LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

IPL 2026: ಪಂಜಾಬ್ vs ಹೈದರಾಬಾದ್ ಪಂದ್ಯದಲ್ಲಿ ಯಾರು ಗೆದ್ದರೆ ಆರ್‌ಸಿಬಿಗೆ ಲಾಭ? ಈ ತಂಡಕ್ಕೆ ಆರ್‌ಸಿಬಿ ಫ್ಯಾನ್ಸ್ ಫುಲ್ ಸಪೋರ್ಟ್

ಇಂದು ( ಮೇ 6 ) ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಐಪಿಎಲ್ 206ರ ಲೀಗ್ ಹಂತದ 49ನೇ ಪಂದ್ಯ ನಡೆಯಲಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಸತತ ಗೆಲುವುಗಳನ್ನು ಕಂಡು ಪ್ಲೇಆಫ್ ಪ್ರವೇಶದ ಸನಿಹಕ್ಕೆ ಬಂದು ಕಳೆದ ಪಂದ್ಯಗಳಲ್ಲಿ ಮಣ್ಣು ಮುಕ್ಕಿರುವ ಉಭಯ ತಂಡಗಳಿಗೂ ಈ ಪಂದ್ಯದಲ್ಲಿ ಗೆಲ್ಲುವುದು ಬಹು ಮುಖ್ಯದ್ದಾಗಿದೆ. ಗೆಲ್ಲುವ ತಂಡ ಪ್ಲೇಆಫ್ ಸುತ್ತಿಗೆ ಒಂದು ಹೆಜ್ಜೆ ಹತ್ತಿರವಾಗಲಿದ್ದು, ಕುತೂಹಲ ಹೆಚ್ಚಿಸಿದೆ.

ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ 15 ಅಂಕಗಳನ್ನು ಹೊಂದುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿಯಲಿದ್ದು, ಒಂದು ವೇಳೆ ಸನ್ ರೈಸರ್ಸ್ ಹೈದರಾಬಾದ್ ಗೆದ್ದರೆ 14 ಅಂಕಗಳ ಜತೆಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಇನ್ನು ಈ ಪಂದ್ಯ ಉಭಯ ತಂಡಗಳು ಮಾತ್ರವಲ್ಲದೇ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೂ ಸಹ ಬಹು ಮುಖ್ಯದ್ದಾಗಿದೆ. ಹೌದು, ಸಾಮಾಜಿಕ ಜಾಲತಾಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ಈ ತಂಡ ಗೆದ್ದರೆ ತಮ್ಮ ನೆಚ್ಚಿನ ತಂಡಕ್ಕೆ ಹೆಚ್ಚಿನ ಅನುಕೂಲ ಎಂದು ಚರ್ಚೆಗಳನ್ನು ನಡೆಸುತ್ತಿದ್ದಾರೆ.

ಹೌದು, ಇಂದಿನ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಗೆದ್ದರೆ ಆರ್‌ಸಿಬಿಗೆ ಹೆಚ್ಚು ಅನುಕೂಲ. ಏಕೆಂದರೆ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ ಟಾಪ್ 2 ಸ್ಥಾನವನ್ನು ಆ ತಂಡ ಖಚಿತಪಡಿಸಿಕೊಳ್ಳಲು ಸುಲಭವಾಗಲಿದ್ದು, ಇಂದಿನ ಪಂದ್ಯದಲ್ಲಿ ಸೋತರೆ ಟಾಪ್ 2 ಸ್ಥಾನಕ್ಕೆ ರೇಸ್ ಇನ್ನೂ ಉಳಿದುಕೊಳ್ಳಲಿದೆ.

ಆರ್‌ಸಿಬಿ ಹಾಗೂ ಪಂಜಾಬ್ ಎರಡೂ ತಂಡಗಳು 9 ಪಂದ್ಯಗಳನ್ನು ಆಡಿ ಸಮಬಲ ಸಾಧಿಸಿರುವುದರಿಂದ ಇಂದಿನ ಪಂದ್ಯದಲ್ಲಿ ಪಂಜಾಬ್ ಸೋತರೆ ಆರ್‌ಸಿಬಿಗೆ ಹೆಚ್ಚು ಲಾಭ ಎನ್ನಬಹುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ