LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

HOSTEL : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ಸಾಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ (ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ) ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

2026-27 ನೇ ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯ ಮಡಿಕೇರಿ ಹಾಗೂ ಕುಶಾಲನಗರದ ವಿದ್ಯಾರ್ಥಿ ನಿಲಯಗಳಿಗೆ (ಪಿಯುಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆನ್‍ಲೈನ್ ನ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) https://shp.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-225528/220214, ನಿಲಯಪಾಲಕರು ಮಡಿಕೇರಿ 9742116601, ನಿಲಯಪಾಲಕರು ಕುಶಾಲನಗರ 9945960004, ತಾಲ್ಲೂಕು ಮಾಹಿತಿ ಕೇಂದ್ರ ಸೋಮವಾರಪೇಟೆ ದೂರವಾಣಿ ಸಂಖ್ಯೆ: 8548068519, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್.ಎಂ.ಸಿ.ಕಾಲೇಜು ಹತ್ತಿರ, ಮಡಿಕೇರಿ ಕೊಡಗು ಜಿಲ್ಲೆ: 9972799091 ಹಾಹೂ ತಾಲ್ಲೂಕು ಮಾಹಿತಿ ಕೇಂದ್ರ ವಿರಾಜಪೇಟೆ ದೂ.ಸಂ. 9900731037 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

ಜೂ.22 ರಂದು ಪಿಂಚಣಿ ಅದಾಲತ್

ಧಾರವಾಡ :   ಹುಬ್ಬಳ್ಳಿ ರೈಲ್ವೆ ಅಂಚೆ ವಿಭಾಗದ ಅಂಚೆ ಇಲಾಖೆ ಪಿಂಚಣಿದಾರಿಗಾಗಿ ಪಿಂಚಣಿ ಅದಾಲತ್‍ನ್ನು ಜೂನ್ 22 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಗಿರಿಣಿ ಚಾಳ ಎದುರಿನ ರೈಲ್ವೆ ಅಂಚೆ ವಿಭಾಗದ ಅಧೀಕ್ಷಕರ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.

ಸೇವೆಯಿಂದ ನಿವೃತ್ತರಾದ ನೌಕರರ ಪಿಂಚಣಿ ಮತ್ತು ಇತರೆ ನಿವೃತ್ತಿ ಸೌಲಭ್ಯಗಳ ಹಾಗೂ ಕುಟುಂಬ ಪಿಂಚಣಿದಾರರ ಅಹವಾಲುಗಳೇನಾದರೂ ಇದ್ದಲ್ಲಿ ಅವುಗಳನ್ನು ಅದಾಲತ್‍ನಲ್ಲಿ ಆಲಿಸಲಾಗುತ್ತದೆ. ಗ್ರಾಮೀಣ ಅಂಚೆ ಸೇವಕರು ಮತ್ತಿತರಿಗೆ ಅದಾಲತ್‍ನಲ್ಲಿ ಪಾಲ್ಗೊಳ್ಳಲು ಅವಕಾಶವಿರುವುದಿಲ್ಲ. ಅದಾಲತ್‍ನಲ್ಲಿ ಭಾಗವಹಿಸುವವರಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.

ಅದಾಲತ್‍ನಲ್ಲಿ ತೀರ್ಮಾನಿಸುವ ಅಹವಾಲುಗಳಿದ್ದಲ್ಲಿ ಅಧೀಕ್ಷಕರು, ರೈಲ್ವೆ ಅಂಚೆ ವಿಭಾಗ, ಹುಬ್ಬಳ್ಳಿ 580029 ಈ ವಿಳಾಸಕ್ಕೆ ಜೂನ್ 18 ರೊಳಗಾಗಿ ಲಿಖಿತ ರೂಪದಲ್ಲಿ ಅಥವಾ [email protected] ಇಮೇಲ್ ಮೂಲಕ ಕಳಿಸಬಹುದು ಎಂದು ಹುಬ್ಬಳ್ಳಿ ರೈಲ್ವೆ ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್