LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

JOB ALERT : ರಾಜ್ಯದ ವಿವಿಧ ವಸತಿ ಶಾಲೆಗಳಲ್ಲಿ 3000 ಕ್ಕೂ ಹೆಚ್ಚು ಶಿಕ್ಷಕ, ಅತಿಥಿ ಉಪನ್ಯಾಸಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್.!

ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಮೊರಾರ್ಜಿ ದೇಸಾಯಿ, ಮೌಲಾನಾ ಆಜಾದ್ ಹಾಗೂ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು, ಕಾಲೇಜುಗಳು ಮತ್ತು ವಸತಿ ನಿಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮಹತ್ವದ ಅನುಮೋದನೆ ನೀಡಿದೆ. ಒಟ್ಟು 3,409 ಹುದ್ದೆಗಳ ಪೈಕಿ 1,469 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ 1,940 ಹುದ್ದೆಗಳನ್ನು ಹೊರಗುತ್ತಿಗೆ/ಔಟ್‌ಸೋರ್ಸಿಂಗ್ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡಲಾಗಿದೆ. ಈ ಕುರಿತು ಸರ್ಕಾರದ ಆದೇಶ ಸಂಖ್ಯೆ MWD-MDS/472/2026 ದಿನಾಂಕ 20-06-2026 ರಂದು ಹೊರಡಿಸಲಾಗಿದೆ.

ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಹಲವು ವರ್ಷಗಳಿಂದ ಖಾಲಿ ಉಳಿದಿರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ನೇಮಕಾತಿ ಪ್ರಕ್ರಿಯೆಯನ್ನು ಹಂತ ಹಂತವಾಗಿ ಕೈಗೊಳ್ಳಲು ಅನುಮೋದನೆ ನೀಡಲಾಗಿದ್ದು, ಶಿಕ್ಷಣದ ಗುಣಮಟ್ಟ ಹೆಚ್ಚಿಸುವುದು ಮತ್ತು ಆಡಳಿತಾತ್ಮಕ ಕಾರ್ಯಕ್ಷಮತೆಯನ್ನು ಸುಧಾರಿಸುವುದು ಇದರ ಉದ್ದೇಶವಾಗಿದೆ.

ಸರ್ಕಾರದ ಆದೇಶದಂತೆ ಒಟ್ಟು 3,409 ಹುದ್ದೆಗಳ ಪೈಕಿ:

  • 1,469 ಹುದ್ದೆಗಳು – ನೇರ ನೇಮಕಾತಿ
  • 1,940 ಹುದ್ದೆಗಳು – ಹೊರಗುತ್ತಿಗೆ/ಔಟ್‌ಸೋರ್ಸಿಂಗ್

ಮೂಲಕ ಭರ್ತಿ ಮಾಡಲಾಗುತ್ತದೆ.

ನೇರ ನೇಮಕಾತಿ ಹುದ್ದೆಗಳ ವಿವರ

1. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು

  • ಒಟ್ಟು ಹುದ್ದೆಗಳು – 800
  • ನೇರ ನೇಮಕಾತಿ – 600
  • ಹೊರಗುತ್ತಿಗೆ – 200

2. ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗಳು

  • ಒಟ್ಟು ಹುದ್ದೆಗಳು – 94
  • ನೇರ ನೇಮಕಾತಿ – 94

3. ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಕಾಲೇಜುಗಳು

  • ಒಟ್ಟು ಹುದ್ದೆಗಳು – 2,050
  • ನೇರ ನೇಮಕಾತಿ – 775
  • ಹೊರಗುತ್ತಿಗೆ – 1,275

4. ಪಡವಿ ಪೂರ್ವ ಕಾಲೇಜುಗಳು (ಪ್ರತ್ಯೇಕ)

  • ಒಟ್ಟು ಹುದ್ದೆಗಳು – 465
  • ಸಂಪೂರ್ಣ ಹೊರಗುತ್ತಿಗೆ ಆಧಾರದಲ್ಲಿ ಭರ್ತಿ.

ನೇರ ನೇಮಕಾತಿಯಲ್ಲಿ ಭರ್ತಿಯಾಗುವ ಪ್ರಮುಖ ಹುದ್ದೆಗಳು

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ:

  • ಕನ್ನಡ, ಇಂಗ್ಲಿಷ್, ಉರ್ದು ಭಾಷಾ ಉಪನ್ಯಾಸಕರು
  • ಸಮಾಜ ವಿಜ್ಞಾನ, ವಿಜ್ಞಾನ ಶಿಕ್ಷಕರು
  • ಗಣಿತ ಶಿಕ್ಷಕರು
  • ದೈಹಿಕ ಶಿಕ್ಷಣ ಶಿಕ್ಷಕರು
  • ಗ್ರಂಥಪಾಲಕರು
  • ಪ್ರಯೋಗಾಲಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳು.

ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ:

  • ಕನ್ನಡ, ಇಂಗ್ಲಿಷ್, ಉರ್ದು ಭಾಷಾ ಶಿಕ್ಷಕರು
  • ಗಣಿತ, ಸಮಾಜ ವಿಜ್ಞಾನ, ವಿಜ್ಞಾನ ಶಿಕ್ಷಕರು ಸೇರಿದಂತೆ ಬೋಧಕ ಹುದ್ದೆಗಳು.

ಹೊರಗುತ್ತಿಗೆ ಮೂಲಕ ಭರ್ತಿಯಾಗುವ ಹುದ್ದೆಗಳು

ಒಟ್ಟು 1,940 ಹುದ್ದೆಗಳನ್ನು ಔಟ್‌ಸೋರ್ಸಿಂಗ್ ಮೂಲಕ ಭರ್ತಿ ಮಾಡಲಾಗುತ್ತದೆ. ಇದರಲ್ಲಿ:

  • ಭದ್ರತಾ ಸಿಬ್ಬಂದಿ
  • ಅಡುಗೆ ಸಿಬ್ಬಂದಿ
  • ಸ್ವಚ್ಛತಾ ಸಿಬ್ಬಂದಿ
  • ಡ್ರೈವರ್
  • ಕ್ಲರ್ಕ್
  • ಲ್ಯಾಬ್ ಸಹಾಯಕರು
  • ವಸತಿ ನಿಲಯ ಸಹಾಯಕ ಸಿಬ್ಬಂದಿ
  • ಇತರೆ ಬೋಧಕೇತರ ಸಿಬ್ಬಂದಿ ಸೇರಿದ್ದಾರೆ.

ಸರ್ಕಾರದ ಆದೇಶದಲ್ಲಿ ಏನಿದೆ?

ಸರ್ಕಾರದ ಆದೇಶದ ಪ್ರಕಾರ, ಖಾಲಿ ಹುದ್ದೆಗಳ ಭರ್ತಿಯಿಂದ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಚಟುವಟಿಕೆ ಸುಧಾರಣೆಯಾಗಲಿದ್ದು, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ನೆರವಾಗಲಿದೆ. ಅಗತ್ಯವಿರುವ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸೇರಿದಂತೆ ಸಂಬಂಧಿತ ನೇಮಕಾತಿ ಪ್ರಾಧಿಕಾರಗಳ ಮೂಲಕ ನೇರ ನೇಮಕಾತಿಯಿಂದ ಹಾಗೂ ಉಳಿದ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸೂಚಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
CWRC ನೀಡಿರುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲಾಗುವುದು: ರಾಜ್ಯದ ರೈತರ ಹಿತ ಕಾಯಲು ಸರ್ಕರ ಬದ್ಧ: ಸಚಿವ ರಾಮಲಿಂಗಾರೆಡ್ಡಿBIG NEWS: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ; ಆದರೂ ಡಿ.ಕೆ.ಶಿವಕುಮಾರ್ ತಮಿಳುನಾಡು ಸಿಎಂ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದೇಕೆ? ಆರ್.ಅಶೋಕ್ ಪ್ರಶ್ನೆಮಾಜಿ ಸಿಎಂ ಜೆ.ಹೆಚ್. ಪಟೇಲ್ ಬೆಂಬಲಿಗರಾಗಿದ್ದ ಪಿ. ಶೇಖರಪ್ಪ ನಿಧನSHOCKING : ಲವರ್ ಜೊತೆ ಮಾತನಾಡಲು ಅಡ್ಡಿ ; ಅಳುತ್ತಿದ್ದ 3 ವರ್ಷದ ಮಗನನ್ನೇ ಕೊಂದ ಪಾಪಿ ತಾಯಿ.!ಸ್ವಾತಂತ್ರೋತ್ಸವ ಫಲಪುಷ್ಪ ಪ್ರದರ್ಶನ : ಲಾಲ್‌ಬಾಗ್‌ನಲ್ಲಿ ವಿವಿಧ ಸ್ಪರ್ಧೆ, ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆಜಲಾಶಯದ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಬಳಸಿBIG NEWS : ಸೈಬರ್ ಅಪರಾಧಗಳಿಗೆ ಮರಣದಂಡನೆ ; ಸಂಸತ್ತಿನಲ್ಲಿ ಮಹತ್ವದ ಮಸೂದೆ ಅಂಗೀಕಾರBREAKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನತೆ ; ಭದ್ರತಾ ಪಡೆಗಳ ಗುಂಡಿನ ದಾಳಿಯಲ್ಲಿ 20 ಮಂದಿ ಸಾವುಪೊಲೀಸ್ ನೇಮಕಾತಿ ಪರೀಕ್ಷೆ: ವಸ್ತ್ರಸಂಹಿತೆ, ನಿಷೇಧಿತ ವಸ್ತುಗಳು ಸೇರಿ ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಸೂಚನೆ