LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ NEET ಮರು ಪರೀಕ್ಷೆ ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ ಘೋಷಣೆ

ಬಳ್ಳಾರಿ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು ಜೂ.21 ರಂದು ಮಧ್ಯಾಹ್ನ 02 ರಿಂದ ಸಂಜೆ 05.30 ರವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ.

ಬಳ್ಳಾರಿ ನಗರದ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರ ಅಡಿಯಲ್ಲಿ ತಮಗಿರುವ ಅಧಿಕಾರವನ್ನು ಚಲಾಯಿಸಿ ಈ ಆದೇಶವನ್ನು ಹೊರಡಿಸಿದ್ದಾರೆ.

ಪರೀಕ್ಷಾ ಕೇಂದ್ರದ ಸುತ್ತಮುತ್ತ ಅನಧಿಕೃತ ವ್ಯಕ್ತಿಗಳು ಹಾಗೂ ವ್ಯಕ್ತಿಗಳ ಗುಂಪುಗಳು ಜಮಾಯಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು ಹಾಗೂ ಇಂಟರ್ನೆಟ್ ಸೆಂಟರ್‌ಗಳು ಕಾರ್ಯನಿರ್ವಹಿಸದಂತೆ ಕಟ್ಟುನಿಟ್ಟಿನ ಪ್ರತಿಬಂಧಕ ಆದೇಶ ಜಾರಿಗೊಳಿಸಲಾಗಿದೆ. ಈ ಕಟ್ಟುನಿಟ್ಟಿನ ನಿಯಮಗಳು ಪರೀಕ್ಷೆಯ ಮೇಲ್ವಿಚಾರಣೆ ಹಾಗೂ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ವರ್ಗದವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಬಳ್ಳಾರಿ ಜಿಟಿಟಿಸಿ ಕೇಂದ್ರದಲ್ಲಿ ವಿವಿಧ ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವ ಇಲ್ಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಬಹುಕೌಶಲ್ಯಾಭಿವೃದ್ಧಿ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ವಿಭಾಗಗಳ ಪೂರ್ಣಾವಧಿ ಅತಿಥಿ ಬೋಧಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

*ಬೋಧಕ ಹುದ್ದೆಗಳ ವಿವರ ಹಾಗೂ ವಿದ್ಯಾರ್ಹತೆ:*

ಎಲೆಕ್ಟಿçಕಲ್: ಹುದ್ದೆ ಸಂಖ್ಯೆ 02, 3 ರಿಂದ 5 ವರ್ಷಗಳ ಅನುಭವ, ವಿದ್ಯಾರ್ಹತೆ ಡಿಪ್ಲೋಮಾ/ಇಇಇ ಇನ್ ಬಿಇ.

ಎಲೆಕ್ಟಾçನಿಕ್ಸ್: 01 ಹುದ್ದೆ, 3 ರಿಂದ 5 ವರ್ಷಗಳ ಅನುಭವ, ವಿದ್ಯಾರ್ಹತೆ ಬಿಇ/ಎಂ.ಟೆಕ್ ಇನ್ ಇ&ಸಿ.

ಮೆಕಾನಿಕಲ್: ಹುದ್ದೆ 01, 2 ರಿಂದ 5 ವರ್ಷಗಳ ಅನುಭವ, ವಿದ್ಯಾರ್ಹತೆ ಡಿಪ್ಲೋಮಾ/ಬಿಇ/ಎಂ.ಟೆಕ್/ಡಿಟಿಡಿಎ/ಮೆಕಾನಿಕಲ್.

ಕಂಪ್ಯೂಟರ್ ಸೈನ್ಸ್: ಹುದ್ದೆ 01, 2 ರಿಂದ 5 ವರ್ಷಗಳ ಅನುಭವ, ಬಿಇ/ಎಂ.ಟೆಕ್ ಇನ್ ಸಿಎಸ್.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ವಿಳಾಸ: ಜಿ.ಟಿ.ಟಿ.ಸಿ., ಐಶ್ವರ್ಯ ಕಾಲೋನಿ (ಐ.ಟಿ.ಐ. ಕ್ಯಾಂಪಸ್), ಕಂಟೋನ್‌ಮೆAಟ್, ಬಳ್ಳಾರಿ – 583104 ಅಥವಾ ಮೊ.9620057086, ದೂ.08392-200087 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಟಿಟಿಸಿ ಸಂಸ್ಥೆಯ ಪ್ರಾಂಶುಪಾಲ ಮುತ್ತಣ್ಣ ದರ್ಮಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ