LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪಠ್ಯಪುಸ್ತಕ ವಿವಾದ: ಕೃಷ್ಣ ಪುಸ್ತಕದ ಬಗ್ಗೆ NCERT ಸ್ಪಷ್ಟನೆ

ಬೆಂಗಳೂರು: 6ನೇ ತರಗತಿಯ ಕನ್ನಡ R3 ಪಠ್ಯಪುಸ್ತಕಕ್ಕೆ ಇಡಲಾದ ಹೆಸರಿನ ವಿಚಾರವಾಗಿ ಎನ್.ಸಿ.ಇ.ಆರ್.ಟಿ (NCERT) ಮತ್ತು ಸಿ.ಬಿ.ಎಸ್.ಇ (CBSE) ಪಠ್ಯಪುಸ್ತಕಗಳಲ್ಲಿ ಕೇಸರೀಕರಣ ಆರೋಪ ಕೇಳಿಬಂದಿದ್ದು, ಬಿಜೆಪಿ ಸರಕಾರವು ಮಕ್ಕಳ ಮನಸ್ಸಿನ ಮೇಲೆ ಸೈದ್ಧಾಂತಿಕ ವಿಚಾರಗಳನ್ನು ಹೇರಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂದು ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದರು. ವಿವಾದ ತೀವ್ರಗೊಳ್ಳುತ್ತಿದ್ದಂತೆ ಸ್ವತಃ ಎನ್.ಸಿ.ಇ.ಆರ್.ಟಿ ಸ್ಪಷ್ಟನೆ ನೀಡಿದೆ.

6ನೇ ತರಗತಿ ಕನ್ನಡ R3 ಪಠ್ಯಪುಸ್ತಕಕ್ಕೆ ಇಡಲಾದ ಕೃಷ್ಣ ಎಂಬ ಹೆಸರು ದೇವರಿಗೆ ಸಂಬಂಧಿಸಿದ್ದಲ್ಲ. ಬದಲಾಗಿ ಕರ್ನಾಟಕದ ಪ್ರಮುಖ ನದಿಯಾದ ಕೃಷ್ಣಾ ನದಿಯ ಹೆಸರಾಗಿದೆ. ಎಲ್ಲಾ ಭಾಷಾ ಪಠ್ಯಪುಸ್ತಕಗಳಿಗೂ ಭಾರತದ ಪ್ರಮುಖ ನದಿಗಳ ಹೆಸರನ್ನೇ ಇಡಲಾಗಿದೆ. ಹಿಂದಿಗೆ ಗಂಗಾ, ಇಂಗ್ಲಿಷ್​​ಗೆ ಕಾವೇರಿ, ಉರ್ದುವಿಗೆ ಜಮುನಾ ಮತ್ತು ಕನ್ನಡಕ್ಕೆ ಕೃಷ್ಣ ಹೆಸರನ್ನು ಪಠ್ಯ ಪುಸ್ತಕಗಳಿಗೆ ಇಟ್ಟಿದ್ದೇವೆ ಎಂದು ಎನ್.ಸಿ.ಇ.ಆರ್.ಟಿ ತಿಳಿಸಿದೆ.

6ನೇ ಅಧ್ಯಾಯ ‘Health is Wealth’ನಲ್ಲಿ ಸಮತೋಲನ ಆಹಾರ (Balanced Diet) ಕುರಿತು ಮಾತ್ರ ಪಾಠವಿದೆ. ಹೀಗಾಗಿ ಹಾಲು, ಹಸಿರು ಸೊಪ್ಪು, ತರಕಾರಿಗಳು, ಹಣ್ಣುಗಳು ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ಉಲ್ಲೇಖಿಸಲಾಗಿದೆ. ಪುಟ 63ರಲ್ಲಿ ಸಸ್ಯಾಹಾರ ಹಾಗೂ ಮಾಂಸಾಹಾರ ಎರಡನ್ನೂ ಒಳಗೊಂಡ ಚಿತ್ರವಿದೆ. ಪಠ್ಯದಲ್ಲಿ ಸಸ್ಯಾಹಾರವನ್ನು ಸಮರ್ಥಿಸಿಲ್ಲ, ಮಾಂಸಾಹಾರವನ್ನು ವಿರೋಧಿಸಿಲ್ಲ. ವಿದ್ಯಾರ್ಥಿಗಳಿಗೆ ಆರೋಗ್ಯಕರ ಆಹಾರದ ಬಗ್ಗೆ ಅರಿವು ಮೂಡಿಸುವುದೇ ಅಧ್ಯಾಯದ ಉದ್ದೇಶ ಎಂದೂ ಎಂದು ಸ್ಪಷ್ಟಪಡಿಸಲಾಗಿದೆ.

ಅಲ್ಲದೆ ಪಠ್ಯಪುಸ್ತಕವು NEP 2020 ಮತ್ತು NCF-SE 2023ರ ಸ್ಥಳೀಯತೆ ಹಾಗೂ ಸಾಂಸ್ಕೃತಿಕ ಸಂಪರ್ಕದ ಉದ್ದೇಶಕ್ಕೆ ಅನುಗುಣವಾಗಿದೆ. ಎನ್.ಸಿ.ಇ.ಆರ್.ಟಿ ಗುಣಮಟ್ಟದ ಪಠ್ಯಪುಸ್ತಕಗಳನ್ನು ನೀಡಲು ಬದ್ಧವಾಗಿದ್ದು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರಿಂದ ಬರುವ ರಚನಾತ್ಮಕ ಸಲಹೆಗಳನ್ನು ಸ್ವಾಗತಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ