LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ವಾಹನ ನೋಂದಣಿಗೆ ಆಧಾರ್ ಇ-ಕೆವೈಸಿ ಕಡ್ಡಾಯ: ಸಚಿವ ಕೃಷ್ಣಬೈರೇಗೌಡ 

ಬೆಂಗಳೂರು: ರಾಜ್ಯದಲ್ಲಿ ಆದಾಯ ಪ್ರಮಾಣಪತ್ರಗಳ ದುರುಪಯೋಗಕ್ಕೆ ಕಡಿವಾಣ ಹಾಕಲು ಮತ್ತು ಸರ್ಕಾರಿ ಸೇವೆಗಳಲ್ಲಿ ಪಾರದರ್ಶಕತೆ ತರಲು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಭರ್ಜರಿ ಮಾಸ್ಟರ್ ಪ್ಲಾನ್ ಒಂದನ್ನು ಸಿದ್ಧಪಡಿಸಿದ್ದಾರೆ. ಇನ್ನು ಮುಂದೆ ಹೊಸ ವಾಹನ ಖರೀದಿಸುವಾಗ ಆಧಾರ್ ಇ-ಕೆವೈಸಿ (e-KYC) ಕಡ್ಡಾಯಗೊಳಿಸುವ ಮೂಲಕ ಪ್ರತಿಯೊಂದು ಕುಟುಂಬದ ನಿಖರ ಆರ್ಥಿಕ ಸ್ಥಿತಿಗತಿಯನ್ನು ಪತ್ತೆಹಚ್ಚಲು ಸರ್ಕಾರ ಮುಂದಾಗಿದೆ.ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಸಕಾಲ ಸೇವೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಈ ಮಹತ್ವದ ನಿರ್ಧಾರದ ಸುಳಿವು ನೀಡಿದ್ದಾರೆ.

ಏನಿದು ಹೊಸ ವ್ಯವಸ್ಥೆ?

ಸರ್ಕಾರವು ರಾಜ್ಯದ ಪ್ರತಿ ಕುಟುಂಬದ ಸಮಗ್ರ ಆರ್ಥಿಕ ಡೇಟಾಬೇಸ್ (Economic Database) ಸಿದ್ಧಪಡಿಸುತ್ತಿದೆ. ಇದು ಹೇಗೆ ಕೆಲಸ ಮಾಡುತ್ತದೆ ಎಂಬ ಹೈಲೈಟ್ಸ್ ಇಲ್ಲಿದೆ:

ಆಧಾರ್ ಲಿಂಕ್: ಚಾಲನಾ ಪರವಾನಗಿ (DL) ಪಡೆಯುವಾಗ ಆಧಾರ್ ಕಡ್ಡಾಯವಿರುವಂತೆ, ವಾಹನ ನೋಂದಣಿಗೂ ಆಧಾರ್ ಇ-ಕೆವೈಸಿ ಕಡ್ಡಾಯವಾಗಲಿದೆ. ಇದರಿಂದ ಒಬ್ಬ ವ್ಯಕ್ತಿ ಅಥವಾ ಕುಟುಂಬದ ಹೆಸರಿನಲ್ಲಿ ಎಷ್ಟು ವಾಹನಗಳಿವೆ ಎಂಬುದು ಸರ್ಕಾರದ ಬೆರಳ ತುದಿಯಲ್ಲಿ ಲಭ್ಯವಿರುತ್ತದೆ.

ಕುಟುಂಬ (Kutumba) ಸಾಫ್ಟ್‌ವೇರ್ ಬಳಕೆ: ರಾಜ್ಯದ 1.6 ಕೋಟಿ ಕುಟುಂಬಗಳ ಡೇಟಾ ಹೊಂದಿರುವ ಕುಟುಂಬ ಸಾಫ್ಟ್‌ವೇರ್ ಜೊತೆಗೆ ತೆರಿಗೆ ಪಾವತಿ, ಆಸ್ತಿ ವಿವರ (ಇ-ಸ್ವತ್ತು, ಇ-ಆಸ್ತಿ) ಮತ್ತು ವಾಹನ ಮಾಲೀಕತ್ವದ ವಿವರಗಳನ್ನು ವಿಲೀನಗೊಳಿಸಲಾಗುತ್ತದೆ.

ತ್ವರಿತ ಪ್ರಮಾಣಪತ್ರ: ಸದ್ಯಕ್ಕೆ ಆದಾಯ ಪ್ರಮಾಣಪತ್ರ ಪಡೆಯಲು 14-21 ದಿನ ಬೇಕು. ಆದರೆ ಈ ಹೊಸ ಸ್ಮಾರ್ಟ್ ಸಿಸ್ಟಮ್ ಜಾರಿಗೆ ಬಂದರೆ ಕೇವಲ 3 ರಿಂದ 4 ದಿನಗಳಲ್ಲಿ ಆಟೋಮ್ಯಾಟಿಕ್ ಆಗಿ ಪ್ರಮಾಣಪತ್ರ ನಿಮ್ಮ ಕೈ ಸೇರಲಿದೆ

ಅಕ್ರಮಗಳಿಗೆ ಶಾಕ್

ವಾರ್ಷಿಕ 8 ಲಕ್ಷ ರೂ.ಗಿಂತ ಹೆಚ್ಚು ಆದಾಯವಿದ್ದರೂ ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಅಥವಾ ಶಿಕ್ಷಣದಲ್ಲಿ ರಿಯಾಯಿತಿ ಪಡೆಯುವವರಿಗೆ ಈ ವ್ಯವಸ್ಥೆ ಬಿಸಿ ಮುಟ್ಟಿಸಲಿದೆ. ಲಕ್ಷಾಂತರ ರೂಪಾಯಿ ಕೊಟ್ಟು ಮ್ಯಾನೇಜ್‌ಮೆಂಟ್ ಕೋಟಾದಲ್ಲಿ ಸೀಟು ಪಡೆಯುವ ವಿದ್ಯಾರ್ಥಿಗಳೂ ಕಡಿಮೆ ಆದಾಯದ ಸರ್ಟಿಫಿಕೇಟ್ ಹೊಂದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಅಂತಹ ಅಕ್ರಮಗಳನ್ನು ತಡೆಯುವುದೇ ನಮ್ಮ ಉದ್ದೇಶ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಮಹಜರು ಪ್ರಕ್ರಿಯೆ ರದ್ದು?

ಈ ಆರ್ಥಿಕ ಪ್ರೊಫೈಲ್ ಸಂಪೂರ್ಣವಾಗಿ ಸಿದ್ಧವಾದರೆ, ಆದಾಯ ಪ್ರಮಾಣಪತ್ರ ನೀಡುವ ಮೊದಲು ಗ್ರಾಮ ಆಡಳಿತಾಧಿಕಾರಿಗಳು (VAO) ಮನೆಗೆ ಬಂದು ತನಿಖೆ ನಡೆಸುವ (ಮಹಜರು) ಹಳೇ ಪದ್ಧತಿಯನ್ನು ರದ್ದುಗೊಳಿಸಲು ಸರ್ಕಾರ ಚಿಂತಿಸುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ