LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀನು ಮತ್ತೆ ಗೆದ್ದರೆ ನಾನು ನಿನ್ನ ಮನೆ ವಾಚ್ ಮೆನ್ ಆಗುವೆ; ನೀನು ಸೋತರೆ HDK ಮನೆಯ ವಾಚ್ ಮೆನ್ ಆಗುವೆಯಾ? ಪ್ರದೀಪ್ ಈಶ್ವರ್ ಗೆ JDS ಶಾಸಕನ ಸವಾಲು

ಚಿಕ್ಕಬಳ್ಳಾಪುರ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನೀನು ಮತ್ತೆ ಗೆದ್ದರೆ ನಾನು ನಿನ್ನ ಮನೆಯ ವಾಚ್ ಮೆನ್ ಆಗುವೆ. ನಿನಗೆ ಸೆಲ್ಯೂಟ್ ಹೊಡೆಯುವೆ. ಒಂದು ವೇಳೆ ನೀನು ಸೋತರೆ ಹೆಚ್.ಡಿ.ಕುಮಾರಸ್ವಾಮಿ ಮನೆಯ ವಾಚ್ ಮೆನ್ ಆಗುವೆಯಾ? ಗಂಡಸಾಗಿದ್ದರೆ ನನ್ನ ಈ ಸವಾಲು ಸ್ವೀಕರಿಸು ಎಂದು ಜೆಡಿಎಸ್ ಶಾಸಕ ಬಿ.ಎನ್.ರವಿಕುಮಾರ್, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಗೆ ಸವಾಲು ಹಾಕಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎನ್.ರವಿಕುಮಾರ್, ಜೆಡಿಎಸ್ ಪಕ್ಷ ದೇವೇಗೌಡತ್ರು, ಕುಮಾರಸ್ವಾಮಿ ಅವರ ವಿರುದ್ಧ ಮಾತನಾಡಿದರೆ ಸಹಿಸುವುದಿಲ್ಲ. ಕುಮಾರಸ್ವಾಮಿಯವರು ಎಲ್ಲಿಯಾದರೂ ಪ್ರದೀಪ್ ಈಶ್ವರ್ ಬಗ್ಗೆ ವೈಯಕ್ತಿಕವಾಗಿ ಟೀಕೆ ಮಾಡಿದ್ದಾರಾ? ಮಾಡಿದ್ದರೆ ನಾಅನು ಪ್ರದೀಪ್ ಅವರ ಕ್ಷಮೆ ಕೇಳುತ್ತೇನೆ. ಆದರೆ ಹೆಚ್.ಡಿ.ಕುಮಾರಸ್ವಾಮಿಯವರು ಸುಮ್ಮನಿದ್ದರೂ ಅವರ ವಿರುದ್ಧ ಪ್ರದೀಪ್ ಈಶ್ವರ್ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಪ್ರದೀಪ್ ಈಶ್ವರ್, ತಾನು ಪ್ರಧಾನಿ ಮೋದಿ, ಜೆಡಿಎಸ್ ಪಕ್ಷ ಹಾಗೂ ಜೆಡಿಒಎಸ್ ನಾಯಕರ ವಿರುದ್ಧ ಮಾತನಾಡಿದರೆ ನನ್ನನ್ನು ಸಚಿವರನ್ನಾಗಿ ಮಾಡುತ್ತಾರೆ ಎಂಬ ಭ್ರಮೆಯಲಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರದ ಸ್ಥಳೀಯ ಚುನಾವಣೆಯಲ್ಲಿಯೇ ಇವರಿಗೆ ಕಾಂಗ್ರೆಸ್ ಗೆಲ್ಲಿಸಿಕೊಳ್ಳಲು ಸಾಧ್ಯವಾಗಿಲ್ಲ. ಕಳೆದ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ಗೆಲುವಿಗೆ ಜೆಡಿಎಸ್ ಕೊಡುಗೆಯೂ ಇದೆ ಎಂದರು.

ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಬ್ನಡೆಸುತ್ತಿರುವ ಭ್ರಷ್ಟಾಚಾರದ ಬಗ್ಗೆ ಆ ಪಕ್ಷದ ಮುಖಂಡರೇ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ಶಾಸಕ ಪ್ರದೀಪ್ ಈಶ್ವರ್ ಕೊಡುಗೆ ಏನು? ಎಂದು ಪ್ರಶ್ನಿಸಿದ್ದಾರೆ. ಸ್ವಪಕ್ಷದ ಮುಖಂಡರೇ ಪ್ರದೀಪ್ ಈಶ್ವರ್ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ