LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಡಿ. ಸುಧಾಕರ್ ಅಂತಿಮ ದರ್ಶನ ಪಡೆದ ಎಂ.ಬಿ. ಪಾಟೀಲ್: ಕುಟುಂಬ ಸದಸ್ಯರಿಗೆ ಸಾಂತ್ವನ

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ ಹಿನ್ನಲೆಯಲ್ಲಿ ಸಚಿವ ಎಂ.ಬಿ. ಪಾಟೀಲ್ ಸಂತಾಪ ಸೂಚಿಸಿದ್ದಾರೆ.

ಡಿ. ಸುಧಾಕರ್ ಅವರ ಬೆಂಗಳೂರಿನ ನಿವಾಸಕ್ಕೆ ತೆರಳಿ, ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಪುಷ್ಪ ನಮನ ಸಲ್ಲಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

ಜನಪರ ಕಾಳಜಿ ಹೊಂದಿದ್ದ ಅವರು ಶಾಸಕರಾಗಿ, ಸಚಿವರಾಗಿ ನಾಡಿಗೆ ಸಲ್ಲಿಸಿದ ಸೇವೆ ಸದಾ ಸ್ಮರಣೀಯ. ಹಲವು ವರ್ಷಗಳ ಕಾಲ ಜೊತೆಯಾಗಿ ಕೆಲಸ ಮಾಡಿದ್ದ ಆತ್ಮೀಯ ಸಹೋದ್ಯೋಗಿಯನ್ನು ಕಳೆದುಕೊಂಡ ನೋವು ಮನಸ್ಸನ್ನು ಭಾರವಾಗಿಸಿದೆ, ಅವರ ನಿಧನ ನಂಬಲಾಗದ ಸಂಗತಿಯಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಕುಟುಂಬಸ್ಥರಿಗೆ, ಅಭಿಮಾನಿಗಳಿಗೆ ಈ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಕರ್ನಾಟಕದ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು, ಆತ್ಮೀಯರೂ ಆದ ಡಿ. ಸುಧಾಕರ್ ಅವರ ನಿಧನದ ಸುದ್ದಿ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜನಸೇವೆಯನ್ನು ಧ್ಯೇಯವಾಗಿಸಿಕೊಂಡು ಸರಳತೆ, ಸೌಜನ್ಯ ಹಾಗೂ ಕಾಳಜಿಯಿಂದ ಜನರ ಮನ ಗೆದ್ದಿದ್ದರು. ಸಾರ್ವಜನಿಕ ಬದುಕಿನಲ್ಲಿ ತಮ್ಮದೇ ಆದ ಸೇವಾ ಮನೋಭಾವದಿಂದ ಸದಾ ಸ್ಮರಣೀಯರಾಗಿರುತ್ತಾರೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ