LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

El Nino 2026 : ಭಾರತವನ್ನು ಆತಂಕಕ್ಕೀಡು ಮಾಡುತ್ತಿರುವ ಎಲ್ ನಿನೋ.. ಇತಿಹಾಸದಲ್ಲೇ ಕಾಣದ ಬರ ಎದುರಾಗಲಿದೆಯೇ ?

ಬೇಸಿಗೆ ಮುಗಿದು ಮಳೆಗಾಲ ಆರಂಭವಾದರೂ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತೀವ್ರತೆ ಕಡಿಮೆಯಾಗಿಲ್ಲ. ಇದಕ್ಕೆ ಪ್ರಮುಖ ಕಾರಣವಾಗಿ ವೇಗವಾಗಿ ತೀವ್ರಗೊಳ್ಳುತ್ತಿರುವ ‘ಎಲ್ ನಿನೋ’ ಹವಾಮಾನ ವಿದ್ಯಮಾನವನ್ನು ತಜ್ಞರು ಗುರುತಿಸಿದ್ದಾರೆ. ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಎಲ್ ನಿನೋ ಈ ಬಾರಿ ಇತಿಹಾಸದಲ್ಲೇ ಅತ್ಯಂತ ಪ್ರಬಲ ರೂಪ ತಾಳುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಇದರ ಪರಿಣಾಮವಾಗಿ ಭಾರತದಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ ಸಾಧ್ಯತೆ ಇದ್ದು, ಹಲವೆಡೆ ಬರ, ತೀವ್ರ ಬಿಸಿಗಾಳಿ ಹಾಗೂ ನೀರಿನ ಕೊರತೆ ಎದುರಾಗುವ ಆತಂಕ ವ್ಯಕ್ತವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಕೂಡ ಈ ವರ್ಷ ಸಾಮಾನ್ಯಕ್ಕಿಂತ ಕಡಿಮೆ ಮಳೆಯ ಮುನ್ಸೂಚನೆ ನೀಡಿದ್ದು, ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಿದೆ.

ಹೌದು. ದಿನದಿಂದ ದಿನಕ್ಕೆ ಬಲಗೊಳ್ಳುತ್ತಿರುವ ಎಲ್ ನಿನೋ ವಿಶ್ವದಾದ್ಯಂತ ಹವಾಮಾನ ವಿಜ್ಞಾನಿಗಳಲ್ಲಿ ಆತಂಕ ಮೂಡಿಸಿದೆ. ಅಮೆರಿಕದ ನ್ಯಾಷನಲ್ ಓಶಿಯಾನಿಕ್ ಅಂಡ್ ಅಟ್ಮಾಸ್ಫೆರಿಕ್ ಅಡ್ಮಿನಿಸ್ಟ್ರೇಶನ್ (NOAA) ಪ್ರಕಾರ, ಈ ಬಾರಿ ಎಲ್ ನಿನೋ ಇತಿಹಾಸದಲ್ಲೇ ಅತ್ಯಂತ ಪ್ರಬಲ ಹವಾಮಾನ ಬದಲಾವಣೆಗಳಲ್ಲಿ ಒಂದಾಗುವ ಸಾಧ್ಯತೆ ಇದೆ. ಈ ವರ್ಷದ ಅಂತ್ಯದ ವೇಳೆಗೆ ಇದು ಇನ್ನಷ್ಟು ಬಲಗೊಂಡು, ಉತ್ತರಾರ್ಧಗೋಳದ ಚಳಿಗಾಲದಲ್ಲಿ ಗರಿಷ್ಠ ಮಟ್ಟ ತಲುಪುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಹಿಂದಿನ ದಾಖಲೆಗಳನ್ನು ಮೀರಿಸುವ ಸಾಧ್ಯತೆ

ಹವಾಮಾನ ವಿಜ್ಞಾನಿ ಜೀಕ್ ಹೌಸ್‌ಫಾದರ್ ಅವರು 14 ವಿವಿಧ ಹವಾಮಾನ ಮಾದರಿಗಳಿಂದ ಸಂಗ್ರಹಿಸಿದ 667 ಮುನ್ಸೂಚನೆಗಳ ವಿಶ್ಲೇಷಣೆಯ ಪ್ರಕಾರ, ಈ ಬಾರಿಯ ಎಲ್ ನಿನೋ 1982–83, 1997–98 ಹಾಗೂ 2015–16ರ ಪ್ರಬಲ ಎಲ್ ನಿನೋ ದಾಖಲೆಗಳನ್ನೂ ಮೀರಿಸುವ ಸಾಧ್ಯತೆ ಇದೆ. 2015–16ರಲ್ಲಿ ಗರಿಷ್ಠ 2.75 ಡಿಗ್ರಿ ಸೆಲ್ಸಿಯಸ್ ಸಮುದ್ರ ಮೇಲ್ಮೈ ತಾಪಮಾನ ವ್ಯತ್ಯಾಸ ದಾಖಲಾಗಿತ್ತು. ಆದರೆ ಈ ಬಾರಿ ಅದು 3.6 ಡಿಗ್ರಿ ಸೆಲ್ಸಿಯಸ್ ವರೆಗೆ ಏರಬಹುದೆಂದು ತಜ್ಞರು ಅಂದಾಜಿಸಿದ್ದಾರೆ.

ಪ್ರಸ್ತುತ ಪರಿಸ್ಥಿತಿ ಹೇಗಿದೆ?

NOAA ನೀಡಿರುವ ಮಾಹಿತಿಯಂತೆ, ಜುಲೈ 13ರ ವೇಳೆಗೆ ಪೆಸಿಫಿಕ್ ಮಹಾಸಾಗರದ ನಿನೋ 3.4 ಪ್ರದೇಶದಲ್ಲಿ ಸಮುದ್ರ ಮೇಲ್ಮೈ ತಾಪಮಾನ ವ್ಯತ್ಯಾಸ 2.2 ಡಿಗ್ರಿ ಸೆಲ್ಸಿಯಸ್ ತಲುಪಿದೆ.1982ರಿಂದ ಲಭ್ಯವಿರುವ ಉಪಗ್ರಹ ದಾಖಲೆಗಳನ್ನು ಪರಿಶೀಲಿಸಿದಾಗ, ಒಂದು ಕ್ಯಾಲೆಂಡರ್ ವರ್ಷದಲ್ಲಿ ಇಷ್ಟು ಬೇಗ ಈ ಮಟ್ಟದ ತಾಪಮಾನ ಏರಿಕೆ ದಾಖಲಾಗಿರುವುದು ಇದೇ ಮೊದಲ ಬಾರಿ ಎಂದು ವರದಿಗಳು ತಿಳಿಸಿವೆ.ಈ ಮಟ್ಟದ ತಾಪಮಾನ ಏರಿಕೆ ಮುಂದಿನ ದಿನಗಳಲ್ಲಿ ಜಗತ್ತಿನ ಹಲವು ಭಾಗಗಳಲ್ಲಿ ತೀವ್ರ ಉಷ್ಣ ಅಲೆ, ಭಾರಿ ಪ್ರವಾಹ ಹಾಗೂ ಬರ ಪರಿಸ್ಥಿತಿಗಳಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಭಾರತದ ಮೇಲೆ ಏನು ಪರಿಣಾಮ?

ಭಾರತೀಯ ಹವಾಮಾನ ಇಲಾಖೆ (IMD) ಅಂದಾಜಿನ ಪ್ರಕಾರ, ಈ ವರ್ಷದ ನೈರುತ್ಯ ಮುಂಗಾರು ಮಳೆ ದೀರ್ಘಾವಧಿಯ ಸರಾಸರಿಯ 90 ಶೇಕಡಾ ಮಾತ್ರ ದಾಖಲಾಗುವ ಸಾಧ್ಯತೆ ಇದೆ.ಸಾಮಾನ್ಯವಾಗಿ ಎಲ್ ನಿನೋ ಪರಿಣಾಮವನ್ನು ತಗ್ಗಿಸುವ ಹಿಂದೂ ಮಹಾಸಾಗರ ದ್ವಿಧ್ರುವ (Indian Ocean Dipole – IOD) ಈ ಬಾರಿ ತಟಸ್ಥ ಸ್ಥಿತಿಯಲ್ಲಿ ಇರುವುದರಿಂದ, ಎಲ್ ನಿನೋ ಪರಿಣಾಮವನ್ನು ಕಡಿಮೆ ಮಾಡುವ ಸಹಜ ವ್ಯವಸ್ಥೆ ಈ ಬಾರಿ ಭಾರತಕ್ಕೆ ನೆರವಾಗುವುದಿಲ್ಲ ಎಂದು IMD ತಿಳಿಸಿದೆ. ಇದರಿಂದಾಗಿ ಕಳೆದ ಜೂನ್ ತಿಂಗಳಲ್ಲಿ ದೇಶದಲ್ಲಿ ಸಾಮಾನ್ಯಕ್ಕಿಂತ 40 ಶೇಕಡಾ ಕಡಿಮೆ ಮಳೆ ದಾಖಲಾಗಿದೆ. ಕಳೆದ 126 ವರ್ಷಗಳ ಇತಿಹಾಸದಲ್ಲಿ 5ನೇ ಅತಿ ಕಡಿಮೆ ಜೂನ್ ಮಳೆ ಇದಾಗಿದೆ ಎಂದು ವರದಿಗಳು ತಿಳಿಸಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ