LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಮದ್ಯ’ ಸೇವಿಸಿ ಕರ್ತವ್ಯಕ್ಕೆ ಹಾಜರಾದ ವಿಜಯಪುರ ವೈದ್ಯಾಧಿಕಾರಿ ಅಮಾನತು ; ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್.!

ಬೆಂಗಳೂರು :  ಆರೋಗ್ಯ ಇಲಾಖೆಯ ಘನತೆಗೆ ಧಕ್ಕೆ ತರುವ ಅಥವಾ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶಿಸಿದೆ.ವಿಜಯಪುರ ಜಿಲ್ಲೆಯ ವಂದಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶೇಖರ್ ಸಜ್ಜನ ಅವರು ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇಲಾಖೆಯ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕ್ಷಣಾರ್ಧದಲ್ಲಿ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಿದೆ.

ಈ ಬಗ್ಗೆ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಎನ್ನುವುದು ಕೇವಲ ಸರ್ಕಾರಿ ಕಚೇರಿಯಲ್ಲ, ಅದು ಜನರ ಪಾಲಿನ ಸಂಜೀವಿನಿ. ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಕನಿಷ್ಠ ಶಿಸ್ತು ಮತ್ತು ಸೇವಾ ಮನೋಭಾವ ಇರಲೇಬೇಕು ಎಂಬುದು ನಮ್ಮ ಸರ್ಕಾರದ ಅಚಲ ನಿಲುವು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಇಲಾಖೆಯ ಕೆಲವು ವೈದ್ಯರು ಮತ್ತು ಸಿಬ್ಬಂದಿಯ ಅಶಿಸ್ತಿನ ವರ್ತನೆಗಳ ಬಗ್ಗೆ ವರದಿಗಳು ಬರುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಜನ ಸಾಮಾನ್ಯರ ಜೊತೆ ಅಸಭ್ಯವಾಗಿ ವರ್ತಿಸುವುದು, ಕರ್ತವ್ಯದ ಸಮಯದಲ್ಲಿ ಮದ್ಯಪಾನ ಮಾಡುವುದು ಅಥವಾ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಹಾಜರಾಗದೆ ಇರುವುದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.

ವಿಜಯಪುರ ಜಿಲ್ಲೆಯ ವಂದಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶೇಖರ್ ಸಜ್ಜನ ಅವರು ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದನ್ನು ಮತ್ತು ಕರ್ತವ್ಯ ಲೋಪ ಎಸಗಿರುವುದನ್ನು ಗಂಭೀರವಾಗಿ ಪರಿಗಣಿಸಿ, ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದಿದ್ದಾರೆ.

ಈ ಮೂಲಕ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ನಾನು ನೀಡುವ ಸ್ಪಷ್ಟ ಸೂಚನೆ ಏನೆಂದರೆ:

ನಿಮ್ಮ ಹುದ್ದೆ ಅಥವಾ ಪ್ರಭಾವ ಎಷ್ಟೇ ಇರಲಿ, ಸಾರ್ವಜನಿಕರ ಮುಂದೆ ಸರಿಯಾಗಿ ವರ್ತಿಸದಿದ್ದರೆ ಅಥವಾ ಅಶಿಸ್ತು ತೋರಿದರೆ ಕ್ಷಣಾರ್ಧದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಾನು ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ಜನರ ತೆರಿಗೆ ಹಣದಲ್ಲಿ ಸಂಬಳ ಪಡೆಯುವ ಪ್ರತಿಯೊಬ್ಬರೂ ಜನರಿಗೆ ಉತ್ತರದಾಯಿಯಾಗಿರಬೇಕು. ಬಡವರ ಆರೋಗ್ಯದ ಜೊತೆ ಚೆಲ್ಲಾಟವಾಡುವ ಅಥವಾ ಇಲಾಖೆಯ ಘನತೆಗೆ ಧಕ್ಕೆ ತರುವ ಯಾರೇ ಆಗಿದ್ದರೂ ಮುಂದಿನ ದಿನಗಳಲ್ಲಿ ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ.ಆರೋಗ್ಯ ಇಲಾಖೆ ಉದ್ಯೋಗ ಇರುವುದು ಜನ ಸೇವೆಗಾಗಿ, ಇಲ್ಲಿ ಶಿಸ್ತು ಉಲ್ಲಂಘಿಸುವವರಿಗೆ ಸ್ಥಾನವಿಲ್ಲ ಎಂದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ