LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ನಿಯಂತ್ರಣಕ್ಕೆ ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್: ಸಚಿವ ಸಂತೋಷ್ ಲಾಡ್

ಧಾರವಾಡ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್ ಮಾಡಲಾಗಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ, ಅದಕ್ಕೆ ಕುಮ್ಮಕ್ಕು ನೀಡುವ ಮತ್ತು ಡ್ರಗ್ಸ್, ಗಾಂಜಾ, ಅಫೀಮು ಪ್ರಕರಣಗಳಲ್ಲಿ ಸಿಗುವ ವ್ಯಕ್ತಿಗಳಿಗೆ ಕಾನೂನಾತ್ಮಕವಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಧಾರವಾಡ ಜಿಲ್ಲೆಯನ್ನು ಡ್ರಗ್ಸ್, ಗಾಂಜಾ ಮತ್ತು ಅಪರಾಧ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲ ಹಂತದ ಪೊಲೀಸ್ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಹೇಳಿದರು.

ಅವರು ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜಿಲ್ಲಾ ಹಾಗೂ ಮಹಾನಗರ ಪೊಲೀಸ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು.

ಕಳೆದ ಐದಾರು ತಿಂಗಳಿಂದ ಅಪರಾಧಗಳ ಸಂಖ್ಯೆ ಕಡಿಮೆ ಆಗಿದ್ದರೂ ಸಂಪೂರ್ಣ ನಿಯಂತ್ರಣವಾಗುತ್ತಿಲ್ಲ. ಡ್ರಗ್ಸ್, ಗಾಂಜಾ ಸೇವನೆ, ಮಾರಾಟ ಕಡಿಮೆ ಆಗಿದ್ದರೂ ಸಂಪೂರ್ಣ ನಿಲ್ಲುತ್ತಿಲ್ಲ. ಕೆಳಮಟ್ಟದಿಂದ ಪೆÇಲೀಸ್ ಅಧಿಕಾರಿಗಳು ಪ್ರತಿ ಪ್ರಕರಣವನ್ನು ಕೂಲಂಕುಷವಾಗಿ ಪರಿಶೀಲಿಸಿ, ತನಿಖೆ ಮಾಡಿ, ನಿಜವಾದ ಅಪರಾಧಿಗಳ ಮೇಲೆ ಕ್ರಮ ಜರುಗಿಸಬೇಕು. ಅಪರಾಧಿ ಕೃತ್ಯದ ಮನೊಭಾವದವರಿಗೆ ಪೆÇಲೀಸ್ ಖದರು ತೋರಿಸಿ, ನಿಯಮಾನುಸಾರ ಕಾನೂನು ಕ್ರಮ ಜರುಗಿಸಿ ಎಂದು ಸಚಿವರು ತಿಳಿಸಿದರು.

ಕಾಲೇಜು, ಸಾರ್ವಜನಿಕ ಸ್ಥಳ ಹಾಗೂ ಗ್ರಾಮ, ಪಟ್ಟಣ ಪ್ರದೇಶಗಳಲ್ಲಿ ಅಪರಾಧಿ ಡ್ರಗ್ಸ್, ಗಾಂಜಾ ಅಂತಹ ಅಫೀಮುಗಳ ಬಗ್ಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲಾ, ಕಾಲೇಜು ಶಿಕ್ಷಕರನ್ನು, ಸಮಾಜದ ಗಣ್ಯ ವ್ಯಕ್ತಿಗಳನ್ನು, ಜನಾಭಿಪ್ರಾಯ ರೂಪಿಸುವವರನ್ನು ಅಪರಾಧಮುಕ್ತ ಜಿಲ್ಲೆ ಮಾಡುವ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಪೊಲೀಸ್ ಅಧೀಕ್ಷಕರು ಮತ್ತು ಠಾಣಾ, ವೃತ್ತ ಮಟ್ಟದ ಅಧಿಕಾರಿಗಳು ರಾತ್ರಿ ವೇಳೆ ಜಿಲ್ಲೆಯಲ್ಲಿ ಸಂಚರಿಸಿ, ಅನಿರೀಕ್ಷಿತ ಭೇಟಿ ನೀಡಿ, ಶಾಂತಿ, ಕಾನೂನು ಸುವ್ಯವಸ್ಥೆ ಪರಿಶೀಲಿಸಬೇಕು. ಪ್ರತಿ ತಿಂಗಳು ಜಿಲ್ಲಾಧಿಕಾರಿಗಳು, ಪೆÇಲೀಸ್ ಆಯುಕ್ತರು, ಎಸ್.ಪಿ. ಅವರು ಖುದ್ದು ಪರಿಶೀಲಿಸಿ ತಮಗೆ ವರದಿ ಸಲ್ಲಿಸಬೇಕೆಂದು ಅವರು ಹೇಳಿದರು.

ಧಾರವಾಡ ಜಿಲ್ಲೆಯು ವಿದ್ಯಾವಂತರ ನಾಡು, ಸಾಂಸ್ಕೃತಿಕ ಬಿಡು, ಸಾಹಿತ್ಯ, ಸಂಸ್ಕೃತಿಯ ನೆಲ ಎಂಬುದು ಮರುಕಳಿಸುವಂತೆ ನಾವೇಲ್ಲರೂ ಕೆಲಸ ಮಾಡುವ ಅಗತ್ಯವಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯವಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಸಿ, ಜಿಲ್ಲಾಡಳಿತ ಕಾರ್ಯೋನ್ಮುಖವಾಗಬೇಕು ಎಂದು ಸಚಿವರು ಸಲಹೆ ನೀಡಿದರು.

ಅಪರಾಧಿಗಳು, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗವಹಿಸುವವರು, ಶಾಂತಿ, ಸುವ್ಯಸ್ಥೆಗೆ ದಕ್ಕೆ ತರುವವರ ಮೇಲೆ ಮುಲಾಜು ಇಲ್ಲದೆ ಕ್ರಮಕೈಗೊಳ್ಳಿ. ಯಾರ ಶಿಫಾರಸ್ಸು, ಒತ್ತಡಗಳಿಗೆ ಒಳಗಾಗದೇ ನಿಯಮಾನುಸಾರ ಕಾನೂನು ಕ್ರಮಕೈಗೊಳ್ಳಿ. ಧಾರವಾಡ ಜಿಲ್ಲೆ ಆದಷ್ಟು ಬೇಗನೆ ಡ್ರಗ್ಸ್, ಗಾಂಜಾ ಹಾಗೂ ಅಪರಾಧ ಮುಕ್ತ ಜಿಲ್ಲೆಯಾಗಿ ರೂಪಗೊಳ್ಳಬೇಕು. ಇದಕ್ಕೆ ನಾನು ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರ, ಜನಪ್ರತಿನಿಧಿಗಳ ಸಹಕಾರ, ಮಾರ್ಗದರ್ಶನ ಇರುತ್ತದೆ ಎಂದು ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ವೇದಿಕೆಯಲ್ಲಿದ್ದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪ ಪೊಲೀಸ್ ಆಯುಕ್ತರಾದ ರವೀಶ ಸಿ.ಆರ್. ಮತ್ತು ಶೃತಿ ಎನ್.ಎಸ್. ಅವರು ಮಾತನಾಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಸೇರಿದಂತೆ ನಾಗರಿಕ ಪೊಲೀಸ್, ಸೈಬರ್ ಕ್ರೈಂ, ಅಬಕಾರಿ ಪೊಲೀಸ್, ಸಂಚಾರಿ  ಪೊಲೀಸ್, ರೈಲ್ವೆ ಪೊಲೀಸ್ ಇಲಾಖೆಗಳ ವಿವಿಧ ಹಂತದ ಅಧಿಕಾರಿಗಳು ಭಾಗವಹಿಸಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್