ಜನರಿಗೆ ಹವಾಮಾನ ಇಲಾಖೆ ಸಿಹಿ ಸುದ್ದಿಯೊಂದನ್ನು ನೀಡಿದೆ. ನೈಋತ್ಯ ಮುಂಗಾರು ಮಾರುತಗಳು ಮುಂದಿನ 24 ಗಂಟೆಗಳಲ್ಲಿ ಕೇರಳ ಕರಾವಳಿಯನ್ನು ತಲುಪಲಿವೆ ಎಂದು ಹೈದರಾಬಾದ್ ಹವಾಮಾನ ಕೇಂದ್ರ ತಿಳಿಸಿದೆ. ಈ ತಿಂಗಳ 6ರಂದು ರಾಯಲಸೀಮೆಗೆ ಮತ್ತು 8ರ ವೇಳೆಗೆ ತೆಲಂಗಾಣಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ. ಇದರ ಪರಿಣಾಮವಾಗಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಈಗಾಗಲೇ ಅಲ್ಲಲ್ಲಿ ಮಳೆ ಶುರುವಾಗಿದೆ.
ಮುಂದಿನ ದಿನಗಳ ಹವಾಮಾನ ಮುನ್ಸೂಚನೆ:
- ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗುರುವಾರ ಮತ್ತು ಶುಕ್ರವಾರ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ. ಶುಕ್ರವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ಎಚ್ಚರಿಸಿದೆ.ಮುಂಗಾರಿನ ಆಗಮನದಿಂದಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 2 ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ.
ಕೇರಳಕ್ಕೆ ಮುಂಗಾರು ಪ್ರವೇಶದೊಂದಿಗೆ ಕರ್ನಾಟಕ, ಕೇರಳ, ತಮಿಳುನಾಡು, ಪುದುಚೇರಿಗಳಲ್ಲಿ ಉತ್ತಮ ಮಳೆಯಾಗಲಿದೆ. ಇದೇ ವೇಳೆ ಆಂಧ್ರಪ್ರದೇಶದ ಕರಾವಳಿ ರಾಯಲ್ಸೀಮಾ, ಕರ್ನಾಟಕದ ಕರಾವಳಿ ತೀರದಲ್ಲಿ ಭಾರಿ ಗಾಳಿ ಮಳೆಯಾಗಲಿದೆ.