LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ” ನೂತನ ಆಡಳಿತ ಕಚೇರಿಯಾದ ‘ಸಹಕಾರ ಸಮೃದ್ಧಿ ಸೌಧ’ವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ನಾನೇ ನೆರವೇರಿಸಿದ್ದೆ. ಮೂರು ವರ್ಷಗಳಲ್ಲಿ 19.43 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ. ನೆಹರೂ ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಒಂದು ಶಾಲೆ, ಪಂಚಾಯತಿ ಮತ್ತು ಸಹಕಾರ ಸಂಘ ಇರಲೇಬೇಕು, ಆಗ ಮಾತ್ರ ಆ ಊರಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದಿದ್ದರು. ಪ್ರಸ್ತುತ ಹಾಲಿನ ಸೊಸೈಟಿಗಳಾದ ನಂತರ ಪ್ರತಿ ಊರಿನಲ್ಲಿ ಇದು ಸಾಧ್ಯವಾಗಿದೆ ಎಂದರು.

“ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ ಎಂಬ ಸಹಕಾರಿ ತತ್ವದಡಿ ರಾಜ್ಯ ಅಭಿವೃದ್ಧಿಯಾಗುತ್ತಿದೆ”. ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು. 60% ಜನ ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದು, ಗ್ರಾಮದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಸಹಕಾರಿ ಸಂಘಗಳ ಮೂಲಕ ನೀಡಲಾಗುತ್ತಿದೆ ಎಂದರು

ಹಾಲಿನ ಸೊಸೈಟಿಗಳು ಬಂದ ನಂತರ ರೈತರ ಪರಿಸ್ಥಿತಿ ಉತ್ತಮವಾಗಿದ್ದು, ದಿನವೊಂದಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅತ್ಯಂತ ಲಾಭದಾಯಕವಾದ ಉಪಕಸುಬಾಗಿ ಸಹಕಾರ ಕ್ಷೇತ್ರದಿಂದ ಸಾಧ್ಯವಾಗಿದೆ.

ಹಿಂದೆ ನಾನು ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳನ್ನು ಹಾಲು ಡೈರಿಯೊಂದಿಗೆ ಸೇರ್ಪಡೆ ಮಾಡಲಾಯಿತು. ಇದರಿಂದ ಹಾಲು ಉತ್ಪಾದನೆ ಹೆಚ್ಚಾಗಲು ಸಾಧ್ಯವಾಯಿತು. ಸಹಕಾರ ಸೌಧದಲ್ಲಿ ಸೇವೆ ಉತ್ತಮವಾಗಿರಲಿ ಎಂದು ಆಶಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಹೆಚ್.ಕೆ.ಪಾಟೀಲ್, ಶಾಸಕ ರಿಜ್ವಾನ್ ಅರ್ಷದ್ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿಮಕ್ಕಳ ಮನಸ್ಸು, ಮೆದುಳಿನ ಶಕ್ತಿಗೆ ದಾರಿದೀಪ ಈ ಪುಸ್ತಕ: ತಪ್ಪದೇ ಖರೀದಿಸಿ, ನಿಮ್ಮ ಮಕ್ಕಳಿಗೆ ತಪ್ಪದೇ ಓದಿಸಿ!ಹಿಂದೂಗಳ ಆಚರಣೆಗೆ ಸರ್ಕಾರ ಅಡ್ಡಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಕಾಂಗ್ರೆಸ್ ಪಕ್ಷ ಸಂಘಟನೆ ಬಲವರ್ಧನೆಗೆ 'ಕೆಪಿಸಿಸಿ ಕನೆಕ್ಟ್ ಸೆಂಟರ್' ಸ್ಥಾಪನೆ: ಪದಾಧಿಕಾರಿಗಳ ನೇಮಕ