LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯ್ ಟಿವಿಕೆ ಪಕ್ಷದಿಂದ ಸ್ಪರ್ಧಿಸಿ ಗೆದ್ದ ಕನ್ನಡಿಗ; ತುಮಕೂರಿನ ವ್ಯಕ್ತಿ ಈಗ ತಮಿಳುನಾಡಿನ ಶಾಸಕ!

ಮೇ 4ರಂದು ಹೊರಬಿದ್ದ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಬಹುತೇಕರನ್ನು ಅಚ್ಚರಿಗೊಳಪಡಿಸಿದೆ. ದಶಕಗಳ ಇತಿಹಾಸವಿರುವ ಡಿಎಂಕೆ ಪಕ್ಷದ ವಿರುದ್ಧ ಎರಡು ವರ್ಷಗಳ ಹಿಂದಷ್ಟೇ ಸ್ಥಾಪನೆಯಾದ ಟಿವಿಕೆ ಗೆದ್ದು ಬೀಗಿದ್ದು, ಸದ್ಯ ಬಹುಮತಕ್ಕೆ ಕೊರತೆ ಇರುವ 10 ಸೀಟುಗಳನ್ನು ಹೊಂದಿಸಿ ಸರ್ಕಾರ ರಚಿಸಲು ಮುಂದಾಗಿದೆ.

ಟಿವಿಕೆ ಇದೇ ಮೊದಲ ಬಾರಿಗೆ ಸ್ಪರ್ಧಿಸಿದರೂ ಅದರ ಅಭ್ಯರ್ಥಿಗಳು ವಿಜಯ್ ಅಲೆಯಲ್ಲಿ ಬಲಿಷ್ಠ ರಾಜಕಾರಣಿಗಳನ್ನೇ ಬಗ್ಗುಬಡಿದಿದ್ದಾರೆ. ಆಟೊ ಡ್ರೈವರ್, ವಿಜಯ್ ಕಾರು ಚಾಲಕನ ಪುತ್ರ, ಗರ್ಭಿಣಿ ಮಹಿಳೆ ಹಾಗೂ ದಲಿತ ಅಭ್ಯರ್ಥಿಗಳು ಶಾಸಕರಾಗಿ ರೂಪುಗೊಂಡಿದ್ದಾರೆ.

ಹೀಗೆ ಹಲವಾರು ಹೊಸ ಮುಖಗಳಿಗೆ ಮಣೆ ಹಾಕಿರುವ ವಿಜಯ್ ಟಿವಿಕೆ ಪಕ್ಷ ಸದ್ಯ ಈ ವಿಷಯದ ಕುರಿತಾಗಿ ಸಾಕಷ್ಟು ಮೆಚ್ಚುಗೆಗಳನ್ನು ಪಡೆದುಕೊಳ್ಳುತ್ತಿದೆ. ಇನ್ನು ಟಿವಿಕೆ ಪಕ್ಷದಿಂದ ಶಾಸಕರಾದವರ ಪೈಕಿ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರೂ ಸಹ ಇದ್ದಾರೆ.

ಹೌದು, ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ದಬ್ಬೇಘಟ್ಟ ಮೂಲದ ಸುನಿಲ್ ಆನಂದ್ ಎಂಬುವರು ಮೆಟ್ಟುಪಾಳ್ಯಂ ಕ್ಷೇತ್ರದಿಂದ ಎಂಎಲ್‌ಎ ಆಗಿ ಆಯ್ಕೆಯಾಗಿದ್ದಾರೆ. ಡಿಎಂಕೆಯ ಕವಿತಾ ಕಲ್ಯಾಣ ಸುಂದರಮ್ ವಿರುದ್ಧ ಟಿವಿಕೆ ಸುನಿಲ್ ಆನಂದ್ 7768 ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.

ಇನ್ನು ಗೆಲುವಿನ ಬಳಿಕ ಮಾತನಾಡಿದ ಸುನಿಲ್ ಆನಂದ್ ವಿಜಯ್ ಅವರು ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ಹಾಗೆ ಹಣ ಕೊಟ್ಟು ಗೆದ್ದು ಸರ್ಕಾರ ನಡೆಸುವ ಉದ್ದೇಶವನ್ನು ಹೊಂದಿಲ್ಲ, ಅವರು ಲಂಚ ಪಡೆಯದೇ ಜನರಿಗೆ ಸರಿಯಾದ ಸೇವೆ ಮಾಡಬೇಕೆಂಬ ಉದ್ದೇಶದಿಂದ ಪಕ್ಷ ಸ್ಥಾಪಿಸಿದ್ದಾರೆ ಎಂದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ