LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

“ನಿಮ್ಮನ್ನೇ ಆರಾಧಿಸಿದ್ದರೆ ರಾಜನಂತೆ ಇರ್ತಿದ್ರು ದರ್ಶನ್ ” ಸಾಂಪ್ರದಾಯಿಕ ಲುಕ್‌ನಲ್ಲಿ ಮಿಂಚಿದ ವಿಜಯಲಕ್ಷ್ಮಿಗೆ ಅಭಿಮಾನಿ ಹಾಕಿದ ಕಮೆಂಟ್ ಸಖತ್ ವೈರಲ್

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಸೋಷಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟಿವ್ ಆಗಿರುತ್ತಾರೆ. ಸದ್ಯ ದರ್ಶನ್ ಅವರು ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪ ಹೊತ್ತು, ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿ ದಿನ ಕಳೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಈ ವಿಚಾರವಾಗಿ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಒಂದು ವಾರದ ಒಳಗಾಗಿ ವರದಿ ಸಲ್ಲಿಸುವಂತೆ ಸೂಚಿಸಿದೆ.

ಪತಿ ಜೈಲಿನಲ್ಲಿದ್ದಾಗ ವಿಜಯಲಕ್ಷ್ಮಿ ಅವರು ಹೋಗದ ದೇವಸ್ಥಾನಗಳಿಲ್ಲ, ತೀರಿಸದ ಹರಕೆಗಳಿಲ್ಲ. ದರ್ಶನ್ ಬಿಡುಗಡೆಗಾಗಿ ಸದಾ ಪ್ರಾರ್ಥನೆ, ಪೂಜೆ ಸಲ್ಲಿಸುತ್ತಿರುವ ವಿಜಯಲಕ್ಷ್ಮಿ ಅವರು ಇದೀಗ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಹೊಸ ಫೋಟೋಶೂಟ್ ಭಾರಿ ಸದ್ದು ಮಾಡುತ್ತಿದೆ. ಜೊತೆಗೆ ಅದಕ್ಕೆ ಅಭಿಮಾನಿಯೊಬ್ಬರು ಮಾಡಿರುವ ಕಮೆಂಟ್ ಎಲ್ಲೆಡೆ ಭಾರಿ ವೈರಲ್ ಆಗುತ್ತಿದೆ.

ಮಹಾರಾಣಿಯಂತೆ ಕಂಗೊಳಿಸಿದ ವಿಜಯಲಕ್ಷ್ಮಿ

ಯಾವುದೋ ವಿಶೇಷ ಸಮಾರಂಭಕ್ಕಾಗಿ ವಿಜಯಲಕ್ಷ್ಮಿ ಅವರು ತುಂಬಾನೇ ಗ್ರಾಂಡ್ ಆಗಿ ಮತ್ತು ಸ್ಟೈಲಿಷ್ ಆಗಿ ರೆಡಿಯಾಗಿದ್ದು, ಕ್ವೀನ್ ರೀತಿ ಕಾಣಿಸಿದ್ದಾರೆ. ನೀಲಿ ಹಾಗೂ ಗೋಲ್ಡನ್ ಶೇಡ್‌ನ ರೇಷ್ಮೆ ಸೀರೆಯನ್ನು ಉಟ್ಟು, ಆಕರ್ಷಕವಾಗಿ ಹೇರ್​ಸ್ಟೈಲ್ ಮಾಡಿ ತಲೆಯಲ್ಲಿ ಮಲ್ಲಿಗೆ ಮುಡಿದು, ಮುಗುಳ್ನಗುತ್ತಾ ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ್ದಾರೆ. ಇದರೊಂದಿಗೆ ಭಾರಿ ವಿನ್ಯಾಸದ ಆಭರಣಗಳನ್ನು ಧರಿಸಿ, ಹಣೆಗೆ ಸಣ್ಣ ಬಿಂದಿ ಇಟ್ಟುಕೊಂಡಿರುವ ವಿಜಯಲಕ್ಷ್ಮಿ ಸೌಂದರ್ಯಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳು ಒಂದು ಕ್ಷಣ ದರ್ಶನ್ ಅವರ ಪ್ರಸ್ತುತ ಸ್ಥಿತಿಯನ್ನು ಮರೆತು ‘ಅತ್ತಿಗೆಮ್ಮ’ ಎಂದು ಪ್ರೀತಿಯಿಂದ ಲೈಕ್ಸ್, ಕಮೆಂಟ್‌ಗಳ ಮಳೆ ಹರಿಸುತ್ತಿದ್ದಾರೆ.

ಗಮನ ಸೆಳೆದ ಅಭಿಮಾನಿಯ ಮಾರ್ಮಿಕ ನುಡಿ:

ಈ ಎಲ್ಲಾ ಕಮೆಂಟ್‌ಗಳ ನಡುವೆ ಒಬ್ಬ ಅಭಿಮಾನಿಯ ಭಾವುಕ ಸಾಲುಗಳು ಎಲ್ಲರ ಗಮನ ಸೆಳೆದಿದ್ದು, ದರ್ಶನ್ ಮತ್ತು ಪವಿತ್ರಾ ಗೌಡ ಸಂಬಂಧದ ಬಗ್ಗೆ ಪರೋಕ್ಷವಾಗಿ ಚಾಟಿ ಬೀಸಿದೆ. ಆತ ಕಾಮೆಂಟ್ ಮಾಡುತ್ತಾ, “ನಿಮ್ಮಂತಹ ದೇವತೆಯನ್ನು ಬಿಟ್ಟು ಪರ ಸ್ತ್ರೀಗಾಗಿ ಪರದಾಡಿದ್ದಕ್ಕೆ ನಿಮ್ಮ ಯಜಮಾನನಿಗೆ ಈ ಪರಿಸ್ಥಿತಿ ಬಂದಿರೋದು… ನಿಮ್ಮನ್ನು ಒಬ್ಬರನ್ನೇ ಆರಾಧಿಸಿದ್ದರೆ ದರ್ಶನ್ ಇವತ್ತು ರಾಜನ ಹಾಗೆ ಇರುತ್ತಿದ್ದರು” ಎಂದು ಬೇಸರ ವ್ಯಕ್ತಪಡಿಸಿ ಕೈಮುಗಿಯುವ ಎಮೋಜಿಯನ್ನು ಹಾಕಿದ್ದಾರೆ. ಈ ಮಾರ್ಮಿಕ ಕಮೆಂಟ್ ಈಗ ಇಂಟರ್ನೆಟ್‌ನಲ್ಲಿ ಸಖತ್ ವೈರಲ್ ಆಗುತ್ತಿದ್ದು, ದರ್ಶನ್ ಫ್ಯಾನ್ಸ್ ವಲಯದಲ್ಲಿ ಭಾರಿ ಚರ್ಚೆ ಮುನ್ನೆಲೆಗೆ ತಂದಿದೆ.

ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ಹೋರಾಟ:

ಮತ್ತೊಂದೆಡೆ, ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬಿರುಸಿನಿಂದ ಸಾಗಿದೆ. ದರ್ಶನ್ ಪರ ಹಿರಿಯ ವಕೀಲರು, “ಸಾಕ್ಷಿಗಳ ವಿಚಾರಣೆ ತಡವಾಗುತ್ತಿದೆ ಮತ್ತು ಜೈಲಿನಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯಗಳು ಸಿಗುತ್ತಿಲ್ಲ, ಹೀಗಾಗಿ ಜಾಮೀನು ಮಂಜೂರು ಮಾಡಿ” ಎಂದು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸೆಷನ್ಸ್ ಕೋರ್ಟ್‌ಗೆ ನೋಟಿಸ್ ಜಾರಿ ಮಾಡಿದ್ದು, ವರದಿ ನೀಡಲು ಒಂದು ವಾರದ ಗಡುವು ನೀಡಿದೆ.

ಪತಿಯ ಜಾಮೀನು ಪ್ರಕ್ರಿಯೆಗಳು ಒಂದೆಡೆ ನಡೆಯುತ್ತಿದ್ದರೆ, ಮತ್ತೊಂದೆಡೆ ವಿಜಯಲಕ್ಷ್ಮಿ ಅವರ ಈ ಸಾಂಪ್ರದಾಯಿಕ ಲುಕ್‌ನ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್‌ನಲ್ಲಿವೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ರಾಜ್ಯಪಾಲ ಅರ್ಲೇಕರ್ ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್: ಸರ್ಕಾರ ರಚನೆಗೆ ಹಕ್ಕು ಮಂಡನೆಬಸ್ಸಿನೊಳಗೆ ನಿಲ್ಲಲು ಕಷ್ಟಪಡುತ್ತಿದ್ದ ಕಂಡಕ್ಟರ್‌ ನೋವಿಗೆ ಕರಗಿದ ಸಾರಿಗೆ ಸಂಸ್ಥೆ ; ಈಗ ಕಚೇರಿ ಕೆಲಸಕ್ಕೆ ನಿಯೋಜನೆ !ವಿಜಯ್ ಟಿವಿಕೆ ಪಕ್ಷದಿಂದ ಸ್ಪರ್ಧಿಸಿ ಗೆದ್ದ ಕನ್ನಡಿಗ; ತುಮಕೂರಿನ ವ್ಯಕ್ತಿ ಈಗ ತಮಿಳುನಾಡಿನ ಶಾಸಕ!ಗಡಿಬಿಡಿಯಲ್ಲಿ 15 ರೂಪಾಯಿಗೆ ₹1515 ಪಾವತಿ ಮಾಡಿದ ಗ್ರಾಹಕ, ಪ್ರಾಮಾಣಿಕತೆ ಮೆರೆದ ಹಣ್ಣಿನ ವ್ಯಾಪಾರಿ!ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ; ಸಿಎಂ ಸಿದ್ದರಾಮಯ್ಯBIG NEWS: ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು; ಜಾತ್ಯಾತೀತ ಶಕ್ತಿಗಳು ಒಂದಾಗಿ ಇರಬೇಕೆಂದು ಟಿವಿಕೆ ಜತೆ ಮೈತ್ರಿ: ಡಿಸಿಎಂ ಡಿ.ಕೆ.ಶಿವಕುಮಾರ್ಶಾಸಕರಿಗೆ ಟಿಕೆಟ್ ವಿತರಣೆಗೂ ಐಪಿಎಲ್ ಫೈನಲ್ ಪಂದ್ಯ ಸ್ಥಳಾಂತರಕ್ಕೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆRain alert Karnataka : ರಾಜ್ಯದ ಹಲವೆಡೆ ನಾಳೆಯಿಂದ 3 ದಿನ ಭಾರೀ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆBIG NEWS: ವಿಜಯ್ ಭೇಟಿಯಾದ ಕಾಂಗ್ರೆಸ್ ಶಾಸಕರು; ನಾಳೆಯೇ ದಳಪತಿ ವಿಜಯ್ ಸಿಎಂ ಆಗಿ ಪ್ರಮಾಣವಚನ ಸ್ವೀಕಾರಕುವೆಂಪು ವಿವಿ ಘಟಿಕೋತ್ಸವ : ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡ ವಿದ್ಯಾರ್ಥಿನಿಯರು