LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬಿತ್ತು ಬ್ರೇಕ್ ನಿಯಮ ಮೀರಿದ್ರೆ ಬೀಳುತ್ತೆ ಕೇಸ್: ಈ ಹೊಸ ಮಾರ್ಗಸೂಚಿ ಪಾಲನೆ ಕಡ್ಡಾಯ

ಬೆಂಗಳೂರು: ಟಾಟಾ ಐಪಿಎಲ್ 2026ರ ಮಹತ್ವದ ಫೈನಲ್ ಪಂದ್ಯಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಲಗ್ಗೆ ಇಟ್ಟ ಬೆನ್ನಲ್ಲೇ ಸಿಲಿಕಾನ್ ಸಿಟಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ದಿನಾಂಕ 31/05/2026 ರಂದು ನಡೆಯಲಿರುವ ಈ ಹೈವೋಲ್ಟೇಜ್ ಫೈನಲ್ ಪಂದ್ಯದ ನೆಪದಲ್ಲಿ ನಗರದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರದಂತೆ ತಡೆಯಲು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯು ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿಗಳು ಹಾಗೂ ಸಾರ್ವಜನಿಕ ಸಲಹೆಯನ್ನು ಒಳಗೊಂಡ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಫ್ಯಾನ್ಸ್ ಅತಿಯಾದ ಉತ್ಸಾಹಕ್ಕೆ ಬ್ರೇಕ್ ಹಾಕಲು ಪೊಲೀಸರು ಭರ್ಜರಿ ಪ್ಲಾನ್ ಮಾಡಿಕೊಂಡಿದ್ದಾರೆ.

ಕಳೆದ ವರ್ಷದ ದುರಂತದ ಹಿನ್ನೆಲೆ:

2025ರ ಜೂನ್ 4ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ (Stampede) 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದರು ಮತ್ತು 33ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದರು. ಈ ಕಹಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಛೇರಿಯು ಈ ಬಾರಿ ಕಾನೂನು ಸುವ್ಯವಸ್ಥೆ ಕಾಪಾಡಲು ಯಾವುದೇ ರಿಸ್ಕ್ ತೆಗೆದುಕೊಳ್ಳದಿರಲು ನಿರ್ಧರಿಸಿದೆ.

ಹಾಗಾಗಿ, ಸಾರ್ವಜನಿಕರ ಸುರಕ್ಷತೆಗಾಗಿ ಪೊಲೀಸರು ಹೊರಡಿಸಿರುವ ಪ್ರಮುಖ ಕರಾರುಗಳು ಇಲ್ಲಿವೆ:

ಪಟಾಕಿ ಹಾಗೂ ಅಪಾಯಕಾರಿ ವಸ್ತುಗಳ ಬಳಕೆಗೆ ಕಂಪ್ಲೀಟ್ ನಿಷೇಧ:

ಪಂದ್ಯದ ಫಲಿತಾಂಶ ಏನೇ ಬರಲಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಪಟಾಕಿಗಳನ್ನು ಸಿಡಿಸುವಂತಿಲ್ಲ (Bursting Crackers). ಜನನಿಬಿಡ ಪ್ರದೇಶಗಳಲ್ಲಿ ಯಾವುದೇ ರೀತಿಯ ಅಪಾಯಕಾರಿ ವಸ್ತುಗಳನ್ನು (Dangerous Materials) ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಮೀರಿ ಪಟಾಕಿ ಹಚ್ಚಿದರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು

ರಸ್ತೆಗಳಲ್ಲಿ ಸಂಭ್ರಮಾಚರಣೆಗೆ ನೋ ಎಂಟ್ರಿ:

ಫೈನಲ್ ಪಂದ್ಯದ ಮುಕ್ತಾಯದ ನಂತರ ಕ್ರಿಕೆಟ್ ಪ್ರೇಮಿಗಳು ರಸ್ತೆಗಿಳಿದು ಅಥವಾ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಕೂಡಿ ವಿಜಯೋತ್ಸವ ಆಚರಿಸುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ. ಪ್ರತಿಯೊಬ್ಬರೂ ಶಾಂತಿ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ವೀಲಿಂಗ್, ಬೈಕ್ ರ್ಯಾಲಿಗಳ ಮೇಲೆ ಹದ್ದಿನ ಕಣ್ಣು:

ಪಂದ್ಯದ ನೆಪದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ರ್ಯಾಲಿಗಳನ್ನು ಮಾಡುವುದು, ಅತಿವೇಗದ ಚಾಲನೆ, ಪ್ರಾಣಾಂತಿಕ ವೀಲಿಂಗ್ ಹಾಗೂ ಸ್ಟಂಟ್‌ಗಳನ್ನು ಮಾಡುವುದು, ಕರ್ಕಶ ಹಾರ್ನ್ ಬಳಸುವುದು ಮತ್ತು ರಸ್ತೆ ತಡೆ ಉಂಟುಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಂಚಾರ ಪೊಲೀಸರ (Traffic Police) ಮಾರ್ಗಸೂಚಿಗಳನ್ನು ಪ್ರತಿಯೊಬ್ಬ ವಾಹನ ಸವಾರನೂ ಪಾಲಿಸಬೇಕು

ಮದ್ಯಪಾನ ಮತ್ತು ಅಸಭ್ಯ ವರ್ತನೆಗೆ ಇರಲಿದೆ ಹದ್ದಿನ ಕಣ್ಣು:

ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಅಶಾಂತಿ ಸೃಷ್ಟಿಸುವುದು, ಗಲಾಟೆ ಮಾಡುವುದು ಅಥವಾ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಪುಂಡರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ. ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಪ್ರತಿಯೊಬ್ಬರೂ ಶಾಂತಿ ಮತ್ತು ಶಿಸ್ತನ್ನು ಕಾಪಾಡಿಕೊಳ್ಳಬೇಕು ಎಂದು ಎಚ್ಚರಿಸಲಾಗಿದೆ.

ಸೋಶಿಯಲ್ ಮೀಡಿಯಾ ಟ್ರೋಲ್ಸ್, ದ್ವೇಷಪೂರಿತ ಪೋಸ್ಟ್‌ಗಳ ಮೇಲೆ ನಿಗಾ:


ಸಾಮಾಜಿಕ ಜಾಲತಾಣಗಳಲ್ಲಿ (Social Media) ಯಾವುದೇ ರೀತಿಯ ಪ್ರಚೋದನಾತ್ಮಕ ಪೋಸ್ಟ್‌ಗಳು, ದ್ವೇಷಪೂರಿತ ಸಂದೇಶಗಳು ಅಥವಾ ಸುಳ್ಳು ವದಂತಿಗಳನ್ನು ಹರಡುವ ಖಾತೆಗಳ ಮೇಲೆ ಸೈಬರ್ ಕ್ರೈಮ್ ಪೊಲೀಸರು ನಿಗಾ ಇಟ್ಟಿದ್ದಾರೆ. ಪಂದ್ಯದ ಫಲಿತಾಂಶ ಏನೇ ಬರಲಿ, ಎದುರಾಳಿ ಅಥವಾ ಇತರೆ ತಂಡಗಳ ಅಭಿಮಾನಿಗಳನ್ನು ಕೆಣಕುವುದು, ಅವಮಾನಿಸುವುದು ಅಥವಾ ಜಗಳಕ್ಕೆ ಕಾರಣವಾಗುವಂತೆ ವರ್ತಿಸುವುದನ್ನು ಬ್ಯಾನ್ ಮಾಡಲಾಗಿದೆ.

ಪೊಲೀಸ್ ಇಲಾಖೆಯ ಖಡಕ್ ಮನವಿ:

ನಗರದಲ್ಲಿ ಕಾನೂನು-ಸುವ್ಯವಸ್ಥೆ, ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡುವುದು ಕೇವಲ ಪೊಲೀಸರದ್ದಷ್ಟೇ ಅಲ್ಲ, ಅದು ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕನ ಮತ್ತು ಕ್ರಿಕೆಟ್ ಅಭಿಮಾನಿಯ ಕರ್ತವ್ಯವಾಗಿದೆ ಎಂದು ಕಮಿಷನರ್ ಕಛೇರಿ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BIG NEWS: ಸಿದ್ದರಾಮಯ್ಯ ಸಂಪುಟದ 20 ಸಚಿವರಿಗೆ ಕೊಕ್: ನೂತನ ಸರ್ಕಾರದಲ್ಲಿ ಹೊಸ ಮುಖಗಳಿಗೆರಾಜ್ಯ ರಾಜಕೀಯದಲ್ಲಿ ಲೆಕ್ಕ ಕೇಳಿದ ಬಿಜೆಪಿ :ಸಿಎಂ ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಬಹಿರಂಗ ಪತ್ರ ಆ ₹5,000 ಕೋಟಿ ಹಣ ಎಲ್ಲಿ ಹೋಗಿದೆ ಅಂತ ಹೇಳ್ತೀರಾ ಎಂದು ನೇರ ಪ್ರಶ್ನೆಉದ್ಯೋಗ ವಾರ್ತೆ : ‘ಸಶಸ್ತ್ರ ಸೀಮಾ ಬಲ’ದಲ್ಲಿ 404 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ |SSB Recruitment 2026BREAKING : ಖ್ಯಾತ ನಟ ಅಜಿತ್ ಕುಮಾರ್ ತಾಯಿ ‘ಮೋಹಿನಿ ಮಣಿ’ ನಿಧನ |Ajith Kumar’s mother Passed AwayBIG NEWS: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಾಲ್ವರು ಶಾಸಕರು ಗೈರಾಗುವ ಸಾಧ್ಯತೆಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆಂದು ಕಳೆದ 3 ವರ್ಷಗಳಿಂದ ಕ್ಷೌರ ಮಾಡದೇ ಹರಕೆ ಹೊತ್ತ ಅಭಿಮಾನಿ!IPL 2026: 2008ರಿಂದ ಇಲ್ಲಿಯವರೆಗೂ ಪ್ರತಿವರ್ಷ ಆರೆಂಜ್ ಕ್ಯಾಪ್ ಗೆದ್ದವರ ಪಟ್ಟಿ; ಈ ಬಾರಿ ಕೊಹ್ಲಿ ಕೈನಲ್ಲಿ ಆಗಲ್ಲ, ವೈಭವ್ ಹಿಂದಿಕ್ಕಿದರೆ ಗುಜರಾತ್‌ನ ಇಬ್ಬರಿಗಿದೆ ಅವಕಾಶBREAKING : ಶಿಕ್ಷಕರಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ : ‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ !ಅಯ್ಯೋ.. ‘AI’ ಮಾಡಿದ ಎಡವಟ್ಟು : ಸಣ್ಣ ತಪ್ಪು, ಕಂಪನಿಗೆ ಬರೋಬ್ಬರಿ 4,800 ಕೋಟಿ ರೂ. ನಷ್ಟ!ಕಾಲೇಜು ವಿದ್ಯಾರ್ಥಿಗಳಿಗೆ ನಗದು ಬಹುಮಾನ : ಅರ್ಜಿ ಆಹ್ವಾನ