LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ಉದ್ಯೋಗಾಕಾಂಕ್ಷಿಗಳಿಗಾಗಿ ಜೂನ್ 16 ರಂದು ನೇರ ಸಂದರ್ಶನ

ಶಿವಮೊಗ್ಗ :   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಜೂ. 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ರಾಹುಲ್ ಕಾರ್ಸ್  ಪ್ರೈ.ಲಿ., (ಹೊಂಡಾಯಿ) ಕಂಪನಿಯು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದು, ಪಿಯುಸಿ, ಐಟಿಐ, ಬಿಇ ಮತ್ತು ಯಾವುದೇ ಪದವಿ ಪೂರೈಸಿದ, 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೇರ ಸಂದರ್ಶನಕ್ಕೆ ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9380663606/ 9108235132 ಗಳನ್ನು ಸಂಪರ್ಕಿಸುವುದು.

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಹಿಂದಿನ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದಿರುವ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನಲ್ಲಿ ಅರ್ಜಿ ಸಲ್ಲಿಸುವಂತಿಲ್ಲ. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅರ್ಜಿಯು ತಿರಸ್ಕೃತಗೊಂಡು ವಿದ್ಯಾರ್ಥಿವೇತನ ಪಡೆಯದೇ ಇರುವಂತಹ ವಿದ್ಯಾರ್ಥಿಗಳು ಹಾಗೂ ಈ ಹಿಂದೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸದೇ ಇರುವಂತಹ ಮತ್ತು 2026-27 ನೇ ಸಾಲಿನ ನವೀನ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.ವೆಬ್‌ಸೈಟ್ Prematric Application Submission URL: http://ssp.postmatric.karnataka.gov.in/ssppre/ ನಲ್ಲಿ ಜೂ. 30 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರು(ಗ್ರೇಡ್-1) ತಿಳಿಸಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ತಾಲ್ಲೂಕು ಸಹಾಯಕ ನಿರ್ದೇಶಕರ (ಗ್ರೇಡ್-1) ಕಚೇರಿ, ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ ಹೆಚ್ ರಸ್ತೆ, ದೂ.ಸಂ: 08182-240512 ನ್ನು ಸಂಪರ್ಕಿಸುವುದು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ