LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ; ಸಿಎಂ ಸಿದ್ದರಾಮಯ್ಯ

ಮೈಸೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ ಎಂದು ಗಂಭೀರ ಆರೋಪ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ನ್ಯಾಯಾಲಯದ ಮೊರೆ ಹೋಗಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂದರ್ಭದಲ್ಲಿ, ” ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಕ್ರಿಮಿನಲ್ ಸಂಚು ನಡೆಸಿದೆ. ರಾಜೇಗೌಡರಿಗೆ ಬಿದ್ದಿದ್ದ 255 ಅರ್ಹವಾಗಿದ್ದ ಮತಗಳನ್ನು ಅನರ್ಹ ಮಾಡಲಾಗಿದೆ. ಮತ ಎಣಿಕೆಯಾಗುವಾಗ ಬಿಜೆಪಿ ಸರ್ಕಾರವಿತ್ತು. ಬಿಜೆಪಿಯವರು ಸಿಬ್ಬಂದಿಯ ಮೂಲಕ ಮತಪತ್ರಗಳನ್ನು ತಿದ್ದಲಾಗಿದ್ದು, ಇದು ಕ್ರಿಮಿನಲ್ ಸಂಚು. ಆದ್ದರಿಂದ ಶೃಂಗೇರಿ ಫಲಿತಾಂಶವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು. ರೈಲ್ವೆ ಇಲಾಖೆಯ ಹುದ್ದೆಗಳಿಗೆ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಈ ಪರೀಕ್ಷೆಗಳನ್ನು ಕೇಂದ್ರ ಸರ್ಕಾರ ನಡೆಸುತ್ತಿದ್ದು, ಅವರ ಈ ನಡವಳಿಕೆಯು ಕನ್ನಡಿಗರ ಪರ ಅವರ ಧೋರಣೆಯನ್ನು ಬಿಂಬಿಸುತ್ತದೆ ಎಂದರು.

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ರಾಜ್ಯದ ಜನರು ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೆಚ್ಚಿಕೊಂಡಿರುವುದನ್ನು ಸೂಚಿಸುತ್ತದೆ. ವಿಪಕ್ಷಗಳ ಯಾವುದೇ ತಂತ್ರಗಾರಿಕೆ ನಡೆಯುವುದಿಲ್ಲ. ಅವರು ಕೇವಲ ಕುತಂತ್ರಗಳನ್ನಷ್ಟೇ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷದ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಿದೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಸಿಎಂ ಬದಲಾವಣೆ ಮಾಡುವ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ. ವರಿಷ್ಠರ ಭೇಟಿಗೆ ಕರೆ ಬಂದರೆ ನವದೆಹಲಿಗೆ ಹೋಗುತ್ತೇನೆ ಎಂದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ