LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸಲು ನಮ್ಮ ಸಹಾಯ ಬೇಕೆಂದು ಮನವಿ ಮಾಡಿಕೊಂಡಿದ್ದಾರೆ ಎಂದು ಬಾಂಬ್ ಸಿಡಿಸಿದ ಕಾಂಗ್ರೆಸ್ ನಾಯಕ; ವಿಡಿಯೊ

ಮೇ 4ರಂದು ಹೊರಬಿದ್ದ ತಮಿಳುನಾಡು ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಸದ್ಯ ಭಾರೀ ಚರ್ಚೆಗಳನ್ನು ಹುಟ್ಟುಹಾಕಿದೆ.

ಟಿವಿಕೆ 108 ಸೀಟುಗಳನ್ನು ಪಡೆದುಕೊಂಡು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸಹ ಸರ್ಕಾರ ರಚಿಸಲು ಇನ್ನೂ 10 ಶಾಸಕರ ಬೆಂಬಲ ಅಗತ್ಯವಿದೆ. ಇನ್ನು ವಿಜಯ್ ಪೆರಂಬೂರು ಹಾಗೂ ತಿರುಚಿರಪಲ್ಲಿ ಪೂರ್ವ ಈ ಎರಡೂ ಕ್ಷೇತ್ರಗಳಲ್ಲಿ ಗೆದ್ದಿದ್ದು, ಈ ಪೈಕಿ ಒಂದು ಕ್ಷೇತ್ರವನ್ನು ಬಿಟ್ಟುಕೊಡಲಿದ್ದಾರೆ. ಅಲ್ಲದೇ ಸ್ಪೀಕರ್ ನೇಮಕ ಸಹ ಆಗಲಿದ್ದು, ಈ ಎರಡು ಕಾರಣಗಳಿಂದ ಟಿವಿಕೆ ಶಾಸಕರ ಬಲ 106ಕ್ಕೆ ಕುಸಿಯಲಿದೆ.

ಹೀಗಾಗಿ ಟಿವಿಕೆ ಸರ್ಕಾರ ರಚಿಸಲು ಇನ್ನೂ 12 ಶಾಸಕರ ಅಗತ್ಯವಿದ್ದು, ಇತರೆ ಪಕ್ಷಗಳ ಸಹಾಯ ಕೋರದೇ ಬೇರೆ ವಿಧಿ ಇಲ್ಲದಂತಾಗಿದೆ.

ಹೀಗಿರುವಾಗಲೇ ಕಾಂಗ್ರೆಸ್‌ನ ನಾಯಕ ಕೆಸಿ ವೇಣುಗೋಪಾಲ್ ಈ ಕುರಿತು ಮಾತನಾಡಿದ್ದು, ಟಿವಿಕೆ ಮುಖ್ಯಸ್ಥ ವಿಜಯ್ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್‌ಗೆ ಬೆಂಬಲ ಸೂಚಿಸುವಂತೆ ಮನವಿ ಮಾಡಿಕೊಂಡಿದ್ದಾರೆ, ಅಲ್ಲದೇ ಪೆರುಮ್‌ತಲೈವರ್ ಕಾಮರಾಜು ಅವರ ಸಿದ್ಧಾಂತವನ್ನೂ ಸಹ ಅಳವಡಿಸಿಕೊಳ್ಳುವುದಾಗಿ ಅವರು ಹೇಳಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್‌ಗೆ ತಮಿಳುನಾಡಿನಲ್ಲಿ ಸಂವಿಧಾನ ಉಳಿಸುವ ಸರ್ಕಾರ ನಡೆಯಬೇಕೆಂಬ ಇಂಗಿತ ಮುಂಚಿನಿಂದಲೂ ಇದೆ, ಬಿಜೆಪಿ ಬೆಂಬಲದಿಂದ ತಮಿಳುನಾಡಿನಲ್ಲಿ ಸರ್ಕಾರ ನಡೆಯಬಾರದು ಎಂಬುದು ಸಹ ಅದರ ಧ್ಯೇಯವಾಗಿದೆ, ತಮಿಳುನಾಡು ಕಾಂಗ್ರೆಸ್‌ಗೆ ವಿಜಯ್ ಮನವಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಆಯ್ಕೆಯನ್ನು ಬಿಡಲಾಗಿದೆ ಎಂದೂ ಸಹ ವೇಣುಗೋಪಾಲ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ