LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವನ್ಯಜೀವಿ ಕುರಿತಾದ ಸಂಶೋಧನೆಗೆ ಐಪಿಎಸ್ ಅಧಿಕಾರಿ ಡಾ. ಹರ್ಷಗೆ ಕುವೆಂಪು ವಿವಿಯಿಂದ ಪಿ.ಎಚ್.ಡಿ. ಪದವಿ ಪ್ರದಾನ

ಶಿವಮೊಗ್ಗ: ವನ್ಯಜೀವಿ ಮತ್ತು ನಿರ್ವಹಣೆ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ದಕ್ಷ ಐಪಿಎಸ್ ಅಧಿಕಾರಿ ಹಾಗೂ ಮೂಲತಃ ವೈದ್ಯರಾಗಿರುವ ಡಾ. ಹರ್ಷ ಅವರು ಮಂಡಿಸಿದ ಸಂಶೋಧನಾ ಪ್ರಬಂಧವನ್ನು ಪುರಸ್ಕರಿಸಿ ಕುವೆಂಪು ವಿಶ್ವವಿದ್ಯಾಲಯವು ಬುಧವಾರದಂದು ನಡೆದ 35 ನೇ ಘಟಿಕೋತ್ಸವದಲ್ಲಿ ಪಿ.ಎಚ್.ಡಿ. ಪದವಿಯನ್ನು ಪ್ರದಾನ ಮಾಡಿದೆ.

ಡಾ. ಹರ್ಷ ಅವರು, “ನಾಗರಹೊಳೆ, ಬಂಡೀಪುರ ಮತ್ತು ಬಿಆರ್‌ಟಿ (ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ) ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಹುಲಿಗಳ ಜನಸಂಖ್ಯೆಯ ಸ್ಥಿರತೆಯ ಕುರಿತು ಒಂದು ಅಧ್ಯಯನ, ಮಾನವ-ಹುಲಿ ಸಂಘರ್ಷಕ್ಕೆ ವಿಶೇಷ ಉಲ್ಲೇಖದೊಂದಿಗೆ” ಎಂಬ ವಿಷಯದ ಕುರಿತು ಸುದೀರ್ಘ ಅಧ್ಯಯನ ನಡೆಸಿದ್ದರು.

ಸಂಶೋಧನೆಯಲ್ಲಿ ಕರ್ನಾಟಕದ ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಾದ ನಾಗರಹೊಳೆ ಮತ್ತು ಬಂಡೀಪುರಗಳಲ್ಲಿ ಹುಲಿಗಳ ಸಂಖ್ಯೆ ಹಾಗೂ ಅವುಗಳ ನೈಸರ್ಗಿಕ ವಾಸಸ್ಥಾನದ ಸಮತೋಲನದ ಬಗ್ಗೆ ವೈಜ್ಞಾನಿಕ ವಿಶ್ಲೇಷಣೆ ನಡೆಸಲಾಗಿದೆ.

ಅರಣ್ಯ ಅಂಚಿನ ಗ್ರಾಮಗಳಲ್ಲಿ ಎದುರಾಗುತ್ತಿರುವ ಮಾನವ ಮತ್ತು ಹುಲಿಗಳ ನಡುವಿನ ಸಂಘರ್ಷಕ್ಕೆ ಕಾರಣಗಳು ಹಾಗೂ ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅವರು ಪ್ರಬಂಧದಲ್ಲಿ ಮಹತ್ವದ ಅಂಶಗಳನ್ನು ಉಲ್ಲೇಖಿಸಿದ್ದಾರೆ.

ಕುವೆಂಪು ವಿಶ್ವವಿದ್ಯಾನಿಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಪ್ರಾಧ್ಯಾಪಕ ಡಾ. ವಿಜಯ ಕುಮಾರ್ ಅವರ ಮಾರ್ಗದರ್ಶನದಲ್ಲಿ ಡಾ. ಹರ್ಷ ಪಿ.ಎಸ್. ಅವರು ಐದು ವರ್ಷಗಳ ಕಾಲ ಕ್ಷೇತ್ರ ಆಧಾರಿತ ಅಧ್ಯಯನವನ್ನು ನಡೆಸಿದ್ದಾರೆ. ಪ್ರಸ್ತುತ ಡಾ.ಪಿ.ಎಸ್.ಹರ್ಷರವರು ಬಳ್ಳಾರಿ ವಲಯದ ಐಜಿಪಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಸಚಿವ ಡಾ.ಎಂ.ಸಿ. ಸುಧಾಕರ್, ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ ಮೊದಲಾದವರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಬಂಗಾಳದಲ್ಲಿ ಹೊಸದಾಗಿ ಆಯ್ಕೆಯಾದ ಶೇ.65 ರಷ್ಟು ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್: ಶೇ.61 ರಷ್ಟು ಮಂದಿ ‘ಕೋಟ್ಯಾಧಿಪತಿಗಳು’SHOCKING: ರೈಲಿನಲ್ಲಿ ಸೀಟಿಗಾಗಿ ಗಲಾಟೆ ವೇಳೆ ಇಬ್ಬರಿಗೆ ಚಾಕು ಇರಿತFact Check: ಚುನಾವಣೆ ಗೆದ್ದ ಸಂಭ್ರಮದಲ್ಲಿ ಕಂಠಪೂರ್ತಿ ಕುಡಿದು ಬಿಯರ್ ಹಿಡಿದು ಡಾನ್ಸ್ ಮಾಡಿದ ಟಿವಿಕೆ ಅಭ್ಯರ್ಥಿ; ವಿಡಿಯೊವಿಜಯ್ ಪ್ರಮಾಣ ವಚನಕ್ಕೆ ಸಜ್ಜಾಗುತ್ತಿದ್ದಂತೆ ಅಚ್ಚರಿ ಬೆಳವಣಿಗೆ: ಬದ್ದವೈರಿಗಳಾದ ಡಿಎಂಕೆ -ಎಐಡಿಎಂಕೆ ಸರ್ಕಾರ ರಚನೆಗೆ ರಹಸ್ಯ ಮಾತುಕತೆವನ್ಯಜೀವಿ ಕುರಿತಾದ ಸಂಶೋಧನೆಗೆ ಐಪಿಎಸ್ ಅಧಿಕಾರಿ ಡಾ. ಹರ್ಷಗೆ ಕುವೆಂಪು ವಿವಿಯಿಂದ ಪಿ.ಎಚ್.ಡಿ. ಪದವಿ ಪ್ರದಾನಚಿಪ್ಪು ಹಂದಿಯ ಚಿಪ್ಪುಗಳ ಮಾರಾಟಕ್ಕೆ ಯತ್ನ: ಮೂವರು ಅರೆಸ್ಟ್ಭೋವಿ ನಿಗಮ ಸೇರಿದಂತೆ ವಿವಿಧ ಸಮುದಾಯ ಅಭಿವೃದ್ಧಿ ನಿಗಮಗಳ ಸಾಲ ಮನ್ನಾ: ಸಿಎಂ ಸಿದ್ಧರಾಮಯ್ಯBREAKING: 75 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ನೌಕರರುBSNL ಗ್ರಾಹಕರಿಗೆ ಗುಡ್ ನ್ಯೂಸ್: ಕೇವಲ 1 ರೂ.ಗೆ 2GB ದೈನಂದಿನ ಡೇಟಾ, ಅನಿಯಮಿತ ಧ್ವನಿ ಕರೆ ಸೇರಿ ಹಲವು ಸೌಲಭ್ಯವಿಜಯಪುರದಲ್ಲಿ ಬೆಚ್ಚಿಬೀಳಿಸುವ ಘಟನೆ: 3 ವರ್ಷದ ಕಂದಮ್ಮನನ್ನು ಕಚ್ಚಿ ಎಳೆದೊಯ್ದ ಬೀದಿ ನಾಯಿ, ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ