LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

GOOD NEWS: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 'OPS ಭಾಗ್ಯ': ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯು ಬಹುದೊಡ್ಡ ಸಿಹಿಸುದ್ದಿ ನೀಡಿದೆ. 2005-06 ಹಾಗೂ 2006-07ನೇ ಸಾಲಿನಲ್ಲಿ, ಅಂದರೆ ದಿನಾಂಕ 01-04-2006ಕ್ಕಿಂತ ಮುಂಚಿತವಾಗಿ ಹೊರಡಿಸಲಾದ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆಯಾಗಿ, ಆ ದಿನಾಂಕದಂದು ಅಥವಾ ನಂತರದಲ್ಲಿ ಸೇವೆಗೆ ಸೇರಿದ ಪ್ರಾಥಮಿಕ ಶಾಲಾ ಸಹ ಶಿಕ್ಷಕರನ್ನು ಹಳೆಯ ಡಿಫೈನ್ಡ್ ಪಿಂಚಣಿ (Defined Pension Scheme / OPS) ವ್ಯಾಪ್ತಿಗೆ ತಂದು ಇಲಾಖೆಯ ಆಯುಕ್ತರ ಕಚೇರಿ ಅಧಿಕೃತ ಜ್ಞಾಪನಾ ಪತ್ರ ಹೊರಡಿಸಿದೆ.

ಹಳೆ ಪಿಂಚಣಿ ಯೋಜನೆಗೆ ಒಳಪಡಿಸಲು ಸೂಚನೆ

ಬೆಂಗಳೂರು, ಮೈಸೂರು, ಧಾರವಾಡ ಮತ್ತು ಕಲಬುರಗಿ ವಿಭಾಗಗಳ ವ್ಯಾಪ್ತಿಯಿಂದ ಸಲ್ಲಿಕೆಯಾಗಿದ್ದ ಪ್ರಸ್ತಾವನೆಗಳಿಗೆ ಆರ್ಥಿಕ ಇಲಾಖೆಯು ಸಹಮತಿ ನೀಡಿದೆ. ಇದರ ಅನ್ವಯ 2006ರ ಏಪ್ರಿಲ್ 1ಕ್ಕೂ ಮುನ್ನ ಅಧಿಸೂಚನೆ ಹೊರಬಿದ್ದು, ನಂತರ ಕರ್ತವ್ಯಕ್ಕೆ ಹಾಜರಾದ ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಹಳೆಯ ಡಿಫೈನ್ಡ್ ಪಿಂಚಣಿ ಸೌಲಭ್ಯ ಅನ್ವಯವಾಗಲಿದೆ. ಇವರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಗಳ (KCSR) ನಿಯಮ 2-C ಅನ್ವಯವಾಗುವುದಿಲ್ಲ ಬದಲಿಗೆ ಸಾಮಾನ್ಯ ಪಿಂಚಣಿಯ ಭಾಗ-IV ಅನ್ವಯವಾಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಎನ್‌ಪಿಎಸ್ ಕಡಿತ ಸ್ಥಗಿತ, ಜಿಪಿಎಫ್ ಖಾತೆ ಆರಂಭಕ್ಕೆ ಆದೇಶ

ಈ ಆದೇಶದ ಹಿನ್ನೆಲೆಯಲ್ಲಿ ಅರ್ಹ ಶಿಕ್ಷಕರಿಗೆ ಎಚ್‌ಆರ್‌ಎಂಎಸ್-2.0 (HRMS-2.0) ತಂತ್ರಾಂಶದಲ್ಲಿ ಪ್ರತಿ ತಿಂಗಳು ಕಡಿತವಾಗುತ್ತಿದ್ದ ಎನ್‌ಪಿಎಸ್ (NPS) ವಂತಿಕೆಯನ್ನು ತಕ್ಷಣವೇ ಸ್ಥಗಿತಗೊಳಿಸಲು ನಿರ್ದೇಶಿಸಲಾಗಿದೆ. ಜೊತೆಗೆ, ಅವರಿಗೆ ನೂತನ ಜಿಪಿಎಫ್ (GPF) ಖಾತೆಗಳನ್ನು ಸೃಜಿಸಲು ಹಾಗೂ ಈವರೆಗೆ ಅವರ ಪ್ರಾನ್ (PRAN) ಖಾತೆಯಲ್ಲಿ ಜಮೆಯಾಗಿರುವ ನೌಕರ ಮತ್ತು ಸರ್ಕಾರದ ವಂತಿಕೆಯ ಹಣವನ್ನು ನಿಯಮಾನುಸಾರ ಹಿಂಪಡೆದು ಇತ್ಯರ್ಥಪಡಿಸುವ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಡಿಡಿಪಿಐ (DDPI) ಹಾಗೂ ಬಿಇಒ (BEO) ಗಳಿಗೆ ಶಿಕ್ಷಣ ಇಲಾಖೆಯ ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

news_1789899480_1_639.webp

 

news_1789899480_0_174.webp

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG UPDATE: ಮಾಜಿ ಸಚಿವ ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರು, ಚಾಲಕನಿಗೆ ಗಂಭೀರ ಗಾಯಬೆಳಗಾವಿ ಫ್ರಿಡ್ಜ್‌ ಸ್ಫೋಟ ದುರಂತಕ್ಕೆ ಟ್ವಿಸ್ಟ್‌ : ಆಕಸ್ಮಿಕ ಅವಘಡವಲ್ಲ, ಪಕ್ಕಾ ಪ್ಲ್ಯಾನ್ ಮಾಡಿ ನಡೆಸಿದ ಸಾಮೂಹಿಕ ಹತ್ಯೆ?!BREAKING : ಗದಗ ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ಗುಡುಗಿದ ಹೆಚ್.ಕೆ. ಪಾಟೀಲ್!'ನನಗೆ ಎಷ್ಟು ದಿನ ಟೈಮ್ ಇದೆಯೋ ಅವಕಾಶ ಇದೆಯೋ ಗೊತ್ತಿಲ್ಲ' : ಅಧಿಕಾರದ ಬಗ್ಗೆ ಸಿಎಂ ಡಿಕೆಶಿ ಮಾರ್ಮಿಕ ಮಾತು!ಷೇರು ಮಾರುಕಟ್ಟೆ ಆಮಿಷವೊಡ್ಡಿ ಕೋಟಿ ಲೂಟಿ: ಸೈಬರ್ ಪೊಲೀಸರ ಬಲೆಗೆ ಖತರ್ನಾಕ್ ಗ್ಯಾಂಗ್BIG BREAKING: ಕಾರ್ಕಳ ಬಳಿ ಮಾಜಿ ಸಚಿವ ಬಿ.ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲುಇದು ಈ ವಾರದ 'ವೃಷಭ ರಾಶಿ'ಯವರ ಭವಿಷ್ಯ: ಹೇಗಿದೆ ಓದಿ!GOOD NEWS: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 'OPS ಭಾಗ್ಯ': ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶಹೀಗಿದೆ 'ಮೇಷ ರಾಶಿ'ಯ ವಾರದ ಭವಿಷ್ಯ ಓದಿ!BIG NEWS: ಸೂರಜ್ ರೇವಣ್ಣ ಪ್ರಕರಣದಲ್ಲಿ ಮರು ತನಿಖೆಯಲ್ಲೂ ಸಿಗಲ್ಲಿ ಸಾಕ್ಷಿ: 2ನೇ ಬಾರಿಯೂ ‘ಬಿ’ ರಿಪೋರ್ಟ್ ಸಲ್ಲಿಸಿದ CID