LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಂಸಾರದಲ್ಲಿ ಬಿರುಕು? ವಿಚ್ಛೇದನದ ಗಾಳಿ ಸುದ್ದಿಯ ನಡುವೆ ಮುಂಬೈ ಬೀದಿಯಲ್ಲಿ ಕಾಣಿಸಿಕೊಂಡ ಮೌನಿ ರಾಯ್

ಖ್ಯಾತ ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಮತ್ತು ಅವರ ಪತಿ ಸೂರಜ್ ನಂಬಿಯಾರ್ ನಡುವಿನ ಸಂಬಂಧದಲ್ಲಿ ಬಿರುಕು ಮೂಡಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಎಲ್ಲಾ ವಿಚ್ಛೇದನದ ವದಂತಿಗಳ ನಡುವೆಯೇ ಮೌನಿ ರಾಯ್ ಮುಂಬೈನಲ್ಲಿ ತಮ್ಮ ಆಪ್ತ ಗೆಳತಿಯೊಂದಿಗೆ ಡಿನ್ನರ್ ಡೇಟ್ ನಲ್ಲಿ ಕಾಣಿಸಿಕೊಂಡಿದ್ದು, ಕ್ಯಾಮೆರಾ ಕಣ್ಣುಗಳಿಗೆ ಸಿಲುಕಿದ್ದಾರೆ.

ಬುಧವಾರ ರಾತ್ರಿ ಮುಂಬೈನ ಹೋಟೆಲ್‌ವೊಂದಕ್ಕೆ ಗೆಳತಿ ರೂಪಾಲಿ ಕಡಿಯಾನ್ ಅವರೊಂದಿಗೆ ಬಂದಿದ್ದ ಮೌನಿ, ಕಪ್ಪು ಬಣ್ಣದ ಶಾರ್ಟ್ ಡ್ರೆಸ್‌ನಲ್ಲಿ ಮಿಂಚುತ್ತಿದ್ದರು. ಈ ವೇಳೆ ಅಲ್ಲಿ ಹಾಜರಿದ್ದ ಮಾಧ್ಯಮದವರು ಮತ್ತು ಪಾಪರಾಜಿಗಳು ವಿಚ್ಛೇದನದ ಸುದ್ದಿಯ ಕುರಿತು ಪ್ರಶ್ನೆ ಕೇಳಲು ಪ್ರಯತ್ನಿಸಿದರೂ ಸಹ, ಮೌನಿ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿಯೇ ಅಲ್ಲಿಂದ ತೆರಳಿದರು. ಇದಕ್ಕೂ ಮುನ್ನ ಬೆಳಿಗ್ಗೆ ಮೌನಿ ತಮ್ಮ ಗೆಳತಿ ರೂಪಾಲಿ ಜನ್ಮದಿನಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿಶೇಷವಾಗಿ ಶುಭಾಶಯ ಕೋರಿದ್ದರು.

ತಮ್ಮ ವೈವಾಹಿಕ ಜೀವನದ ಕುರಿತು ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಪ್ರತಿಕ್ರಿಯಿಸಿದ್ದ ಮೌನಿ ರಾಯ್, ಮಾಧ್ಯಮಗಳು ದಯವಿಟ್ಟು ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಮತ್ತು ನಮಗೆ ಸ್ವಲ್ಪ ಖಾಸಗಿತನವನ್ನು ನೀಡಿ ಎಂದು ವಿನಂತಿಸಿದ್ದರು. ಆದರೂ ಸಹ ಸೋಷಿಯಲ್ ಮೀಡಿಯಾ ಬಳಕೆದಾರರು ಮೌನಿ ಮತ್ತು ಸೂರಜ್ ಪರಸ್ಪರ ಇನ್ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿರುವುದನ್ನು ಗಮನಿಸಿದ್ದು, ಸೂರಜ್ ತಮ್ಮ ಖಾತೆಯನ್ನು ಡಿಲೀಟ್ ಮಾಡಿರುವುದು ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದೆ.

2022ರ ಜನವರಿ 27 ರಂದು ಗೋವಾದಲ್ಲಿ ಬೆಂಗಳೂರು ಮೂಲದ ಉದ್ಯಮಿ ಸೂರಜ್ ನಂಬಿಯಾರ್ ಅವರನ್ನು ಮೌನಿ ವಿವಾಹವಾಗಿದ್ದರು. ಮಲಯಾಳಿ ಮತ್ತು ಬಂಗಾಳಿ ಸಂಪ್ರದಾಯದಂತೆ ಈ ಅದ್ಧೂರಿ ವಿವಾಹ ನೆರವೇರಿತ್ತು. ಪ್ರಸ್ತುತ ಈ ಜೋಡಿಯ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತುಗಳು ಕೇಳಿಬರುತ್ತಿದ್ದು, ಮುಂದಿನ ದಿನಗಳಲ್ಲಿ ನಟಿ ಈ ಬಗ್ಗೆ ಅಧಿಕೃತವಾಗಿ ಸ್ಪಷ್ಟನೆ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
“ಸನ್‌ಸ್ಕ್ರೀನ್ ಹಚ್ಚಿದ್ಯಾ ಅಂಧೇರೇ?”: ಅರ್ಶದೀಪ್ ಸಿಂಗ್ ಕಾಮೆಂಟ್‌ಗೆ ಕ್ರಿಕೆಟ್ ಫ್ಯಾನ್ಸ್ ಗರಂ: ಬಿಸಿಸಿಐ ಕ್ರಮಕ್ಕೆ ಒತ್ತಾಯBIG NEWS: ಬರೀ ಹಿಜಾಬ್ ಅಂತ ಯಾಕೆ ಮಾತನಾಡ್ತೀರಾ? ನಿಮಗೆ ಯಾಕೆ ಜನಿವಾರ ಕಾಣಿಸಲಿಲ್ವಾ? ಶಿಕ್ಷಣ ಸಚಿವ ಮಧು ಬಂಗಾರಪ್ಪ ಗರಂಯೋಗೇಶ್ ಗೌಡ ಹತ್ಯೆ ಪ್ರಕರಣ: ಗಂಭೀರ ಆರೋಪವಿದೆ ಸುಲಭವಾಗಿ ಜಾಮೀನು ಪರಿಗಣಿಸಲಾಗದು: ಮಾಜಿ ಪೊಲೀಸ್ ಅಧಿಕಾರಿಗೆ ಹೈಕೋರ್ಟ್ ತಾಕೀತುBIG NEWS: ಕಾಂಗ್ರೆಸ್ ಸರ್ಕಾರಕ್ಕೆ ಹುಚ್ಚು ಹಿಡಿದಿದೆ: ಬೈ ಎಲೆಕ್ಷನ್ ಗೆದ್ದ ಅಮಲಿನಲ್ಲಿ ಈ ರೀತಿ ಆದೇಶ ಹೊರಡಿಸಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿಇಂಧನ ಉಳಿತಾಯಕ್ಕೆ ದೆಹಲಿ ಸರ್ಕಾರದ ಬಿಗ್‌ ಪ್ಲಾನ್: ವಾರದಲ್ಲಿ 2 ದಿನ WFH, ಅಧಿಕಾರಿಗಳ ವಿದೇಶ ಪ್ರವಾಸಕ್ಕೆ ಬ್ರೇಕ್BREAKING : ಬ್ರಿಕ್ಸ್ ಸಭೆ : ದೆಹಲಿಯಲ್ಲಿ ರಷ್ಯಾ-ಇರಾನ್ ವಿದೇಶಾಂಗ ಸಚಿವರ ಜೊತೆ ಪ್ರಧಾನಿ ಮೋದಿ ಮಾತುಕತೆ..!BREAKING : ತಮಿಳುನಾಡಿನಲ್ಲಿ ‘ಮದ್ಯ’ ಖರೀದಿಸಲು ಇನ್ಮುಂದೆ 21 ವರ್ಷ ಕಡ್ಡಾಯ ; ಸಿಎಂ ದಳಪತಿ ವಿಜಯ್ ಆದೇಶSHOCKING : ಬಿರುಗಾಳಿ ಅಬ್ಬರಕ್ಕೆ ತಗಡಿನ ಶೀಟ್‌ ಸಮೇತ ಆಕಾಶಕ್ಕೆ ಹಾರಿದ ಯುವಕ ; ಭಯಾನಕ ವೀಡಿಯೋ ವೈರಲ್ |WATCH VIDEOBREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ನಾಳೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರಹಿಜಾಬ್ ಧರಿಸಿ ಬಂದರೆ ರಾಜ್ಯದ ಎಲ್ಲಾ ಶಾಲಾ-ಕಾಲೇಜು ಕೇಸರಿಮಯವಾಗಲಿದೆ: ಮಾಜಿ ಸಚಿವ ಈಶ್ವರಪ್ಪ ಎಚ್ಚರಿಕೆ