LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ: ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ಬೇಧ ಭಾವ ಸೃಷ್ಟಿಸಲು ಸರ್ಕಾರವೇ ಮುಂದಾಗಿರುವುದು ಖಂಡನೀಯ: ಸಂಸದ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಶಾಲಾ ಸಮವಸ್ತ್ರ ವಿಚಾರವಾಗಿ ಹಿಜಾಬ್ ಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅವಕಾಶ ನೀಡಿರುವುದಕ್ಕೆ ಮಾಜಿ ಸಿಎಂ, ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರ ಯಾವುದೇ ಬೇಡಿಕೆ ಇಲ್ಲದಿದ್ದರೂ ಕೂಡ ಅತ್ಯಂತ ಶಾಂತಿ ಸುವ್ಯವಸ್ಥೆಯಿಂದ ಶಿಕ್ಷಣ ವ್ಯವಸ್ಥೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿ ಧರ್ಮದ ಆಧಾರದಲ್ಲಿ ಮಕ್ಕಳಲ್ಲಿ ಬೇಧ ಭಾವ ಹುಟ್ಟುವ ತುಷ್ಟೀಕರಣಕ್ಕಾಗಿ ಈ ಆಜ್ಞೆಯನ್ನು ಮಾಡಿದೆ. ಇದನ್ನು ಹಿಂಪಡೆಯದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಆಗುವ ಆತಂಕ , ಭೆಧ ಭಾವಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, 1980 ರ ಶಾಲಾ ಸಮವಸ್ತ್ರ ಕಾನೂನು ಅಡಿಯಲ್ಲಿ ನಾವು ಆ ಸ್ಪಷ್ಟೀಕರಣದ ಆದೇಶವನ್ನು ಮಾಡಿದ್ದೇವು. ಅದನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿತ್ತು. ಸುಪ್ರೀಂ ಕೋರ್ಟ್ ನಲ್ಲಿಯೂ ಅದು ವಿಭಜಿತ ತೀರ್ಪು ಆಗಿತ್ತು. ಈ ಪ್ರಕರಣ ಇನ್ನೂ ಸುಪ್ರೀಂ ಕೋರ್ಟ್ ನಲ್ಲಿ ಇರುವಾಗಲೇ ಮಕ್ಕಳಲ್ಲಿ ಮತ್ತೆ ಬೇಧ ಭಾವದ ಆತಂಕವನ್ನು ಮೂಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹದಗೆಡಿಸಿದೆ. ಯಾವುದೇ ಸ್ಪಷ್ಟವಾದ ನೀತಿ ಇಲ್ಲ. ಯಾವುದೇ ವಿದ್ಯಾರ್ಜನೆ ಆಗುತ್ತಿಲ್ಲ. ಶಿಕ್ಷಕರ ಕೊರತೆ ಇದೆ. ಇಂತಹದನ್ನು ಮುಚ್ಚಿಕೊಳ್ಳಲು ಇಂತಹ ಆದೇಶ ಮಾಡಿದ್ದಾರೆ. ರಾಜ್ಯ ಸರ್ಕಾರಕ್ಕೆ ಮಾಡಲು ಬೇಕಾದಷ್ಟು ಕೆಲಸ ಇದೆ. ಅದನ್ನು ಬಿಟ್ಟು ಈ ರೀತಿಯ ಆದೇಶ ಮಾಡಿದ್ದಾರೆ. ಯಾತಕ್ಕಾಗಿ ಇದನ್ನು ತಂದಿದ್ದಾರೆ. ಎನ್ನುವ ಪ್ರಶ್ನೆಗೆ ಉತ್ತರ ಹೇಳಬೇಕು. ಈಗ ಏಕಾಏಕಿ ಮಾಡಿರುವುದು ತುಷ್ಟೀಕರಣದ ರಾಜಕಾರಣ ಬಿಟ್ಟರೇ ಮತ್ತೇನೂ ಇದರಲ್ಲಿ ಕಾಣುತ್ತಿಲ್ಲ ಎಂದು ಹೇಳಿದ್ದಾರೆ.

ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೇ ಸೌದಿ ಅರೇಬಿಯಾ, ಇರಾನ್ ಸೇರಿದಂತೆ ಇತರ ದೇಶದಲ್ಲಿ ಹೆಣ್ಣು ಮಕ್ಕಳು ಹಿಜಾಬ್ ತೊರೆದು ತಮ್ಮ ನಿತ್ಯ ಜೀವನ ನಡೆಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯದಲ್ಲಿ ಮಾತ್ರ ಹೆಣ್ಣುಮಕ್ಕಳಿಗೆ ಹಿಂದುಳಿಕೆಯ ವಿಚಾರ ಇಟ್ಟುಕೊಂಡು ಕಾನೂನು ಮಾಡಿರುವುದು ಸೂಕ್ತ ಅಲ್ಲ ಇದನ್ನು ಹಿಂಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಆಗುವ ಆತಂಕ ಭೆಧಭಾವಕ್ಕೆ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದಿದ್ದಾರೆ.

ಕಾನೂನು ರೀತಿಯಲ್ಲಿ ರಾಜ್ಯ ಸರ್ಕಾರವೇ ವಿವಾದ ಹುಟ್ಟು ಹಾಕಿದೆ. ಇದು ನಾಗರಿಕ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಇದು ಜವಾಬ್ದಾರಿಯಲ್ಲ. ಅತ್ಯಂತ ಬೇಜವಾಬ್ದಾರಿಯ ನಿರ್ಣಯ ಎಂದು ವಾಗ್ದಾಳಿ ನಡೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಸಿದ್ಧರಾಮಯ್ಯ ಮುನಿಸಿನಿಂದ ಕೈತಪ್ಪಿದ ಸಚಿವ ಸ್ಥಾನ..? ಮನವೊಲಿಸಲು ಜಮೀರ್ ಅಹ್ಮದ್ ಕಸರತ್ತುಇಸ್ರೇಲ್, ಅಮೆರಿಕ ದಾಳಿಯಲ್ಲಿ ಮೃತಪಟ್ಟ 131 ದಿನಗಳ ನಂತರ ಜು. 9ರಂದು ಇರಾನ್ ಸುಪ್ರೀಂ ಲೀಡರ್ ಖಮೇನಿ ಅಂತ್ಯಕ್ರಿಯೆSHOCKING: ಅಕ್ರಮ ಕಲ್ಲಿದ್ದಲು ಗಣಿಯಲ್ಲಿ ವಿಷಕಾರಿ ಅನಿಲ ಸೇವಿಸಿ ನಾಲ್ವರು ಸಾವುವಿವಾಹಿತೆಗೆ ಮತ್ತು ಬರುವ ಪಾನೀಯ ಕುಡಿಸಿ ರೇಪ್, ಬೆತ್ತಲೆ ಚಿತ್ರ ಸೆರೆಹಿಡಿದು ಬ್ಲಾಕ್ ಮೇಲ್BREAKING: ಇನ್ನು ಯಾರೂ ಒಂದು ರೂಪಾಯಿ ಲಂಚ ಕೊಡಬೇಕಿಲ್ಲ: ಭ್ರಷ್ಟಾಚಾರ ಮುಕ್ತ ರಾಜ್ಯವಾಗಿಸಲು ಸಿಎಂ ಡಿಕೆ ಮಹತ್ವದ ಹೆಜ್ಜೆಶಿವಮೊಗ್ಗ: ಕೊಳೆತ ಸ್ಥಿತಿಯಲ್ಲಿ ಮಹಿಳೆ, ಸಾಕು ನಾಯಿ ಶವ ಪತ್ತೆಧರ್ಮಸ್ಥಳ ಬುರುಡೆ ಗ್ಯಾಂಗ್ ಪ್ರಕರಣ: ಚಿನ್ನಯ್ಯನ ಬ್ರೇನ್ ಮ್ಯಾಪಿಂಗ್ ಹಾಗೂ ರಿಟ್ ಅರ್ಜಿ ತನಿಖೆ ನಡೆಸುವಂತೆ SITಗೆ ಗಿರೀಶ್ ಮಟ್ಟಣ್ಣನವರ್ ದೂರುBREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳಿಗೆ ಮುಖ್ಯ ಮಾಹಿತಿ: ಯೋಜನೆ ಸೌಲಭ್ಯ ಪಡೆಯಲು ಮತ್ತೆ ಅರ್ಜಿ ಸಲ್ಲಿಸಬೇಕು: ಸಿಎಂ ಡಿಕೆ ಮಾಹಿತಿದೇಶದಲ್ಲಿ ನಕ್ಸಲ್ ಚಟುವಟಿಕೆಗಳಿಗೆ ವಿದೇಶದಿಂದ ಕೋಟ್ಯಂತರ ರೂ ಅಕ್ರಮ ಫಂಡಿಂಗ್ ಆರೋಪ: ಕರ್ನಾಟಕದ ನಾಲ್ವರು ಸೇರಿ 7 ಜನರ ವಿರುದ್ಧ FIR ದಾಖಲುಸಂಬಳ ಪಡೆಯುವ ಪ್ರತಿಯೊಬ್ಬ ಉದ್ಯೋಗಿಯೂ  ತಿಳಿಯಲೇಬೇಕಾದ ಸೀಕ್ರೆಟ್ ಪಿಎಫ್ ಕಟ್ ಆದ್ರೆ ಸಿಗುತ್ತೆ ₹7 ಲಕ್ಷದ ಬಿಗ್ ಇನ್ಶೂರೆನ್ಸ್ ಬೆನಿಫಿಟ್