LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ: ತರಬೇತಿ ನಿರತ IPS ಅಧಿಕಾರಿ ಆತ್ಮಹತ್ಯೆಗೆ ಯತ್ನ: ಸಾವು-ಬದುಕಿನ ನಡುವೆ ಹೋರಾಟ

ಹೈದರಾಬಾದ್: ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳನೀಡಿದ್ದ ಆರೋಪ ಎದುರಿಸುತ್ತಿರುವ ತರಬೇತಿ ನಿರತ ಐಪಿಎಸ್ ಅಧಿಕಾರಿ ಉದಯ್ ಕೃಷ್ಣಾ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಹೈದರಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ (NPA) ತರಬೇತಿ ಪಡೆಯುತ್ತಿದ್ದ ಐಪಿಎಸ್ ಅಧಿಕಾರಿ ಉದಯ್ ಕೃಷ್ಣಾ ರೆಡ್ಡಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತೀವ್ರ ಅಸ್ವಸ್ಥಗೊಂಡಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕ ಮೂಲದ ತರಬೇತಿ ನಿರತ ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳನೀಡಿದ್ದ ಆರೋಪ ಉದಯ್ ಕೃಷ್ಣಾ ರೆಡ್ದಿ ಮೇಲಿದೆ. ಈ ಹಿನ್ನೆಲೆಯಲ್ಲಿ ಉದಯ್ ಕೃಷ್ನಾ ರೆಡ್ಡಿ ಇತ್ತೀಚೆಗೆ ಅಮಾನತುಗೊಂಡಿದ್ದರು. ಹೈದರಾಬಾದ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪ್ರಸ್ತುತ ಅವರನ್ನು ಎಸ್.ಆರ್. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ಕರ್ನಾಟಕ ಮೂಲದ ವಿವಾಹಿತ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಉದಯ್ ಕೃಷ್ಣಾ ರೆಡ್ಡಿ ವಿರುದ್ಧ ದೂರು ನೀಡಿದ್ದರು. ಉದಯ್ ತನಗೆ ನಿರಂತರವಾಗಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದ. ಕೋಣೆಯಲ್ಲಿ ಕೂಡಿಹಾಕಿ, ಕೂದಲು ಹಿಡಿದು ಕುತ್ತಿಗೆ ಹಿಸುಕಲು ಯತ್ನಿಸಿ ಚಾಕು ತೋರಿಸಿ ಬೆದರಿಕೆ ಹಾಕಿದ್ದ ಎಂದು ದೂರು ನೀಡಿದ್ದರು.

ಅಲ್ಲದೇ ಸಂತ್ರಸ್ತೆಯ ಖಾಸಗಿ ವೀಡಿಯೊವನ್ನು ರಹಸ್ಯವಾಗಿ ರೆಕಾರ್ಡ್ ಮಾಡಿ, ಅದನ್ನು ಆಕೆಯ ಪತಿಗೆ ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರಿನ ಮೇರೆಗೆ ಅತ್ತಾಪುರ ಪೊಲೀಸರು ‘ಭಾರತೀಯ ನ್ಯಾಯ ಸಂಹಿತಾ’ (BNS) ಮತ್ತು ಐಟಿ ಕಾಯ್ದೆಯಡಿ ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ (NPA) ಆಂತರಿಕ ತನಿಖಾ ಸಮಿತಿಯು ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಸಾಕ್ಷ್ಯಗಳನ್ನು ಪರಿಶೀಲಿಸಿದೆ. ಆರೋಪಗಳಲ್ಲಿ ಸತ್ಯಾಂಶವಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಅಕಾಡೆಮಿಯು ಉದಯ್ ಕೃಷ್ಣಾ ರೆಡ್ಡಿ ಅವರನ್ನು ತರಬೇತಿಯಿಂದ ತಾತ್ಕಾಲಿಕವಾಗಿ ಅಮಾನತುಗೊಳಿಸಿತ್ತು . ಪೊಲೀಸರು ಇವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು.

ಉದಯ್ ಕೃಷ್ಣಾ ರೆಡ್ಡಿ ಅವರ ಜೀವನ ಆಂಧ್ರಪ್ರದೇಶದ ಅನೇಕ ಯುವಕರಿಗೆ ಮಾದರಿಯಾಗಿತ್ತು. ಕಾರಣ ಅನಾಥರಾಗಿದ್ದ ಇವರನ್ನು ಅಜ್ಜಿ ಕೂಲಿ ಕೆಲಸ ಮಾಡಿ ಸಾಕಿ ಬೆಳೆಸಿದ್ದರು. 2013 ರಲ್ಲಿ ಕಾನ್‌ಸ್ಟೆಬಲ್ ಆಗಿ ಆಯ್ಕೆಯಾಗಿದ್ದ ಉದಯ್, ನಂತರ ಕೆಲಸಕ್ಕೆ ರಾಜೀನಾಮೆ ನೀಡಿ ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧರಾಗಿದ್ದರು. 4 ಬಾರಿ ವಿಫಲರಾದರೂ, 5ನೇ ಪ್ರಯತ್ನದಲ್ಲಿ ದೇಶಕ್ಕೆ 360 ನೇ ರ್ಯಾಂಕ್ ಗಳಿಸಿ ಐಪಿಎಸ್ ಅಧಿಕಾರಿಯಾಗಿದ್ದರು. ಆದರೆ, ಈಗ ಗಂಭೀರ ಆರೋಪಗಳ ತನಿಖಾ ವರದಿ ಹೊರಬಿದ್ದ ಬೆನ್ನಲ್ಲೇ, ಉದಯ್ ಕೃಷ್ಣಾ ರೆಡ್ಡಿ ಭಾನುವಾರ ತಮ್ಮ ವಾಟ್ಸಾಪ್ ಹಾಗೂ ಇನ್‌ಸ್ಟಾಗ್ರಾಮ್ ಸ್ಟೇಟಸ್‌ನಲ್ಲಿ “ನಾನು ಯಾವುದೇ ತಪ್ಪು ಮಾಡಿಲ್ಲ” ಎಂದು ಪೋಸ್ಟ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದೆ. ಮತ್ತೊಂದೆಡೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಉಕ್ರೇನ್‌ ಒಡೆಸಾ ಬಂದರಿನಿಂದ ಹೊರಟಿದ್ದ ಹಡಗಿನ ಮೇಲೆ ದಾಳಿ: ನಾಲ್ವರು ಭಾರತೀಯರು ಸಾವುಅಕ್ರಮ ಮರಳು ದಂಧೆಕೋರರಿಗೆ ಶಾಕ್: 3000 ಮೆಟ್ರಿಕ್ ಟನ್ ಮರಳು ಜಪ್ತಿಬೆಂಗಳೂರಿನಲ್ಲಿ ಜನನಿಬಿಡ ಪ್ರದೇಶದಲ್ಲೇ ವ್ಯಕ್ತಿ ಆತ್ಮಹತ್ಯೆವ್ಯವಸ್ಥೆ ಶುದ್ಧೀಕರಿಸದಿದ್ದರೆ ಅರ್ಹತೆ ಇರುವ ಯುವ ಜನತೆ ನರಳುತ್ತಾರೆ: ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸಿಬಿಐ ತನಿಖೆ ಕೋರಿ ಹೈಕೋರ್ಟ್ ಗೆ ಅರ್ಜಿʻಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆʼಗೆ ಮರು ನಾಮಕರಣ: ʻಬೆಂಗಳೂರು ಕೇಂದ್ರ ಶೈಕ್ಷಣಿಕ ಜಿಲ್ಲೆʼ ಕಡ್ಡಾಯ ಬಳಕೆಗೆ ಆದೇಶಪೆಟ್ರೋಲ್‌ ನಲ್ಲಿ ಎಥೆನಾಲ್ ಮಿಶ್ರಣ 20% ಕ್ಕಿಂತ ಹೆಚ್ಚಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ ಸಚಿವ ಸುರೇಶ್ ಗೋಪಿಚಿನ್ನದ ಬೆಲೆ ಮತ್ತೆ ಏರಿಕೆ ಬೆಳ್ಳಿ ಕೆಜಿಗೆ ₹5,000 ಜಿಗಿತ: ಜುಲೈ 20ರ ಹೊಸ ದರ ಇಲ್ಲಿದೆರಾಜ್ಯ ಸರ್ಕಾರ ತನ್ನ ಅಧಿಕಾರದ ಮಿತಿಯನ್ನು ಮೀರಿ ನಡೆದುಕೊಳ್ಳುತ್ತಿರುವುದು ಸಂವಿಧಾನ ವ್ಯವಸ್ಥೆಗೆ ವಿರುದ್ಧ: ಆರ್.ಅಶೋಕ್ ಕಿಡಿಉದ್ಯೋಗಾಕಾಂಕ್ಷಿಗಳಿಗೆ ಮುಖ್ಯ ಮಾಹಿತಿ: ಜುಲೈ 23 ರಂದು ಉದ್ಯೋಗ ನೇರ ಸಂದರ್ಶನಚೆನ್ನಮ್ಮ ಇನ್ನು ನೆನಪು ಮಾತ್ರ: ಸ್ವಾಮಿಯ ಸಾನ್ನಿಧ್ಯಕ್ಕೆ ಕಳುಹಿಸಿಕೊಡುತ್ತೇನೆ….ಎನ್ನುತ್ತಾ ಅಂತ್ಯಕ್ರಿಯೆ ವೇಳೆ ಪತ್ನಿ ಬಗ್ಗೆ ಗದ್ಗದಿತರಾದ ಮಾಜಿ ಪ್ರಧಾನಿ ದೇವೇಗೌಡ