LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರು, ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ: ವೈರಲ್ ಆಯ್ತು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ

ಬೆಳಗಾವಿ: ರೈತರು ಮತ್ತು ನನ್ನ ಕ್ಷೇತ್ರದ ಜನರ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸುಮ್ಮನಿರುವುದಿಲ್ಲ. ಅಂತಹ ಪ್ರಸಂಗ ಬಂದರೆ ಮೆಟ್ಟಿನಲ್ಲಿ ಹೊಡೆಯುತ್ತೇನೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಎಚ್ಚರಿಕೆ ನೀಡಿದ್ದಾರೆ..

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ ಗ್ರಾಮದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ್ ಸವದಿ ಅವರು ನೀಡಿದ ಈ ಹೇಳಿಕೆ ಭಾರಿ ವೈರಲ್ ಆಗಿದೆ.

ತಮ್ಮ ವಿರುದ್ಧ ನಡೆಯುತ್ತಿರುವ ವೈಯಕ್ತಿಕ ಟೀಕೆಗಳಿಗೆ ತಿರುಗೇಟು ನೀಡಿದ ಸವದಿ, ಲಕ್ಷ್ಮಣ್ ಸವದಿಯನ್ನು ಟ್ರ್ಯಾಕ್ಟರ್ ಹೊಡೆಯಲು ಕಳಿಸುತ್ತೇವೆ ಎಂದು ಕೆಲವರು ಮಾತನಾಡುತ್ತಿದ್ದಾರೆ. ಹೌದು, ನಾನೊಬ್ಬ ರೈತನ ಹೊಟ್ಟೆಯಲ್ಲಿ ಹುಟ್ಟಿದ್ದೇನೆ. ಎತ್ತು ಹೊಡೆಯುತ್ತೇನೆ, ಟ್ರ್ಯಾಕ್ಟರ್ ಕೂಡ ಹೊಡೆಯುತ್ತೇನೆ. ಆದರೆ, ಪ್ರಸಂಗ ಬಂದರೆ ಅನ್ಯಾಯ ಮಾಡಲು ಬಂದವನಿಗೆ ಮೆಟ್ಟಿನಿಂದಲೂ ಹೊಡೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ಐಎಎಸ್, ಐಪಿಎಸ್ ಓದಿಲ್ಲ. ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಓದಿ, ಕಬಡ್ಡಿ ಆಡಿಕೊಂಡು, ದನ ಕಾಯ್ದುಕೊಂಡು ಬೆಳೆದವ. ನನ್ನ ಕ್ಷೇತ್ರದ 1,31,000 ಜನರೇ ನನಗೆ ರಕ್ಷಾಕವಚವಾಗಿ ನಿಂತಿದ್ದಾರೆ. ರೈತರ ಕುಲದಲ್ಲಿ ಹುಟ್ಟಿದ ನನಗೆ ಅವರ ಸ್ವಾಭಿಮಾನ ಮತ್ತು ಬೆಳೆದ ಬೆಳೆಗೆ ಮೋಸವಾಗುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ರಾಜ್ಯದಲ್ಲೇ ಅತಿ ಹೆಚ್ಚು, ಅಂದರೆ ವಾರ್ಷಿಕ 76 ಲಕ್ಷ ಟನ್ ಕಬ್ಬು ಬೆಳೆಯುವ ಹೆಮ್ಮೆಯ ತಾಲೂಕು ನಮ್ಮದು. ಅಮ್ಮಾಜೇಶ್ವರಿ-ಬಸವೇಶ್ವರ ಏತ ನೀರಾವರಿ ಯೋಜನೆ ಪೂರ್ಣಗೊಂಡ ಬಳಿಕ ಮುಂದಿನ ಕೇವಲ ಎರಡು ವರ್ಷಗಳಲ್ಲಿ ಇದು 1 ಕೋಟಿ ಟನ್ ಕಬ್ಬು ಬೆಳೆಯುವ ನಾಡಾಗಿ ಹೊರಹೊಮ್ಮಲಿದೆ ಎಂದರು.

ರೈತರು ಬೆವರು ಹರಿಸಿ ಬೆಳೆದ ಕಬ್ಬನ್ನು ಕಾರ್ಖಾನೆಗೆ ತಂದಾಗ ನಡೆಯುತ್ತಿರುವ ಮೋಸದ ಬಗ್ಗೆ ಗೊತ್ತಾಗಿದೆ.ಒಂದು ಟ್ರಿಪ್‌ಗೆ ಎರಡು-ಮೂರು ಟನ್ ತೂಕದ ಕಬ್ಬು ಕದ್ದು ರೈತರ ರಕ್ತ ಹೀರುವವರಿಗೆ ಒಂದು ಎಕರೆ ಕಬ್ಬು ಬೆಳೆಯಲು ರೈತರು ಪಡುವ ಕಷ್ಟವೇನು ಎಂಬುದು ತಿಳಿದಿಲ್ಲ. ಇಂತಹ ಮೋಸದಾಟಗಳನ್ನು ಇನ್ನು ಮುಂದೆ ಸಹಿಸುವುದಿಲ್ಲ ಎಂದು ಕಾರ್ಖಾನೆಗಳು ಹಾಗೂ ದಲ್ಲಾಳಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್