LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

KSRTC ಬಸ್ ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ: ಒಂದೇ ತಿಂಗಳಲ್ಲಿ 4 ಸಾವಿರಕ್ಕೂ ಹೆಚ್ಚು ಪ್ರಯಾಣಿಕರಿಂದ 9 ಲಕ್ಷ ರೂ. ದಂಡ ವಸೂಲಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆ.ಎಸ್.ಆರ್.ಟಿ.ಸಿ) ಬಸ್‌ಗಳಲ್ಲಿ ಟಿಕೆಟ್ ಪಡೆಯದೇ ಪ್ರಯಾಣಿಸುವವರ ವಿರುದ್ಧ ಕೆ.ಎಸ್.ಆರ್.ಟಿ ಜಾಗೃತ ದಳ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದು ತಿಂಗಳಲ್ಲಿ 9 ಲಕ್ಷ ರೂಪಾಯಿ ದಂಡ ವಸೂಲಿ ಮಾಡಿದೆ.

ಕರ್ನಾಟಕ ಹಾಗೂ ನೆರೆಯ ರಾಜ್ಯಗಳಲ್ಲಿ ಸಂಚರಿಸುವ ಕೆ.ಎಸ್‌.ಆರ್‌.ಟಿ.ಸಿ ಬಸ್‌ಗಳಲ್ಲಿ ಜಾಗೃತ ದಳದ ಸಿಬ್ಬಂದಿ ನಡೆಸಿದ ತಪಾಸಣೆಯ ವೇಳೆ ಸಿಕ್ಕಿಬಿದ್ದ ಟಿಕೆಟ್ ರಹಿತ ಪ್ರಯಾಣಿಕರಿಂದ ಒಟ್ಟು 8.94 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಸಂಸ್ಥೆಯ ಆದಾಯಕ್ಕೆ ನಷ್ಟ ಉಂಟುಮಾಡುವವರನ್ನು ಪತ್ತೆ ಹಚ್ಚಲು ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.

ಈ ಬಗ್ಗೆ ಕೆ.ಎಸ್‌.ಆರ್‌.ಟಿ.ಸಿ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದೆ. ಈ ಒಂದು ತಿಂಗಳ ಸುದೀರ್ಘ ಕಾರ್ಯಾಚರಣೆಯಲ್ಲಿ ಜಾಗೃತ ದಳದ ತಂಡಗಳು ಒಟ್ಟು 42,518 ಬಸ್‌ಗಳನ್ನು ತಪಾಸಣೆಗೆ ಒಳಪಡಿಸಿವೆ. ಈ ವೇಳೆ 4,353 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಟಿಕೆಟ್ ರಹಿತವಾಗಿ ಪ್ರಯಾಣಿಸುತ್ತಿದ್ದ 4,476 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಸುಮಾರು 1.52 ಲಕ್ಷ ರೂಪಾಯಿ ಮೌಲ್ಯದ ಆದಾಯ ಸೋರಿಕೆಯನ್ನು ತಡೆಗಟ್ಟಲಾಗಿದ್ದು, ಒಟ್ಟಾರೆ 8.94 ಲಕ್ಷ ರೂ. ದಂಡದ ರೂಪದಲ್ಲಿ ಸಂಗ್ರಹವಾಗಿದೆ.

ಇಂತಹ ಅಕ್ರಮಗಳಲ್ಲಿ ಭಾಗಿಯಾಗಿರುವ ಅಥವಾ ಟಿಕೆಟ್ ನೀಡುವಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವ ಸಂಸ್ಥೆಯ ನೌಕರರ ವಿರುದ್ಧವೂ ಕೆ.ಎಸ್‌.ಆರ್‌.ಟಿ.ಸಿ ಕಠಿಣ ನಿಲುವು ತಳೆದಿದೆ. ಇಂತಹ ಅಕ್ರಮಗಳಿಗೆ ಕಾರಣರಾದ ಸಿಬ್ಬಂದಿಗಳ ವಿರುದ್ಧ ಈಗಾಗಲೇ ಇಲಾಖಾ ಮಟ್ಟದ ಶಿಸ್ತು ಕ್ರಮಗಳನ್ನು ಜರುಗಿಸಲಾಗಿದೆ ಎಂದು ಸಂಸ್ಥೆ ಖಚಿತಪಡಿಸಿದೆ.

ಮುಂದಿನ ದಿನಗಳಲ್ಲೂ ಈ ಕಾರ್ಯಾಚರಣೆಗಳು ಮುಂದುವರಿಯಲಿದ್ದು, ಪದೇ ಪದೇ ನಿಯಮ ಉಲ್ಲಂಘಿಸುವವರಿಗೆ ಮತ್ತಷ್ಟು ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಇದೇ ವೇಳೆ ಪ್ರಯಾಣಿಕರು ಜವಾಬ್ದಾರಿಯಿಂದ ವರ್ತಿಸಿ, ಪ್ರಯಾಣದ ಅವಧಿಯಲ್ಲಿ ಸೂಕ್ತ ಟಿಕೆಟ್ ಅಥವಾ ಪಾಸ್‌ಗಳನ್ನು ಖರೀದಿಸಿ ಸಂಸ್ಥೆಯೊಂದಿಗೆ ಸಹಕರಿಸಬೇಕು ಎಂದು ಕೆ.ಎಸ್‌.ಆರ್‌.ಟಿ.ಸಿ ಮನವಿ ಮಾಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ