಪತಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೊಸ ಚರಿತ್ರೆ ಸೃಷ್ಟಿಸುವ ಮೂಲಕ ನಟ ವಿಜಯ್ ತಮಿಳುನಾಡಿನ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದಿನಿಂದ ತಮಿಳುನಾಡಿನಲ್ಲಿ ಹೊಸ ಯುಗಾರಂಭವಾಗಲಿದೆ.

ದಳಪತಿ ವಿಜಯ್ ಚುನಾವಣೆಯಲ್ಲಿ ತಮಿಳುನಾಡಿನ ಜನತೆಗೆ ನೀಡಿದ್ದ ಭರವಸೆಗಳು: ಟಿವಿಕೆ ಪಕ್ಷದ ಪ್ರಣಾಳಿಕೆಯಲ್ಲಿನ ಪ್ರಮುಖ ಅಂಶಗಳು:

  • ಮನೆಯ ಯಜಮಾನಿಗೆಗೆ ತಿಂಗಳಿಗೆ 2,500 ರೂ ಸಹಾಯಧನ
  • ಅನ್ನಪೂರ್ಣಿ ಸೂಪರ್ ಸಿಕ್ಸ್ ಸ್ಕೀಮ್ ಮೂಲಕ ಪ್ರತೀ ಕುಟುಂಬಕ್ಕೆ ವರ್ಷಕ್ಕೆ 6 ಉಚಿತ ಎಲ್​ಪಿಜಿ ಸಿಲಿಂಡರ್
  • ವಾರ್ಷಿಕ 5 ಲಕ್ಷ ರೂಗಿಂತ ಕಡಿಮೆ ಆದಾಯವಿರುವ ಕುಟುಂಬದ ಹೆಣ್ಣುಮಗಳ ಮದುವೆಗೆ 8 ಗ್ರಾಂ ಚಿನ್ನ ಮತ್ತು ರೇಷ್ಮೆ ಸೀರೆ
  • ಮಹಿಳಾ ಸ್ವಸಹಾಯ ಸಂಘಗಳಿಗೆ 5 ಲಕ್ಷ ರೂವರೆಗೆ ಬಡ್ಡಿರಹಿತ ಸಾಲ.
  • ವೆಟ್ರಿ ಪ್ರಯಾಣಂ ಸ್ಕೀಮ್ ಮೂಲಕ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ.
  • ಕಾಮರಾಜರ್ ಕಲಿವಿ ಉರುದಿ ತಿಟ್ಟಂ ಸ್ಕೀಮ್ ಮೂಲಕ ಮಕ್ಕಳಿಗೆ ಶಿಕ್ಷಣ ಮುಂದುವರಿಸಲು ನೆರವಾಗಲು ಪೋಷಕರಿಗೆ ವರ್ಷಕ್ಕೆ 15,000 ರೂ ಸಹಾಯಧನ.
  • ಪ್ರತೀ ನವಜಾತ ಶಿಶುವಿಗೆ ಚಿನ್ನದ ಉಂಗುರ ಮತ್ತು ವೆಲ್ಕಮ್ ಕಿಟ್.
  • ರೇಷನ್ ಅಂಗಡಿಗಳು, ಶಾಲೆ ಮತ್ತು ಕಾಲೇಜುಗಳಲ್ಲಿ ಉಚಿತ ಸ್ಯಾನಿಟರಿ ಪ್ಯಾಡ್ ವಿತರಣೆಯ ವ್ಯವಸ್ಥೆ.
  • ಪ್ರತೀ ಮನೆಗೆ 200 ಯುನಿಟ್​ಗಳಷ್ಟು ಉಚಿತ ವಿದ್ಯುತ್
  • ಎಲ್ಲಾ ಮನೆಗಳಿಗೂ ಉಚಿತ ಕುಡಿಯುವ ನೀರಿನ ಸಂಪರ್ಕ.
  • ಕೃಷಿ ಮತ್ತು ರೈತರಿಗೆ ಬೆಂಬಲ
  • ಕೃಷಿ ಸಹಕಾರಿ ಬೆಳೆ ಸಾಲಗಳು ಶೇ. 50ರಷ್ಟು ಮನ್ನಾ
  • ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ, ಬೆಳೆ ವಿಮೆ ಮತ್ತು ಕೃಷಿ ಬೆಂಬಲ.
  • ಯುವಜನರು, ವಿದ್ಯಾರ್ಥಿಗಳಿಗೆ ನೆರವು
  • ನಿರುದ್ಯೋಗಿಗಳಿಗೆ ಧನಸಹಾಯ ನೀಡಲಾಗುತ್ತದೆ. ಪದವೀಧರರಿಗೆ ತಿಂಗಳಿಗೆ 4,000 ರೂ, ಹಾಗು ಡಿಪ್ಲೊಮಾ ಆದವರಿಗೆ ತಿಂಗಳಿಗೆ 2,000-2,500 ರೂ ನೆರವು.
  • 5 ಲಕ್ಷ ಯುವಕರಿಗೆ ಸ್ಟೈಪೆಂಡ್ ಜೊತೆಗೆ ಇಂಟರ್ನ್​ಶಿಪ್.
  • 5 ಲಕ್ಷ ಹೊಸ ಸರ್ಕಾರಿ ನೌಕರಿಗಳು
  • 20 ಲಕ್ಷ ರೂವರೆಗೆ ಅಡಮಾನರಹಿತ ಶಿಕ್ಷಣ ಸಾಲ
  • ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತವಾದ ಎಐ ಶಕ್ತ ಕೋಚಿಂಗ್ ಸೌಲಭ್ಯ
  • ನೂರು ಕಾಮರಾಜರ್ ಶಾಲೆಗಳು
  • ವೃದ್ಧರಿಗೆ ಮತ್ತು ವಿಶೇಷ ಚೇತನರಿಗೆ ಮಾಸಿಕ 3,000 ರೂ ಪಿಂಚಣಿ
  • ಪ್ರತೀ ಕುಟುಂಬಕ್ಕೆ 25 ಲಕ್ಷ ರೂ ಹೆಲ್ತ್ ಇನ್ಷೂರೆನ್ಸ್ ಪಾಲಿಸಿ. ಆಧುನಿಕ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯ, ಉಚಿತ ಆರೋಗ್ಯ ತಪಾಸಣೆ ಇತ್ಯಾದಿ ಸೌಲಭ್ಯ.
  • ತಮಿಳುನಾಡನ್ನು ಮಾದಕವಸ್ತು ಮುಕ್ತ ಮಾಡಲು ವಿವಿಧ ಕ್ರಮಗಳು
  • ಮೀನುಗಾರಿಕೆ ಕಡಿಮೆ ಇರುವ ಸೀಸನ್​ನಲ್ಲಿ ಮೀನುಗಾರರಿಗೆ 27,000 ರೂ ಸಹಾಯಧನ
  • ಮೀನುಗಾರಿಕೆ ದೋಣಿಗೆ ಬಳಸುವ ಡೀಸಲ್​ಗೆ ಸಬ್ಸಿಡಿ, 25 ಲಕ್ಷ ರೂ ಅಪಘಾತ ವಿಮೆ
  • ಮೀನುಗಾರರಿಗೆ ಖಾಯಂ ವಸತಿ
Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್