LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

‘ಮದ್ಯ’ ಸೇವಿಸಿ ಕರ್ತವ್ಯಕ್ಕೆ ಹಾಜರಾದ ವಿಜಯಪುರ ವೈದ್ಯಾಧಿಕಾರಿ ಅಮಾನತು ; ಸಚಿವ ದಿನೇಶ್ ಗುಂಡೂರಾವ್ ಖಡಕ್ ವಾರ್ನಿಂಗ್.!

ಬೆಂಗಳೂರು :  ಆರೋಗ್ಯ ಇಲಾಖೆಯ ಘನತೆಗೆ ಧಕ್ಕೆ ತರುವ ಅಥವಾ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸುವ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶಿಸಿದೆ.ವಿಜಯಪುರ ಜಿಲ್ಲೆಯ ವಂದಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶೇಖರ್ ಸಜ್ಜನ ಅವರು ಮದ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಇಲಾಖೆಯ ಶಿಸ್ತು ಉಲ್ಲಂಘಿಸುವವರ ವಿರುದ್ಧ ಕ್ಷಣಾರ್ಧದಲ್ಲಿ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಿದೆ.

ಈ ಬಗ್ಗೆ  ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಆರೋಗ್ಯ ಇಲಾಖೆ ಎನ್ನುವುದು ಕೇವಲ ಸರ್ಕಾರಿ ಕಚೇರಿಯಲ್ಲ, ಅದು ಜನರ ಪಾಲಿನ ಸಂಜೀವಿನಿ. ಇಲ್ಲಿ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಕನಿಷ್ಠ ಶಿಸ್ತು ಮತ್ತು ಸೇವಾ ಮನೋಭಾವ ಇರಲೇಬೇಕು ಎಂಬುದು ನಮ್ಮ ಸರ್ಕಾರದ ಅಚಲ ನಿಲುವು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಇಲಾಖೆಯ ಕೆಲವು ವೈದ್ಯರು ಮತ್ತು ಸಿಬ್ಬಂದಿಯ ಅಶಿಸ್ತಿನ ವರ್ತನೆಗಳ ಬಗ್ಗೆ ವರದಿಗಳು ಬರುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಜನ ಸಾಮಾನ್ಯರ ಜೊತೆ ಅಸಭ್ಯವಾಗಿ ವರ್ತಿಸುವುದು, ಕರ್ತವ್ಯದ ಸಮಯದಲ್ಲಿ ಮದ್ಯಪಾನ ಮಾಡುವುದು ಅಥವಾ ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ಹಾಜರಾಗದೆ ಇರುವುದನ್ನು ನಾವು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.

ವಿಜಯಪುರ ಜಿಲ್ಲೆಯ ವಂದಾಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶೇಖರ್ ಸಜ್ಜನ ಅವರು ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದನ್ನು ಮತ್ತು ಕರ್ತವ್ಯ ಲೋಪ ಎಸಗಿರುವುದನ್ನು ಗಂಭೀರವಾಗಿ ಪರಿಗಣಿಸಿ, ಅವರನ್ನು ತಕ್ಷಣವೇ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದಿದ್ದಾರೆ.

ಈ ಮೂಲಕ ಇಲಾಖೆಯ ಎಲ್ಲಾ ಸಿಬ್ಬಂದಿಗಳಿಗೆ ನಾನು ನೀಡುವ ಸ್ಪಷ್ಟ ಸೂಚನೆ ಏನೆಂದರೆ:

ನಿಮ್ಮ ಹುದ್ದೆ ಅಥವಾ ಪ್ರಭಾವ ಎಷ್ಟೇ ಇರಲಿ, ಸಾರ್ವಜನಿಕರ ಮುಂದೆ ಸರಿಯಾಗಿ ವರ್ತಿಸದಿದ್ದರೆ ಅಥವಾ ಅಶಿಸ್ತು ತೋರಿದರೆ ಕ್ಷಣಾರ್ಧದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ನಾನು ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದೇನೆ. ಜನರ ತೆರಿಗೆ ಹಣದಲ್ಲಿ ಸಂಬಳ ಪಡೆಯುವ ಪ್ರತಿಯೊಬ್ಬರೂ ಜನರಿಗೆ ಉತ್ತರದಾಯಿಯಾಗಿರಬೇಕು. ಬಡವರ ಆರೋಗ್ಯದ ಜೊತೆ ಚೆಲ್ಲಾಟವಾಡುವ ಅಥವಾ ಇಲಾಖೆಯ ಘನತೆಗೆ ಧಕ್ಕೆ ತರುವ ಯಾರೇ ಆಗಿದ್ದರೂ ಮುಂದಿನ ದಿನಗಳಲ್ಲಿ ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ.ಆರೋಗ್ಯ ಇಲಾಖೆ ಉದ್ಯೋಗ ಇರುವುದು ಜನ ಸೇವೆಗಾಗಿ, ಇಲ್ಲಿ ಶಿಸ್ತು ಉಲ್ಲಂಘಿಸುವವರಿಗೆ ಸ್ಥಾನವಿಲ್ಲ ಎಂದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್: ಸರ್ಕಾರ ರಚನೆಗೆ ಹಕ್ಕು ಮಂಡನೆಬಸ್ಸಿನೊಳಗೆ ನಿಲ್ಲಲು ಕಷ್ಟಪಡುತ್ತಿದ್ದ ಕಂಡಕ್ಟರ್‌ ನೋವಿಗೆ ಕರಗಿದ ಸಾರಿಗೆ ಸಂಸ್ಥೆ ; ಈಗ ಕಚೇರಿ ಕೆಲಸಕ್ಕೆ ನಿಯೋಜನೆ !ವಿಜಯ್ ಟಿವಿಕೆ ಪಕ್ಷದಿಂದ ಸ್ಪರ್ಧಿಸಿ ಗೆದ್ದ ಕನ್ನಡಿಗ; ತುಮಕೂರಿನ ವ್ಯಕ್ತಿ ಈಗ ತಮಿಳುನಾಡಿನ ಶಾಸಕ!ಗಡಿಬಿಡಿಯಲ್ಲಿ 15 ರೂಪಾಯಿಗೆ ₹1515 ಪಾವತಿ ಮಾಡಿದ ಗ್ರಾಹಕ, ಪ್ರಾಮಾಣಿಕತೆ ಮೆರೆದ ಹಣ್ಣಿನ ವ್ಯಾಪಾರಿ!ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ; ಸಿಎಂ ಸಿದ್ದರಾಮಯ್ಯBIG NEWS: ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು; ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕೆಂದು ಟಿವಿಕೆ ಜತೆ ಮೈತ್ರಿ: ಡಿಸಿಎಂ ಡಿ.ಕೆ.ಶಿವಕುಮಾರ್ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆRain alert Karnataka : ರಾಜ್ಯದ ಹಲವೆಡೆ ನಾಳೆಯಿಂದ 3 ದಿನ ಭಾರೀ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆBIG NEWS: ವಿಜಯ್ ಭೇಟಿಯಾದ ಕಾಂಗ್ರೆಸ್ ಶಾಸಕರು; ನಾಳೆಯೇ ದಳಪತಿ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕುವೆಂಪು ವಿವಿ ಘಟಿಕೋತ್ಸವ : ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡ ವಿದ್ಯಾರ್ಥಿನಿಯರು