LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಚೋದನಾಕಾರಿ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ಗೆ ಹೈಕೋರ್ಟ್ ತಡೆ

ಬೆಂಗಳೂರು: ಮುಸ್ಲಿಮರ ಕುರಿತಾಗಿ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ಅಲಿಯಾಸ್ ಮಿಥುನ್ ಚಕ್ರವರ್ತಿ ದೇವಿದಾಸ್ ಶೇಟ್ ವಿರುದ್ಧ ದಾಖಲಾದ ಎಫ್ಐಆರ್ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಧಾರವಾಡದ ಟೌನ್ ಪೋಲಿಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಚಕ್ರವರ್ತಿ ಸೂಲಿಬೆಲೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ ಸಂಜೀವ್ ಕುಮಾರ್ ಹಂಚಾಟೆ ರಜಾಕಾಲೀನ ಏಕ ಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು.

ಕೆಲಕಾಲ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಪೀಠ ಪ್ರಕರಣವನ್ನು ವಿಸ್ತೃತವಾಗಿ ಪರಿಗಣಿಸುವ ಅಗತ್ಯವಿದೆ. ಮೇಲ್ನೋಟಕ್ಕೆ ತಡೆ ನೀಡುವ ಪ್ರಕರಣ ಇದಾಗಿದೆ. ಆದ್ದರಿಂದ ಪ್ರಕರಣಕ್ಕೆ ತಡೆಜಾಜ್ಞೆ ನೀಡಲಾಗಿದೆ ಎಂದು ಆದೇಶಿಸಿದೆ..

ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ವಾದ ಮಂಡಿಸಿ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಪೋಲೀಸ್ ದೂರು ನೀಡಿದ್ದಾರೆ. ಅವರು ಬಾಧಿತರಲ್ಲ, ಇದರಿಂದ ದೂರು ನೀಡುವ ಯಾವುದೇ ಹಕ್ಕು ಅವರಿಗೆ ಇಲ್ಲ. ಚಕ್ರವರ್ತಿ ಸೂಲಿಬೆಲೆ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದು, ಅದು ಸಂವಿಧಾನದ 19ನೇ ವಿಧಿಯ ವ್ಯಾಪ್ತಿಗೆ ಬರುತ್ತದೆ. ಹಾಲಿ ಪ್ರಕರಣಕ್ಕೆ ಬಿಎನ್ಎಸ್ ಸೆಕ್ಷನ್ 196 ಪ್ರಚೋದನಾಕಾಕಾರಿ ಭಾಷಣ ಮಾಡಿ ವಿವಿಧ ಗುಂಪುಗಳ ನಡುವೆ ದ್ವೇಷ ಹರಡುವುದು ಅನ್ವಯಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಸಾರಿಗೆ ಇಲಾಖೆಗೆ 7 ಸಾವಿರ ಕೋಟಿ ರೂ. ಅನುದಾನ ಮಂಜೂರು : ಬೈರತಿ ಸುರೇಶ್ ಘೋಷಣೆ'RSS' ನಂಥ 100 ಸಂಘಟನೆ ಬಂದ್ರೂ ದೇಶ ಹಾಳು ಮಾಡಲು ಸಾಧ್ಯವಿಲ್ಲ : ಬಿಕೆ ಹರಿಪ್ರಸಾದ್ ವಾಗ್ದಾಳಿಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಸಿಎಂBREAKING : ಬೆಂಗಳೂರಿನ ಕಂಪನಿಯಲ್ಲಿ ಕನ್ನಡಿಗರಿಗೆ ಕೆಲಸ ಇಲ್ಲ ಎಂದ ಕಂಪನಿ : ತ.ನಾಡಿನವರು ಮಾತ್ರ ಅರ್ಜಿ ಸಲ್ಲಿಸಿ!ಬೆಂಗಳೂರಲ್ಲಿ ಗೌರಿ-ಗಣೇಶ ಹಬ್ಬ ಸಂಭ್ರಮಾಚರಣೆ : ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನತೆ!BREAKING : ರಾಜ್ಯದ ಜನರಿಗೆ ಬಿಗ್ ಶಾಕ್ : ನೂರರ ಗಡಿ ಸಮೀಪಿಸಿದ ಈರುಳ್ಳಿ ದರ, ಗ್ರಾಹಕರ ಕಣ್ಣಲ್ಲಿ ನೀರು!ರೇಷನ್‌ ಕಾರ್ಡ್‌ ಇ-ಕೆವೈಸಿಗೆ ಈ ದಾಖಲೆ ಬೇಕಿಲ್ಲ, ಆನ್‌ಲೈನ್‌ನಲ್ಲಿ ಹೀಗೆ ಚೆಕ್‌ ಮಾಡ್ಕೋಳಿ : Ration Card E-KYCಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರು ಸಜ್ಜು: ವಿಸರ್ಜನೆಗೆ 42 ಕಲ್ಯಾಣಿ, 659 ಮೊಬೈಲ್ ಟ್ಯಾಂಕರ್ ವ್ಯವಸ್ಥೆಬೆಂಗಳೂರಿನ ಬೀದಿಯಲ್ಲಿ ಗಣೇಶನನ್ನು ಕೂರಿಸುತ್ತೀರಾ? ಹಾಗಾದರೇ ಈ ಬೆಸ್ಕಾಂ ಸೂಚನೆಗಳನ್ನು ಪಾಲನೆ ಕಡ್ಡಾಯ!ದಾವಣಗೆರೆಯಲ್ಲಿ ಹಳೇ ದ್ವೇಷದ ಹಿಂಸಾಚಾರಕ್ಕೆ ಯುವಕ ಬಲಿ