LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಶಿವಮೊಗ್ಗ; ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ 2026-27ನೇ ಸಾಲಿಗೆ ಶಿವಮೊಗ್ಗ ನಗರದಲ್ಲಿ ಹೊಸದಾಗಿ ಅಲ್ಪಸಂಖ್ಯಾತರ ಮಹಿಳೆಯರ ಉನ್ನತ ಶಿಕ್ಷಣಕ್ಕೆ ಮಹಿಳಾ ಪದವಿ ಪೂರ್ವ ಕಾಲೇಜನ್ನು ಪ್ರಾರಂಭಿಸಿದ್ದು, ಈ ಕಾಲೇಜುಗಳಿಗೆ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1ನೇ ಮಹಡಿ, ಸತ್ಯಶ್ರೀ ಆರ್ಕೆಡ್, 5ನೇ ಪ್ಯಾರಲಲ್ ರಸ್ತೆ, ದುರ್ಗಿಗುಡಿ, ಶಿವಮೊಗ್ಗ ಇಲ್ಲಿಗೆ ತಮ್ಮ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಮೇ 25 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-220206 ನ್ನು ಸಂಪರ್ಕಿಸುವುದು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ‘ಡೇಟಾ ಸೈನ್ಸ್ ಮತ್ತು ಎಐ’ ಕುರಿತು ಮೂರು ದಿನಗಳ ಕಾರ್ಯಾಗಾರ

ಶಿವಮೊಗ್ಗ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನದಲ್ಲಿರುವ ‘ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ’ (ಕೆಎಸ್ ಟಿಎ)ವತಿಯಿಂದ “ಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ” (Advanced Data Science, Artificial Intelligence & Machine Learning) ಎಂಬ ವಿಷಯದ ಕುರಿತು ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಾಗಾರದ ವಿವರಗಳು

ಮೇ 18 ರಿಂದ ಮೇ 20 ರವರೆಗೆ, ಅಕಾಡೆಮಿಯ ಕಚೇರಿ, ಪ್ರೊ. ಯು.ಆರ್. ರಾವ್ ವಿಜ್ಞಾನ ಭವನ, ಬನಶಂಕರಿ 2ನೇ ಹಂತ, ಬೆಂಗಳೂರು ಇಲ್ಲಿ‌ ಕಾರ್ಯಾಗಾರ ನಡೆಯಲಿದ್ದು, ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞರು ಈ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಲಿದ್ದಾರೆ.ವಿಜ್ಞಾನ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳಲ್ಲಿ ಆಸಕ್ತಿ ಇರುವ ಪ್ರತಿನಿಧಿಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಲು ಅವಕಾಶವಿದೆ.

ಆಸಕ್ತರು ಗೂಗಲ್ ಫಾರ್ಮ್

https://forms.gle/Dyf9KFQ85hnRLDHH6) ಮೂಲಕ ಮೇ 16 ರೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗಿ ಕೋರಲಾಗಿದೆ.

ಕಾರ್ಯಾಗಾರದ ಕುರಿತು ಹೆಚ್ಚಿನ ಮಾಹಿತಿಗಾಗಿ ಸಂಯೋಜಕರಾದ ಶ್ರೀನಿವಾಸು ವಿ.ಕೆ., ಮೊಬೈಲ್: 9620767819 ಅವರನ್ನು ಸಂಪರ್ಕಿಸಬಹುದು ಅಥವಾ ಅಕಾಡೆಮಿಯ ಅಧಿಕೃತ ವೆಬ್‌ಸೈಟ್ https://kstacademy.in ವೀಕ್ಷಿಸಬಹುದು ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ಆನಂದ್ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ