LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘LPG’ ಗ್ರಾಹಕರಿಗೆ ಬಿಗ್ ಅಲರ್ಟ್ : ಜೂನ್ 30ರೊಳಗೆ e-KYC ಮಾಡದಿದ್ದರೆ ಗ್ಯಾಸ್ ಸಬ್ಸಿಡಿ ಬಂದ್ !

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ LPG ಸಂಪರ್ಕ ಮತ್ತು ಗ್ಯಾಸ್ ಸಿಲಿಂಡರ್ ರಿಫಿಲ್‌ಗಳಿಗೆ ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಡಿ ಮೊದಲ ಸಿಲಿಂಡರ್ ಉಚಿತವಾಗಿದ್ದು, ನಂತರದ ರಿಫಿಲ್‌ಗಳಿಗೆ ₹300 ಸಬ್ಸಿಡಿ ನೀಡಲಾಗುತ್ತದೆ.

ಈ ಸಬ್ಸಿಡಿ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ಜೂನ್ 30ರೊಳಗೆ e-KYC ಪೂರ್ಣಗೊಳಿಸುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ನಿಗದಿತ ದಿನಾಂಕದೊಳಗೆ e-KYC ಮಾಡದಿದ್ದರೆ ಸಬ್ಸಿಡಿ ಹಣ ನಿಲ್ಲುವ ಸಾಧ್ಯತೆ ಇದೆ.

ಸರ್ಕಾರಿ ತೈಲ ಕಂಪನಿಗಳಾದ ಇಂಡೇನ್, ಭಾರತ್ ಗ್ಯಾಸ್ ಮತ್ತು HP ಗ್ಯಾಸ್ ಗ್ರಾಹಕರಿಗೆ ಈ ಬಗ್ಗೆ ಎಚ್ಚರಿಕೆ ನೀಡಿವೆ. ಸಬ್ಸಿಡಿ ನಿರಂತರವಾಗಿ ಪಡೆಯಲು e-KYC ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಿಳಿಸಿವೆ.

e-KYC ಹೇಗೆ ಮಾಡಬಹುದು?

  • ಸಮೀಪದ ಗ್ಯಾಸ್ ಏಜೆನ್ಸಿಗೆ ಭೇಟಿ ನೀಡಿ.
  • ಡೆಲಿವರಿ ಸಿಬ್ಬಂದಿಯ ಬಯೋಮೆಟ್ರಿಕ್ ಸಾಧನದ ಮೂಲಕ.
  • ಮೊಬೈಲ್ ಆ್ಯಪ್‌ಗಳ ಮೂಲಕ ಮನೆಯಲ್ಲೇ:
    • ಇಂಡೇನ್ ಗ್ರಾಹಕರು: IndianOil One App
    • ಭಾರತ್ ಗ್ಯಾಸ್ ಗ್ರಾಹಕರು: Hello BPCL App
    • HP ಗ್ಯಾಸ್ ಗ್ರಾಹಕರು: HP Pay App

ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಗೆ ಬರುವ OTP ಹಾಗೂ Face Authentication ಮೂಲಕ e-KYC ಪೂರ್ಣಗೊಳಿಸಬಹುದು.

ಗಮನಿಸಿ: ಈಗಾಗಲೇ e-KYC ಪೂರ್ಣಗೊಳಿಸಿರುವ ಗ್ರಾಹಕರು ಮತ್ತೆ ಮಾಡುವ ಅಗತ್ಯವಿಲ್ಲ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ