LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

HOSTEL : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2026-27 ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ನ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-225528/220214, ನಿಲಯಪಾಲಕರು ಮಡಿಕೇರಿ 9742116601, ನಿಲಯಪಾಲಕರು ಕುಶಾಲನಗರ 9945960004, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: 8548068519, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ: 9972799091 ಹಾಹೂ ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ. 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

ಜೂ.22 ರಂದು ಪಿಂಚಣಿ ಅದಾಲತ್

ಧಾರವಾಡ :   ಹುಬ್ಬಳ್ಳಿ ರೈಲ್ವೆ ಅಂಚೆ ವಿಭಾಗದ ಅಂಚೆ ಇಲಾಖೆ ಪಿಂಚಣಿದಾರಿಗಾಗಿ ಪಿಂಚಣಿ ಅದಾಲತ್‍ನ್ನು ಜೂನ್ 22 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಗಿರಿಣಿ ಚಾಳ ಎದುರಿನ ರೈಲ್ವೆ ಅಂಚೆ ವಿಭಾಗದ ಅಧೀಕ್ಷಕರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.

ಸೇವೆಯಿಂದ ನಿವೃತ್ತರಾದ ನೌಕರರ ಪಿಂಚಣಿ ಮತ್ತು ಇತರೆ ನಿವೃತ್ತಿ ಸೌಲಭ್ಯಗಳ ಹಾಗೂ ಕುಟುಂಬ ಪಿಂಚಣಿದಾರರ ಅಹವಾಲುಗಳೇನಾದರೂ ಇದ್ದಲ್ಲಿ ಅವುಗಳನ್ನು ಅದಾಲತ್‍ನಲ್ಲಿ ಆಲಿಸಲಾಗುತ್ತದೆ. ಗ್ರಾಮೀಣ ಅಂಚೆ ಸೇವಕರು ಮತ್ತಿತರಿಗೆ ಅದಾಲತ್‍ನಲ್ಲಿ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ. ಅದಾಲತ್‍ನಲ್ಲಿ ಭಾಗವಹಿಸುವವರಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

ಅದಾಲತ್‍ನಲ್ಲಿ ತೀರ್ಮಾನಿಸುವ ಅಹವಾಲುಗಳಿದ್ದಲ್ಲಿ ಅಧೀಕ್ಷಕರು, ರೈಲ್ವೆ ಅಂಚೆ ವಿಭಾಗ, ಹುಬ್ಬಳ್ಳಿ 580029 ಈ ವಿಳಾಸಕ್ಕೆ ಜೂನ್ 18 ರೊಳಗಾಗಿ ಲಿಖಿತ ರೂಪದಲ್ಲಿ ಅಥವಾ [email protected] ಇಮೇಲ್ ಮೂಲಕ ಕಳಿಸಬಹುದು ಎಂದು ಹುಬ್ಬಳ್ಳಿ ರೈಲ್ವೆ ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ