ಮಡಿಕೇರಿ : ತಾಲ್ಲೂಕಿನ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ವತಿಯಿಂದ 2026-27ನೇ ಶೈಕ್ಷಣಿಕ ವರ್ಷಕ್ಕೆ ಗುತ್ತಿಗೆ ಮತ್ತು ದಿನಗೂಲಿ ಆಧಾರದ ಮೇಲೆ ಪಿಜಿಟಿ ಭೂಗೋಳ, ಟಿಜಿಟಿ ಸಮಾಜ ವಿಜ್ಞಾನ, ಟಿಜಿಟಿ ಸಂಗೀತ, ಜೆಎಸ್ಎ, ಎಂಟಿಎಸ್, ಮೇಟ್ರನ್, ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಕೊಡಗು ಜಿಲ್ಲೆಯ ಮಡಿಕೇರಿಯ ಗಾಳಿಬೀಡಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ ಜುಲೈ, 04 ರಂದು ಬೆಳಗ್ಗೆ 10:30 ಕ್ಕೆ ವಾಕ್-ಇನ್ ಸಂದರ್ಶನಕ್ಕೆ ಹಾಜರಾಗಲು ಅಭ್ಯರ್ಥಿ ಆಹ್ವಾನಿಸಲಾಗಿದೆ.
ಅರ್ಹತಾ ಮಾನದಂಡಗಳು: ಕೇಂದ್ರ ಸರ್ಕಾರದ ಶಿಕ್ಷಕರ ನೇಮಕಾತಿಯ ಪ್ರಕಾರ. ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಮಾನದಂಡಗಳ ಪ್ರಕಾರ. ಎನ್ವಿಎಸ್ನ ನೇಮಕಾತಿ ನಿಯಮಗಳ ಪ್ರಕಾರ.
ಹೆಚ್ಚಿನ ಮಾಹಿತಿಗೆ ದೂ.ಸಂ. 9611862835, 9448215623 ಮತ್ತು 9449379654 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.
ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಗೆ 2026-27ನೇ ಸಾಲಿಗೆ ಪೂರ್ವ ಪ್ರಾರ್ಥಮಿಕ ಶಿಕ್ಷಕರು, ಕಂಪ್ಯೂಟರ್ ಶಿಕ್ಷಕರು, ಯೋಗ ಮತ್ತು ಕರಾಟೆ ಶಿಕ್ಷಕರು, ಸಂಗೀತ ಮತ್ತು ನೃತ್ಯ ಶಿಕ್ಷಕರು ಹಾಗೂ ಭದ್ರತಾ ಸಿಬ್ಬಂದಿಯ ನೇಮಕಾತಿಗಾಗಿ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪೂರ್ವ ಪ್ರಾರ್ಥಮಿಕ ಶಿಕ್ಷಕರ ವಿದ್ಯಾರ್ಹತೆ ಮೊಂಟೆಸರಿ/ಡಿಇಡಿ ವಿದ್ಯಾರ್ಹತೆ ಎಸ್ಎಸ್ಎಲ್ಸಿ ಉತ್ತೀರ್ಣ ಹೊಂದಿರಬೇಕು, ಕಂಪ್ಯೂಟರ್ ಶಿಕ್ಷಕರ ವಿದ್ಯಾರ್ಹತೆ ಬಿಸಿಎ/ಬಿಎಸ್ಸಿ/ಬಿಟೆಕ್/ಬಿಇ(ಐಟಿ/ಸಿಎಸ್/ಡಿಪ್ಲೊಮಾ), ಯೋಗ, ಕರಾಟೆ, ಸಂಗೀತ ಮತ್ತು ನೃತ್ಯ ಶಿಕ್ಷಕರು ಮಾನ್ಯತೆ ಪಡೆದ ಸಂಸ್ಥೆಗಳಿಂದ ತರಬೇತಿ ಹೊಂದಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ದಾಖಲೆಗಳೊಂದಿಗೆ ಶಾಲಾ ಕಚೇರಿಗೆ ಖುದ್ದಾಗಿ ಭೇಟಿ ನೀಡಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಗೌರವಧನ ನೀಡಲಾಗುವುದು. ಅರ್ಜಿ ಸಲ್ಲಿಸಲು ಜುಲೈ, 2, 2026 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಶಿಕ್ಷಕರು, ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆ, ಮೂರ್ನಾಡು ಸಂಪರ್ಕಿಸಬಹುದು ಎಂದು ಮೂರ್ನಾಡು ಪಿ.ಎಂ.ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಕಟಣೆ ತಿಳಿಸಿದೆ.