LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Good News : ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ ; ಭತ್ತದ ಕನಿಷ್ಠ ಬೆಂಬಲ ಬೆಲೆ ರೂ. 2,441ಕ್ಕೆ ಏರಿಕೆ

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರೈತರ ಹಿತದೃಷ್ಟಿಯಿಂದ ಹಾಗೂ ಇಂಧನ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹಲವು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಮುಖ್ಯವಾಗಿ ರೈತರ ಆದಾಯ ಹೆಚ್ಚಿಸಲು ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಗಣನೀಯವಾಗಿ ಏರಿಕೆ ಮಾಡಲಾಗಿದ್ದು, ಭತ್ತದ ಬೆಲೆಯಲ್ಲಿ ಏರಿಕೆ ಮಾಡುವ ಮೂಲಕ ಕೃಷಿಕರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ನೀಡಲು ಸರ್ಕಾರ ಮುಂದಾಗಿದೆ. ಇದರೊಂದಿಗೆ ದೇಶದ ಕಲ್ಲಿದ್ದಲು ನಿಕ್ಷೇಪಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಬೃಹತ್ ಹೂಡಿಕೆಯ ಯೋಜನೆಗಳಿಗೆ ಚಾಲನೆ ನೀಡಲಾಗಿದೆ.ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮೋದಿ ಸರ್ಕಾರವು ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅವುಗಳ ವಿವರ ಹೀಗಿದೆ:

  • ಕೋಲ್ ಗ್ಯಾಸಿಫಿಕೇಶನ್ (ಕಲ್ಲಿದ್ದಲು ಅನಿಲೀಕರಣ): ಸುಮಾರು 37,500 ಕೋಟಿ ರೂ. ವೆಚ್ಚದ ಕಲ್ಲಿದ್ದಲು ಅನಿಲೀಕರಣ ಯೋಜನೆಗೆ ಸಚಿವ ಸಂಪುಟವು ಅನುಮೋದನೆ ನೀಡಿದೆ.
  • ಬೆಂಬಲ ಬೆಲೆ ಏರಿಕೆ: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಸರ್ಕಾರ ಹೆಚ್ಚಿಸಿದೆ. ಇದಕ್ಕಾಗಿ ಸರ್ಕಾರವು 2 ಲಕ್ಷದ 60 ಸಾವಿರ ಕೋಟಿ ರೂ. ಮೀಸಲಿಡಲಿದೆ. ಹೂಡಿಕೆ ವೆಚ್ಚದ ಮೇಲೆ ಶೇಕಡಾ 50 ರಷ್ಟು ಲಾಭವನ್ನು ಸೇರಿಸಿ ಈ ದರವನ್ನು ನಿಗದಿಪಡಿಸಲಾಗಿದೆ.
  • ಭತ್ತದ ಬೆಲೆ: ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು 2,441 ರೂ. ಗೆ ನಿಗದಿಪಡಿಸಲಾಗಿದೆ. ಭತ್ತದ ಗ್ರೇಡ್-ಎ ರಕಕ್ಕೆ ಬೆಂಬಲ ಬೆಲೆಯನ್ನು 2,461 ರೂ. ಗೆ ನಿಗದಿ ಮಾಡಲಾಗಿದೆ.
  • ವಿಮಾನ ನಿಲ್ದಾಣ: ನಾಗ್ಪುರ ವಿಮಾನ ನಿಲ್ದಾಣದ ಆಧುನೀಕರಣಕ್ಕೂ ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ.
  • ಇಂಧನ ಸ್ವಾವಲಂಬನೆ: ಕಲ್ಲಿದ್ದಲು ಅನಿಲೀಕರಣದಿಂದಾಗಿ ಎಲ್‌ಎನ್‌ಜಿ (LNG) ಆಮದು ಮಾಡಿಕೊಳ್ಳುವ ಹೊರೆ ಕಡಿಮೆಯಾಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
  • ಕಲ್ಲಿದ್ದಲು ನಿಕ್ಷೇಪ: ಭಾರತದಲ್ಲಿ 401 ಬಿಲಿಯನ್ ಟನ್ ಕಲ್ಲಿದ್ದಲು ನಿಕ್ಷೇಪಗಳಿದ್ದು, ಇದು ಮುಂದಿನ 400 ವರ್ಷಗಳಿಗೆ ಸಾಕಾಗಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಈ ಕ್ಷೇತ್ರದಲ್ಲಿ ಸುಮಾರು 3 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯನ್ನು ನಿರೀಕ್ಷಿಸಲಾಗಿದೆ.
https://twitter.com/i/status/2054506813048160395
Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ