ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿಯಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಶಹಾಪುರದ ಆನಂದ್(21), ಅಂಬರೀಶ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ನೇಹಿತರ ಜೊತೆಗೆ ಕೆರೆಗೆ ಈಜಲು ಹೋಗಿದ್ದಾಗ ಘಟನೆ ನಡೆದಿದೆ.
ನಾಲ್ವರು ಸ್ನೇಹಿತರು ಕೆರೆಯಲ್ಲಿ ಈಜಲು ತೆರಳಿದ್ದರು. ಈಜು ಬಾರದ ಇಬ್ಬರು ಮೃತಪಟ್ಟಿದ್ದಾರೆ. ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ನಿನ್ನೆ ಮೃತದೇಹಗಳು ಪತ್ತೆಯಾಗಿರಲಿಲ್ಲ. ಕತ್ತಲಾಗಿದ್ದರಿಂದ ಕಾರ್ಯಾಚರಣೆ ನಿಲ್ಲಿಸಲಾಗಿದ್ದು, ಶನಿವಾರ ಬೆಳಗ್ಗೆ ಮತ್ತೆ ಮೃತದೇಹಗಳಿಗ ಹುಡುಕಾಟ ನಡೆಸಲಾಗುವುದು. ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.